ಕಲಬುರಗಿ: ವಿದೇಶದಲ್ಲಿ ಉದ್ಯೋಗಕ್ಕಾಗಿ ಆಗಸ್ಟ್ 7ರಂದು ಸಂದರ್ಶನ

ಕಲಬುರಗಿ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ (ಕೆಎಸ್‍ಡಿಸಿ) ಉದಯೋನ್ಮುಖ ಯೋಜನೆಯಾದ ಅಂತರರಾಷ್ಟ್ರೀಯ ವಲಸೆ ಕೇಂದ್ರ ಕರ್ನಾಟಕ ಮುಖಾಂತರ ದುಬೈನಲ್ಲಿರುವ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ 100 ಜನ ಟೈಲ್ ಮೇಸ್ತ್ರಿಗಳು ಹಾಗೂ 100 ಮಾರ್ಬಲ್ ಮೇಸ್ತ್ರಿಗಳ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಆಗಸ್ಟ್ 7 ರಂದು ರವಿವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಗುಲಬರ್ಗಾ ಟೆಕ್ನಿಕಲ್ ಟ್ರೇನಿಂಗ್ ಇನ್‍ಸ್ಟಿಟ್ಯೂಟ್ ಪ್ರೈ.ಲೀ., ಕೆಐಎಡಿಬಿ ಕೈಗಾರಿಕಾ ಪ್ರದೇಶ, 2ನೇ ಹಂತ, ಬೇಲೂರು ಕ್ರಾಸ್ ಸಮೀಪ, ಮೈಲಾರಲಿಂಗ ದಾಲ್‍ಮಿಲ್ ಕಂಪೌಂಡ್, ಕಲಬುರಗಿ ಇಲ್ಲಿ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್‍ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮುರಳೀಧರ್ ರತ್ನಗಿರಿ ಅವರು ತಿಳಿಸಿದ್ದಾರೆ.

ಟೈಲ್ ಮೇಸ್ತ್ರೀ (Tiles Masons) ಹುದ್ದೆಗೆ 2 ವರ್ಷಕ್ಕಿಂತ ಹೆಚ್ಚು ಅನುಭವ ಉಳ್ಳವರಿಗೆ 1000-1200 ಯುಎಇ ದಿರ್ಹಾಮ್ (ಭಾರತೀಯ ರೂ.21,720-26,064) ವೇತನ ಹಾಗೂ ಹೊಸಬರಿಗೆ 850-950 ಯುಎಇ ದಿರ್ಹಾಮ್ (ಭಾರತೀಯ ರೂ.18,462-20,634) ವೇತನ ಇರುತ್ತದೆ.

ಮಾರ್ಬಲ್ ಮೇಸ್ತ್ರೀ (Marble Masons) ಹುದ್ದೆಗೆ 2 ವರ್ಷ ಕ್ಕಿಂತ ಹೆಚ್ಚು ಅನುಭವ ಉಳ್ಳವರಿಗೆ 1000-1200 ಯುಎಇ ದಿರ್ಹಾಮ್ (ಭಾರತೀಯ ರೂ.21,720-26,064) ವೇತನ ಹಾಗೂ ಹೊಸಬರಿಗೆ 850-950 ಯುಎಇ ದಿರ್ಹಾಮ್ (ಭಾರತೀಯ ರೂ.18,462-20,634) ವೇತನ ನೀಡಲಾಗುತ್ತದೆ. 2 ವರ್ಷಕ್ಕಿಂತ ಹೆಚ್ಚು ಅನುಭವ ಉಳ್ಳವರಿಗೆ ವಯೋಮಿತಿ 24 ರಿಂದ 32 ವರ್ಷದೊಳಗಿರಬೇಕು. ಹೊಸದಾಗಿ ಉದ್ಯೋಗಕ್ಕೆ ಸೇರುವವರಿಗೆ ವಯೋಮಿತಿ 18 ರಿಂದ 23 ವರ್ಷದೊಳಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7506450851, 9731750800, 9632214436, www.kvtsdc.com ವೆಬ್‍ಸೈಟ್‍ನ್ನು, +918310100754, 080-29753007, kvtsdcora@karnataka.gov.in ಇ-ಮೇಲ್ ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420