ವಾಡಿ: 30 ರಂದು ಯೋಗ ಅಭಿನಂದನಾ ಪತ್ರ ವಿತರಣೆ

0
44

ವಾಡಿ: ಪತಂಜಲಿ ಯೋಗ ಸಮಿತಿ ವತಿಯಿಂದ ಪಟ್ಟಣದ ಅಂಬೇಡ್ಕರ್ ಸ್ಮಾರಕ ಭವನದಲ್ಲಿ ಜು.೩೦ ರಂದು ಬೆಳಗ್ಗೆ ೧೦:೩೦ಕ್ಕೆ ಯೋಗ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.

ಸ್ಥಳೀಯ ಯೋಗಾಸಕ್ತರನ್ನು ಗುರುತಿಸಿ ಅಭಿನಂದನಾ ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸುವ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ. ಪತಂಜಲಿ ಯೋಗ ಪೀಠದ ಜಿಲ್ಲಾಧ್ಯಕ್ಷ ಶಿವಾನಂದ ಸಾಲಿಮಠ ಕಾರ್ಯಕ್ರಮ ಉದ್ಘಾಟಿಸುವರು. ಕಲಬುರಗಿ ಶರಣಬಸವೇಶ್ವರ ವಿವಿಯ ಪ್ರಾಧ್ಯಾಪಕರಾದ ಶರಣಬಸಪ್ಪ ಪಾಟೀಲ ಅವರು ’ಆರೋಗ್ಯದಿಂದ ಯೋಗ’ ವಿಷಯ ಕುರಿತು ಉಪನ್ಯಾಸ ನೀಡುವರು.

Contact Your\'s Advertisement; 9902492681

ಪತಂಜಲಿ ಯೋಗ ಸಮಿತಿಯ ಜಿಲ್ಲಾ ಮಹಿಳಾ ಪ್ರಭಾರಿ ಸುಮಂಗಲಾ ಚಕ್ರವರ್ತಿ ಹಾಗೂ ಪುರಸಭೆ ಮುಖ್ಯಾಧಿಕಾರಿ ವಿಠ್ಠಲ್ ಹಾದಿಮನಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ನಗರ ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ ಅಧ್ಯಕ್ಷತೆ ವಹಿಸುವರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here