ಮೆಟ್ರಿಕ್ ಪೂರ್ವ, ನಂತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಮೆರಿಟ್-ಕಮ್-ಮೀನ್ಸ್ ಸ್ಕಾಲರ್‍ಶಿಪ್‍ಗಾಗಿ ಅಲ್ಪಸಂಖ್ಯಾತರ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ನ್ಯಾಷನಲ್ ಪೋರ್ಟಲ್‍ದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಭಕ್ತಮಾರ್ಕಂಡೇಯ ಅವರು ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ/ನಂತರದ ಹಾಗೂ ವೃತ್ತಿಪರ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ವಿದ್ಯಾರ್ಥಿ ವೇತನಕ್ಕಾಗಿ ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ (1ರಿಂದ 10ನೇ ತರಗತಿ) ಅರ್ಜಿ ಸಲ್ಲಿಕೆಗೆ 2022ರ ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ (ಪಿಯುಸಿ ದಿಂದ ಪಿಜಿ) ಹಾಗೂ ಮೆರಿಟ್-ಕಮ್-ಮೀನ್ಸ್ ಸ್ಕಾಲರ್‍ಶಿಪ್‍ಗಾಗಿ (ಎಲ್ಲಾ ವೃತ್ತಿಪರ ಕೋರ್ಸ್‍ಗಳು) ಅರ್ಜಿ ಸಲ್ಲಿಕೆಗೆ 2022ರ ಅಕ್ಟೋಬರ್ 31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ www.scholarship.gov.in ವೆಬ್‍ಸೈಟ್‍ನ್ನು, ಅಲ್ಪಸಂಖ್ಯಾತರ ಸಚಿವಾಲಯದ ಕೇಂದ್ರ ಸರ್ಕಾರದ www.minorityaffairs.gov.in ಪೋರ್ಟಲ್‍ನ್ನು ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯದ http://gokdom.kar.nic ಪೋರ್ಟಲ್‍ಗೆ ಲಾಗಿನ್ ಆಗಿ ಮಾಹಿತಿ ಪಡೆದು ಮೇಲ್ಕಂಡ ಕೊನೆಯ ದಿನದೊಳಗಾಗಿ ಅರ್ಜಿ ಸಲ್ಲಿಸಬೇಕು.

ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಮತ್ತು ದೂರವಾಣಿ ಸಂಖ್ಯೆ 08472-244006 ಹಾಗೂ ಆಯಾ ತಾಲೂಕಿನ ವಿಸ್ತರಣಾಧಿಕಾರಿಗಳ ಕಚೇರಿ ಹಾಗೂ ಆಳಂದ ಮೊಬೈಲ್ ಸಂಖ್ಯೆ 8147775722, ಅಫಜಲಪೂರ-9741279422, ಚಿಂಚೋಳಿ-8722326201, ಸೇಡಂ-7760680162, ಚಿತ್ತಾಪೂರ-9741168681, ಜೇವರ್ಗಿ-9535775141 ಹಾಗೂ ಕಲಬುರಗಿ-9741279422 ಗಳಿಗೆ ಸಂಪರ್ಕಿಸಲು ಹಾಗೂ ಅಲ್ಪಸಂಖ್ಯಾತರ ರಾಜ್ಯ ಸಹಾಯವಾಣಿ 8277799990ಗೆ ಸಂಪರ್ಕಿಸಲು ಕೋರಲಾಗಿದೆ.

emedialine

View Comments

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420