ಸುರಪುರ: ರಾಜಾ ವೆಂಕಟಪ್ಪ ನಾಯಕ ರವರ ನೇತೃತ್ವದಲ್ಲಿ ಬ್ಲಾಕ ಕಾಂಗ್ರೆಸ್ ಐ ಸಮಿತಿ ಸುರಪುರ ವತಿಯಿಂದ ೭೫ ನೇ ಸ್ವತಂತ್ರ್ಯೋತ್ಸವದ ಅಂಗವಾಗಿ ಪಕ್ಷದ ವತಿಯಿಂದ ತಾಲೂಕಿನ ದೇವಾಪುರ ಕ್ರಾಸ್ನಿಂದ ನಾಗರಾಳ ಗ್ರಾಮದ ಗೋ ಶಾಲೆಯ ವರೆಗೆ ಸಾವಿರಾರು ಕಾರ್ಯಕರ್ತರೊಂದಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.
ಈ ಸಮಯದಲ್ಲಿ ಮಾಜಿ ಶಾಸಕರು ಮಾತನಾಡಿ, ರಾಷ್ಟ್ರಪ್ರೇಮದ ಸಂಖೇತವಾಗಿರುವ ಧ್ವಜವನ್ನು ಇಂದು ಬಿಜೆಪಿಯವರು ಮಾರಾಟಕ್ಕಿಟ್ಟು ಡಾಂಭಿಕ ರಾಷ್ಟ್ರಪ್ರೇಮವನ್ನು ಬಿಂಬಿಸುತ್ತಿದ್ದಾರೆ. ಆ ಪಕ್ಷದಲ್ಲಿರುವವರು ಯಾರೋಬ್ಬರು ಸ್ವಾತಂತ್ರ್ಯದ ಹೋರಾಟದಲ್ಲಿ ಭಾಗವಹಿಸಿಲ್ಲಾ ಇತಂಹವರು ಇಂದು ದೇಶ ಭಕ್ತಿಯ ಬಗ್ಗೆ ಯುವ ಜನರನ್ನು ದಾರಿ ತಪ್ಪಿಸುವ ಕೆಲಸಮಾಡುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ತಮ್ಮ ಜೀವನವನ್ನೆ ಮುಡಿಪಾಗಿಟ್ಟಿದ್ದಾರೆ ಈ ಎಲ್ಲಾ ವಿಷಯಗಳನ್ನು ಯುವಕರು ಪ್ರಜ್ಞಾವಂತರಾಗಿ ಸ್ವಾತಂತ್ರ್ಯ ಹೋರಾಟದ ಕುರಿತು ಅಧ್ಯಯನ ಮಾಡಬೇಕು ಎಂದು ತಿಳಿಸಿದರು.
ಪಾದಯಾತ್ರೆಯಲ್ಲಿಸ ವಿಧಾನಪರಿಷತ್ ಮಾಜಿ ಸದಸ್ಯರಾದ ಶರಣಪ್ಪ ಮಟ್ಟೂರು, ಕೆಪಿಸಿಸಿ ಜಿಲ್ಲಾ ವೀಕ್ಷಕರಾದ ಎ.ವಸಂತಕುಮಾರ, ವಿಠ್ಠಲ ವಿ ಯಾದವ, ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಗೋಪಾಲದಾಸ ಲಡ್ಡಾ, ಪ್ರಕಾಶ ಗುತ್ತೆದಾರ, ಮಲ್ಲಣ್ಣ ಸಾಹು ನರಸಿಂಗ ಪೇಟ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಜಾ ಕುಮಾರ ನಾಯಕ, ರಾಜಾ ವೇಣುಗೋಪಾಲ ನಾಯಕ, ರಾಜಾ ಸುಶಾಂತ ನಾಯಕ, ಭೀಮರಾಯ ಮೂಲಿಮನಿ, ನಗರಸಭೆ ಸದಸ್ಯ ರಾಜಾ ಪಿಡ್ಡನಾಯಕ(ತಾತಾ), ಶರಣು ಸಾಹು ದಂಡಿನ್, ಬಾಪುಗೌಡ ಹುಣಸಗಿ, ಆರ್.ಎಮ್.ರೇವಡಿ, ಗುಂಡಪ್ಪ ಸೊಲ್ಲಾಪುರ, ನಿಂಗಣ್ಣ ಬೂದಗುಂಪಿ, ರವಿಚಂದ್ರ ಆಲ್ದಾಳ, ಯಮುನಪ್ಪ ದೊರಿ, ಅಂಬ್ರೇಶ ಕೋನಾಳ, ನಂದನಗೌಡ ದೇವಾಪುರ, ಪರಣ್ಣಗೌಡ ಕೋನಾಳ, ಅಹ್ಮದ ಪಠಾಣ ಸೇರಿದಂತೆ ನಗರಸಭೆ ಸದಸ್ಯರು ಸುರಪುರ ಹಾಗೂ ಕಕ್ಕೇರಾ ಪುರಸಭೆ ಸದಸ್ಯರು ಮತ್ತು ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…