ಕಲಬುರಗಿ: ದ್ವಿಚಕ್ರವಾಹನಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೋಲಿಸರು ಓರ್ವನಿಗೆ ಬಂಧಿಸಿ, ಆರು ದ್ವಿಚಕ್ರವಾಹನಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಧಿತನಿಗೆ ನಗರದ ಆಜಾದಪೂರ್ ರಸ್ತೆಯ ಉಮರ್ ಕಾಲೋನಿಯ ಮೆಕ್ಯಾನಿಕ್ ಶೇಖ್ ಸಿದ್ದಿಕಿ ತಂದೆ ಶೇಖ್ ಇಸ್ಮಾಯಿಲ್ ಬಾಗವಾನ್ (29) ಎಂದು ಗುರುತಿಸಲಾಗಿದೆ.
ಬಂಧಿತ ಶೇಖ್ ಸಿದ್ದಕಿ ಸಹಚರ ಶೇಖ್ ಇಸ್ಮಾಯಿಲ್ ತಂದೆ ಖಾಜಾ ಮೈನೋದ್ದೀನ್ ಜಮಾದಾರ್ ಜತೆ ಸೇರಿ ಸುಮಾರು ಆರು ಲಕ್ಷ ರೂ.ಗಳ ಮೌಲ್ಯದ ೧೯ ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡಿದ್ದಾಗಿ ಪೋಲಿಸರ ವಿಚಾರಣೆಯಲ್ಲಿ ಬಾಯಿ ಬಿಟ್ಟಿದ್ದಾನೆ.
ಬಂಧಿತ ಶೇಖ್ ಇಸ್ಮಾಯಿಲ್ನಿಂದ 1.80 ಲಕ್ಷ ರೂ.ಗಳ ಮೌಲ್ಯದ ಆರು ದ್ವಿಚಕ್ರವಾಹನಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. ಖಚಿತ ಭಾತ್ಮಿ ಮೇರೆಗೆ ಚೌಕ್ ಪೋಲಿಸ್ ಠಾಣೆಯ ಪಿಐ ಶಕೀಲ್ ಅಹ್ಮದ್ ಅಂಗಡಿ, ಸಿಬ್ಬಂದಿಗಳಾದ ಸಿರಾಜೋದ್ದೀನ್ ಪಟೇಲ್, ನಾಗೇಂದ್ರ, ಉಮೇಶ್, ರಾಜಕುಮಾರ್, ಸಿದ್ರಾಮಯ್ಯ, ಸೈಯದ್ ತೌಶಿಫ್ ಅವರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…