ಕಲಬುರಗಿ: ಕಾಳಗಿ ತಾಲೂಕಿನ ರೇವಗ್ಗಿ (ರಟಕಲ್) ಶ್ರೀ ಕ್ಷೇತ್ರ ರೇವಣಸಿದ್ದೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ (ಶ್ರಾವಣ ಮಾಸದ ಮೂರನೇ ಸೋಮವಾರ) ಅಂಗವಾಗಿ ಇದೇ ಆಗಸ್ಟ್ ೧೫ರಂದು ಸಂಜೆ ೪.೩೦ ಗಂಟೆಗೆ ಭವ್ಯ ಅಲಂಕೃತ ಬೆಳ್ಳಿ ಪಲ್ಲಕ್ಕಿ ಉತ್ಸವ ಜರುಗಲಿದೆ.
ಜಾತ್ರೆ ಸಂದರ್ಭದಲ್ಲಿ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆಯಬೇಕೆಂದು ಸೇಡಂ ಸಹಾಯಕ ಆಯುಕ್ತರು ಹಾಗೂ ರೇವಗ್ಗಿಯ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಪದನಿಮಿತ್ತ ಸದಸ್ಯ ಕಾರ್ಯದಶಿಗಳಾ ಕಾರ್ತಿಕ ಎಂ.ಅವರು ತಿಳಿಸಿದ್ದಾರೆ.