ಕಂಪ್ಲಿ: ಬಿಇಓ ಕಚೇರಿ ಸ್ಥಾಪಿಸುವಂತೆ ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ಮನವಿ

ಕಂಪ್ಲಿ: ಬಳ್ಳಾರಿ ಜಿಲ್ಲೆಯ ನೂತನ ಕಂಪ್ಲಿ ತಾಲೂಕು ಕೇಂದ್ರ ಸ್ಥಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ (ಬಿಇಓ) ಕಚೇರಿಯನ್ನ ಸ್ಥಾಪಿಸುವಂತೆ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಿಗೆ ಮತ್ತು ಪ್ರಧಾನ ಕಾರ್ಯದರ್ಶಿಗಳಿಗೆ ಬರೆದ ಪತ್ರವನ್ನು ಕಂಪ್ಲಿಯ ತಹಸೀಲ್ದಾರರಾದ ಗೌಸಿಯಾ ಬೇಗಂರವರ ಮುಖಾಂತರ ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ಕಂಪ್ಲಿ ತಾಲೂಕು ಘಟಕದಿಂದ ಪ್ರತಿಭಟನಾ ಮನವಿ ಸಲ್ಲಿಸಿದರು!

ಈ ಸಂದರ್ಭದಲ್ಲಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ಕಂಪ್ಲಿ ತಾಲೂಕು ಅಧ್ಯಕ್ಷ ಸೈಯದ್ ವಾರೀಶ್ ಎನ್ ಮಾತನಾಡಿ ನೂತನ ತಾಲೂಕು ಕೇಂದ್ರವಾದ ಕಂಪ್ಲಿ ನಗರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸ್ಥಾಪಿಸಬೇಕು, ಕಛೇರಿ ಸ್ಥಾಪನೆಗೆ ಸರ್ಕಾರಿ ಸ್ಥಳ, ಸರ್ಕಾರಿ ಕಟ್ಟಡಗಳು ಲಭ್ಯವಿಲ್ಲದಿದ್ದಲ್ಲಿ ಖಾಸಗಿ ಕಟ್ಟಡವನ್ನು ಬಾಡಿಗೆ ರೀತಿ ಪಡೆದುಕೊಂಡು ಕಛೇರಿ ಸ್ಥಾಪಿಸಬೇಕು, ಇತರೆ ಕಾರಣಗಳನ್ನು ವ್ಯಕ್ತಪಡಿಸಿ ಪಕ್ಕದ ಕುರುಗೋಡು ತಾಲೂಕಿಗೆ ಅಥವಾ ಬಳ್ಳಾರಿ ಹಾಗೂ ಇತರೆ ಯಾವುದೇ ತಾಲೂಕಿಗೆ ಬಿಇಓ ಕಛೇರಿಯನ್ನು ಹೊಂದಿಸುವುದಾಗಲೀ, ಸೇರ್ಪಡೆಗೊಳಿಸುವ ಕ್ರಮ ಕೈಗೊಳ್ಳಬಾರದೆಂದರು,

ನಂತರ ಗೌರವಾಧ್ಯಕ್ಷರಾದ ಹೇಮಂತ್ ಕುಮಾರ್ ದಾನಪ್ಪ ಮಾತನಾಡಿ ಕಂಪ್ಲಿ ತಾಲೂಕಿನಲ್ಲಿ ಬಿಇಓ ಕಛೇರಿ ಸ್ಥಾಪಿಸಲು ತಾಂತ್ರಿಕ ತೊಂದರೆಗಳಿದ್ದಲ್ಲಿ ಕಂಪ್ಲಿ ತಾಲೂಕಿನಲ್ಲಿ ಕಛೇರಿ ಸ್ಥಾಪಿಸುವವರೆಗೂ ಹೊಸಪೇಟೆಯಲ್ಲಿಯೇ ಮುಂದುವರೆಸಬೇಕು ಕಾರಣ ಹೊಸಪೇಟೆಯು ಕಂಪ್ಲಿ ತಾಲೂಕಿನಿಂದ ಕೇವಲ 28 ಕೀಲೋ ಮೀಟರ್ ಸಮೀಪವಿದ್ದು ಕೇವಲ 30 ನಿಮಿಷಗಳಲ್ಲಿ ಸಂಚರಿಸುವ ಸಂಚಾರ ವ್ಯವಸ್ಥೆ ತುಂಬಾ ಅತ್ಯುತ್ತಮವಾಗಿದ್ದು ದಿನದ 24 ಗಂಟೆಯು ಸಂಚರಿಸಲು ಸಾರ್ವಜನಿಕರಿಗೆ ಸಂಚಾರ ವ್ಯವಸ್ಥೆ ತುಂಬಾ ಅನುಕೂಲವಿದ್ದು ಈ ಭಾಗದ ಜನರಿಗೆ ಸರ್ಕಾರಿ ಸೇವೆ ಪಡೆಯಲು ಯಾವುದೇ ಹೊರೆಯಾಗುತ್ತಿರುವುದಿಲ್ಲಾ, ಕಂಪ್ಲಿ ತಾಲೂಕು ಹೊರತು ಪಡಿಸಿ ಕುರುಗೋಡು ತಾಲೂಕು ಅಥವಾ ಇತರೆ ಬೇರೆ ತಾಲೂಕಿನೊಂದಿಗೆ ಹೊಂದಿಸಿದರೆ / ಸೇರ್ಪಡಿಸಿದರೆ ಕಂಪ್ಲಿ ತಾಲೂಕಿನ ಕೊನೆಯ ಗ್ರಾಮದಿಂದ 65 ರಿಂದ 70 ಕೀಲೋ ಮೀಟರ್‌ಗೂ ಅಧಿಕ ದೂರವಾಗುವುದಲ್ಲದೆ ಸಾರ್ವಜನಿಕರಿಗೆ ಆರ್ಥಿಕ ಹೊರೆಯೊಂದಿಗೆ ಸಮಯ ವ್ಯರ್ಥವಾಗುತ್ತದೆ ಹಾಗೂ ಈ ತಾಲೂಕಿನ ಜನರಿಗೆ ಅನ್ಯಾಯವಾಗುತ್ತದೆಂದರು

ಈ ಸಂಧರ್ಭದಲ್ಲಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಸಂಘಟನಾ ಕಾರ್ಯದರ್ಶಿ ಮನೋಜ್ ಕುಮಾರ್ ಡಿ, ಸಹ ಕಾರ್ಯದರ್ಶಿ ವೆಂಕಟೇಶ್ ಎಚ್, ಖಜಾಂಜಿ ರೋಷನ್, ಕಂಪ್ಲಿ ನಗರ ಘಟಕದ ಅಧ್ಯಕ್ಷ ಬಡಗಿ ದೊಡ್ಡ ಬಸವರಾಜ್ ಮುಖಂಡರಾದ ಮಂಜುನಾಥ್,ಗಂಗಾವತಿ ಕೃಷ್ಣ,ಜೀಲಾನ್,ಮೌಲ ಹುಸೈನ್,ಪಂಪನ ಗೌಡ,ಪ್ರೇಮ್ ಕುಮಾರ್ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420