ಕಲಬುರಗಿ: ಬೆಂಗಳೂರಿನ ನೇಮಕಾತಿ ವಲಯದ ಪ್ರಧಾನ ಕಚೇರಿ ಹಾಗೂ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಬೀದರಿನ ನೆಹರು ಸ್ಟೇಡಿಯಂನಲ್ಲಿ 2022ರ ಡಿಸೆಂಬರ್ 5 ರಿಂದ 22ರ ವರೆಗೆ ಅಗ್ನಿಪಥ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ.
ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ಮನ್ 10ನೇ ತರಗತಿ ತೇರ್ಗಡೆ, ಅಗ್ನಿವೀರ್ ಟ್ರೇಡ್ಸ್ಮೆನ್ 8ನೇ ತರಗತಿ ತೇರ್ಗಡೆ, ಅಗ್ನಿವೀರ್ ಕ್ಲರ್ಕ್ / ಸ್ಟೋರ್ ಕೀಪರ್ ಟೆಕ್ಲಿಕಲ್ ವಿಭಾಗಗಳಿಗೆ ನೇಮಕಾತಿ ರ್ಯಾಲಿಯನ್ನು ನಡೆಯಲಿದ್ದು, ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರ ಹಾಗೂ ಯಾದಗಿರಿ ಜಿಲ್ಲೆಗಳ ಅಭ್ಯರ್ಥಿಗಳು ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯ ನಿರ್ದೇಶಕ ಕರ್ನಲ್ ನಿಶಾಂತ ಶೆಟ್ಟಿ ತಿಳಿಸಿದ್ದಾರೆ.
ಅಭ್ಯರ್ಥಿಗಳು 2022ರ ಆಗಸ್ಟ್ 5 ರಿಂದ ಸೆಪ್ಟೆಂಬರ್ 3ರ ವರೆಗೆ joinindianarmy.nic.in ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಅವರ ನೋಂದಾಯಿತ ಇ-ಮೇಲ್ ವಿಳಾಸಕ್ಕೆ 2022ರ ನವೆಂಬರ್ 10 ರಿಂದ 20ರವರೆಗೆ ಕಳುಹಿಸಲಾಗುತ್ತದೆ. ನೇಮಕಾತಿ, ವಯೋಮಿತಿ, ವಿದ್ಯಾರ್ಹತೆ ಹಾಗೂ ಇತರೆ ಮಾನದಂಡ ಹಾಗೂ ಹೆಚ್ಚಿನ ಮಾಹಿತಿಗೆ ವೆಬ್ಸೈಟ್ ವೀಕ್ಷಿಸಲು ಕೋರಿದೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…