ಹಗರಿಬೊಮ್ಮನಹಳ್ಳಿ: – ವಿಜಯನಗರ ಜಿಲ್ಲೆಯ ಮಧ್ಯಭಾಗದಲ್ಲಿರುವ ಹಾಗೂ ಎಲ್ಲಾ ತಾಲ್ಲೂಕು ಕೇಂದ್ರಗಳಿಗೂ 30 ರಿಂದ 35 ಕಿ.ಮೀ ಮಧ್ಯವಿರುವ ಹಗರಿಬೊಮ್ಮನಹಳ್ಳಿಗೆ ಎಲ್ಲಾ ವಿಭಾಗೀಯ ಕಛೇರಿಗಳನ್ನು ಸ್ಥಳಾಂತರಿಸಬೇಕೆಂದು ಕಾಂಗ್ರೆಸ್ ವಕ್ತಾರ ಪತ್ರೇಶ್ ಹಿರೇಮಠ್ ಹಾಗೂ ಅಹಿಂದ ವೇದಿಕೆಯ ಬುಡ್ಡಿ ಬಸವರಾಜ ಜಂಟಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಅವರು ಹಗರಿಬೊಮನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈಗಾಗಲೇ ಹೂವಿನಹಡಗಲಿ ಇದ್ದ ಡಿವೈಎಸ್ಪಿ ಕಛೇರಿ, ಪಿಡಬ್ಲುಡಿ, ಜಿ.ಪಂ ಇಂಜನಿಯರಿಂಗ್ ವಿಭಾಗೀಯ ಕಛೇರಿಗಳು ಹೊಸಪೇಟೆಗೆ ಸ್ಥಳಾಂತರಗೊಳ್ಳುತ್ತಿರುವುದು ಖಂಡನೀಯ ಇದರಿಂದ ಅಧಿಕಾರ ವಿಕೇಂದ್ರೀಕರಣ ಪರಿಕಲ್ಪನೆಗೆ ಧಕ್ಕೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಜಿಲ್ಲಾ ಕಛೇರಿಗಳನ್ನು ಹೊರತುಪಡಿಸಿ ಉಳಿದ ಎಸಿ ಕಛೇರಿ ಡಿವೈಎಸ್ಪಿ ಕಛೇರಿ, ಪಿಡಬ್ಲುಡಿ, ಜಿ.ಪಂ ಇಂಜನಿಯರಿಂಗ್, ಜಿಲ್ಲಾ ಆಸ್ಪತ್ರೆ, ಜೆಸ್ಕಾಂ ಉಗ್ರಾಣ, ಅರಣ್ಯ ಇಲಾಖೆ, ಕೆ.ಆರ್.ಐ.ಡಿ.ಎಲ್ ಸೇರಿದಂತೆ ಎಲ್ಲಾ ವಿಭಾಗೀಯ ಕಛೇರಿಗಳನ್ನು ಹಬೊಹಳ್ಳಿಯಲ್ಲಿ ಸ್ಥಾಪಿಸಬೇಕೆಂದು ಆಗ್ರಹಿಸಿದ ಅವರು ಇದರಿಂದ ಜನಸಾಮಾನ್ಯರಿಗೆ ತುಂಬಾ ಅನುಕೂಲವಾಗಲಿದೆ ಎಂದರು.
ಜಿಲ್ಲಾಧಿಕಾರಿಗಳು ಮತ್ತು ಉಸ್ತುವಾರಿ ಸಚಿವರಿಗೆ ಕಛೇರಿಗಳ ಸ್ಥಳಾಂತರಕ್ಕೆ ಮನವಿ ಪತ್ರ ಸಲ್ಲಿಸುತ್ತಿದ್ದು, ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಸಂಘ- ಸಂಸ್ಥೆಗಳ ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಪಕ್ಷಾತೀತವಾಗಿ ಹೊಸಪೇಟೆ ವರೆಗೂ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಪತ್ರೇಶ್ ಮತ್ತು ಬುಡ್ಡಿ ಬಸವರಾಜ ಎಚ್ಚರಿಸಿದರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…