ಬಿಸಿ ಬಿಸಿ ಸುದ್ದಿ

ಜಲ ಜೀವನ್ ಮಿಷನ್ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಡಾ.ಗೀರಿಶ್ ಡಿ.ಬದೋಲೆ

ಕಲಬುರಗಿ: ಜಿಲ್ಲೆಯ ಜಲ ಜೀವನ್ ಮಿಷನ್ ಕಾರ್ಯಕ್ರಮ ಕೇಂದ್ರ ಸರಕಾರದ ಮಹತ್ವಕಾಂಕ್ಷೆ ಯೋಜನೆಯಾಗಿದ್ದು, ಈ ನಿಟ್ಟಿನಲ್ಲಿ ಕಾಮಗಾರಿಗಳನ್ನು ಗುಣ ಮಟ್ಟದಿಂದ ಕಾರ್ಯ ನಿರ್ವಹಿಸಿ ನಿಗದಿತ ಅವಧಿಯಲ್ಲಿ ಮುಗಿಸಿ ಹರ್ ಘರ್ ಜಲೋತ್ಸವ ಕಾರ್ಯಕ್ರಮ ಏರ್ಪಡಿಸಿ ಗ್ರಾಮ ಪಂಚಾಯತಗಳಿಗೆ ಹಸ್ತಾಂತರ ಮಾಡಬೇಕೆಂದರು ಎಂದು ಡಾ.ಗೀರಿಶ್ ಡಿ.ಬದೋಲೆ ಸೂಚನೆ ನೀಡಿದ್ದಾರೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿಭಾಗೀಯ ಕಚೇರಿಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡುತ್ತದಿಂದ ಅವರು ಜಲ ಜೀವನ್ ಮಿಷನ್ ಬ್ಯಾಚ್-೧ ರಿಂದ ಬ್ಯಾಚ್-೩ ರ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಬ್ಯಾಚ್ ೪ ರ ಡಿಪಿಆರ್ (ವಿಸ್ತೃತ ಯೋಜನಾ ವರದಿ) ಒಂದು ವಾರದಲ್ಲಿ ಸಲ್ಲಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಯೊಂದು ಮನೆಗಳ ಸರ್ವೇಯನ್ನು ಮಾಡಿ ಕಾರ್ಯಾತ್ಮಕ ಪ್ರತಿಯೊಂದು ಮನೆಗಳಿಗೆ ಮನೆ ನಳ ಸಂಪರ್ಕ ನೀಡಬೇಕೆಂದರು. ಮತ್ತು ಕಾಮಗಾರಿ ಗುಣ ಮಟ್ಟದಿಂದ ಕೂಡಿರಬೇಕೆಂದರು. ಒಂದು ವೇಳೆ ಕಾಮಗಾರಿ ಕಳಪೆ ಎಂದು ಕಂಡು ಬಂದಲ್ಲಿ ಸಂಬಂಧಿಸಿದ ಗುತ್ತಿಗೆದಾರರು ಮತ್ತು ಕಿರಿಯ ಅಭಿಯಂತರರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು. ಸಭೆಯಲ್ಲಿ ಕಾರ್ಯಪಾಲಕ ಅಭಿಯಂತರರು, ಬ್ಯಾಚ್-೧ ರಲ್ಲಿ ೨೫೪ ಕಾಮಗಾರಿಗಳು ಮುಕ್ತಾಯಗೊಂಡಿದೆ ಎಂದು ಸಭೆಗೆ ತಿಳಿಸಿದಾಗ ಕೂಡಲೇ ಎಲ್ಲ ಕಾಮಗಾರಿಗಳನ್ನು ೧೦ ದಿನದಲ್ಲಿ ಮುಗಿಸಬೇಕೆಂದು ತಿಳಿಸಿದರು.

ಬ್ಯಾಚ್ ೨ ಕಾಮಗಾರಿಗಳು ಸಹ ಟೆಂಡರ ಆಗಿದ್ದರು ಸಹ ಕಾಮಗಾರಿಗಳು ತ್ವರಿತವಾಗಿ ಪ್ರಾರಂಭಿಸುತ್ತಿಲ್ಲ ಏಕೆ ಎಂದು ಸಭೆಯಲ್ಲಿ ಚರ್ಚಿಸಿದರು. ಈ ಕೂಡಲೇ ಎಲ್ಲ ಕಾಮಗಾರಿಗಳು ಪ್ರಾರಂಭಿಸಿ ಎಂದು ಸಭೆ ತಾಕೀತು ಮಾಡಿದರು. ಇದೇ ಸಂದರ್ಭದಲ್ಲಿ ಕಾಮಗಾರಿ ಪೂರ್ಣಗೊಂಡ ನಂತರ ಮನೆ-ಮನೆಗೆ, ಶಾಲೆ, ಅಂಗನವಾಡಿ ಕಟ್ಟಡಗಳಿಗೆ ನಳ ನೀರು ಬರುತ್ತಿರುವುದನ್ನು ಖಾತ್ರಿ ಪಡಿಸಿಕೊಂದು ಸರ್ಕಾರದ ಆದೇಶ ಹಾಗೂ ನಿಯಮಾವಳಿಯಂತೆ ಆಗಸ್ಟ ೧೨ ರೊಳಗಾಗಿ ಹರ್ ಘರ್ ಜಲೋತ್ಸವ ಘೋಷಣೆ ಮಾಡಲು ತಿಳಿಸಿದರು.

ಈಗಾಗಲೇ ಎಲ್ಲಾ ೨೬೧ ಗ್ರಾಮ ಪಂಚಾಯತಿಗಳಿಗೆ ನೀರು ಪರೀಕ್ಷೆ ಮಾಡುವ ಕಿಟ್ ಗಳನ್ನು ನೀಡಿದ್ದು, ಈ ಕುರಿತು ಪ್ರತಿ ಗ್ರಾಮದಿಂದ ೫ ಜನ ಗ್ರಾಮ ನೀರು ಸರಬರಾಜು ಮತ್ತು ನೈರ್ಮಲ್ಯ ಸಮಿತಿ ಮಹಿಳೆಯರಿಗೆ ನೀರು ಪರೀಕ್ಷೆ ಮಾಡುವ (ಎಪ್.ಟಿ.ಕೆ ಕಿಟ್ ) ನೊಂದಣಿ ಮಾಡುವುದು ಕಡ್ಡಾಯವಾಗಿದ್ದು, ಆ ಗ್ರಾಮದಲ್ಲಿಯ ಕುಡಿಯುವ ಜಲ ಮೂಲಗಳನ್ನು ಪರೀಕ್ಷೆ ಮಾಡುವುದು ಇದರಿಂದ ಗ್ರಾಮಸ್ಥರು ಗುಣಮಟ್ಟದ ನೀರು ಕುಡಿಯುತ್ತಿದ್ದಾರೆಂದು ಖಾತ್ರಿಗೊಳ್ಳುವುದು. ಈ ನಿಟ್ಟಿನಲ್ಲಿ ಯಾವ ಗ್ರಾಮ ಪಂಚಾಯತ್ ಗಳು ಎಪ್.ಟಿ.ಕೆ ಕಿಟ್ ನೊಂದಣಿ ಮಾಡಿರುವುದಿಲ್ಲ ಅಂತಹ ತಾಲೂಕು ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದೆಂದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಲಬುರಗಿ ವಿಭಾಗೀಯ ಕಾರ್ಯಪಾಲಕ ಅಭಿಯಂತರರಾದ ಮಹಾದೇವ ಸಿಂಧೆ , ಜಲ ಜೀವನ ಮಿಷನ್ ಡಿಪಿಎಂ ಮತ್ತುವ ಜಿಲ್ಲಾ ಪಂಚಾಯತ್ ಕಲಬುರಗಿ ಜಲ ಜೀವನ್ ಮಿಷನ್ ವ್ಯವಸ್ಥಾಪಕರಾದ ಮುಬೀನ್ ಎಲ್ಲಾ ಉಪವಿಭಾಗಗಳ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ೩ನೇ ಪಕ್ಷದ ಪರಿವೀಕ್ಷಣೆಯ ಏಜೆನ್ಸಿಗಳು, ಡಿಪಿಆರ್ ಏಜೆನ್ಸಿಗಳು, ಐಎಸ್‌ಎ ಮತ್ತು ಐಎಸ್‌ಆರ್ ಏಜೆನ್ಸಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

2 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

2 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

3 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

4 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

4 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

4 hours ago