ಕಲಬುರಗಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಸ್ಟೇಟ್ ಬ್ಯಾಂಕ್ ಇಂಡಿಯಾ ಸಹಯೋಗದೊಂದಿಗೆ ಗುರುವಾರ ಜಿಮ್ಸ್ ಆಸ್ಪತ್ರೆಯಿಂದ ಮಿನಿ ವಿಧಾನಸೌಧ ವರೆಗೆ ಮ್ಯಾರಾಥಾನ್ ಓಟ ಆಯೋಜಿಸಲಾಗಿತ್ತು. ಸುಮಾರು 500 ವಿದ್ಯಾರ್ಥಿಗಳು, ಸಿಬ್ಬಂದಿಗಳು ಉತ್ಸಾಹದಿಂದ ಭಾಗವಹಿಸಿದ್ದರು.
ಸ್ವಾತಂತ್ರ್ಯ ಹೋರಾಟದ ಇತಿಹಾಸ ಇಂದಿನ ಯುವ ಪೀಳಿಗೆಗೆ ಪರಿಚಯಿಸಲು ಮತ್ತು ಫಿಟ್ ಇಂಡಿಯಾ-ಫ್ರೀಡಂ ರನ್ ಘೋಷವಾಕ್ಯದೊಂದಿಗೆ ಉತ್ತಮ ಆರೋಗ್ಯಕ್ಕಾಗಿ ಈ ಓಟ ಆಯೋಜಿಸಲಾಗಿತ್ತು. ಜಿಮ್ಸ್ ನಿಂದ ಅರಂಭವಾದ ಓಟವು ಅನ್ನಪೂರ್ಣ ಕ್ರಾಸ್, ಎಸ್.ವಿ.ಪಿ.ವೃತ್ತ ಮಾರ್ಗವಾಗಿ ಡಿ.ಸಿ. ಕಚೇರಿಯಲ್ಲಿ ಕೊನೆಗೊಂಡಿತ್ತು.
ಮ್ಯಾರಾಥಾನ್ ಓಟಕ್ಕೆ ಚಾಲನೆ ನೀಡಿ ಮಾತನಾಡಿದ ಜಿಮ್ಸ್ ಜನರಲ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಮತ್ತು ಪ್ರಾಧ್ಯಾಪಕ ಡಾ. ಜಿ.ಬಿ.ದೊಡ್ಡಮನಿ ಅವರು, ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಸಂಸ್ಥೆಯು ಕ್ರೀಡೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರಂತರವಾಗಿ ಆಯೋಜಿಸುತ್ತಾ ಬಂದಿದೆ. ದೈಹಿಕವಾಗಿ ಆರೋಗ್ಯ ಸದೃಢಕ್ಕಾಗಿ ಮತ್ತು ಸಕ್ರಿಯ ಜೀವನಶೈಲಿಯತ್ತ ಸಾಗಲು ಇಂದು ಮ್ಯಾರಾಥಾನ್ ಓಟ ಆಯೋಜಿಸಿದೆ ಎಂದರು.
ಜಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಎಂ.ಡಿ.ಶಫಿಯೂದ್ದೀನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಂಬಾರಾಯ ರುದ್ರವಾಡಿ, ಡಾ. ಫರಖಾನಾ ಖುಷ್ನೂದ್ ಅವರು ಆರೋಗ್ಯಕರ ಜೀವನಶೈಲಿಯ ಪ್ರಯೋಜನಗಳ ಕುರಿತು ಮಾತನಾಡಿದರು.
ಮ್ಯಾರಾಥಾನ್ ಓಟದಲ್ಲಿ ಜಿಮ್ಸ್ ಆಸ್ಪತ್ರೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗೆ ಕ್ಯಾಪ್ ಮತ್ತು ಟಿ-ಶರ್ಟ್ ವಿತರಿಸಲಾಯಿತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…