ಬಿಸಿ ಬಿಸಿ ಸುದ್ದಿ

ರಕ್ಷಣಾ ಸೇವೆಯಲ್ಲಿ ಹುತಾತ್ಮರಾದವರ ಕುಟುಂಬಗಳಿಗೆ ಗೌರವ ಮತ್ತು ಸನ್ಮಾನ

ಕಲಬುರಗಿ: ಪೂಜ್ಯಡಾ.ಶರಣಬಸವಪ್ಪಅಪ್ಪಾಜಿ ಫ್ಯಾಮಿಲಿ ಟ್ರಸ್ಟ್, ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಂಯುಕ್ತಾಶ್ರಯದಲ್ಲಿ ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದಲ್ಲಿಆಗಸ್ಟ್ ೧೭ ರಂದು, ದೇಶದಗಡಿರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದರಕ್ಷಣಾ ಸಿಬ್ಬಂದಿಯ ಕುಟುಂಬ ಸದಸ್ಯರನ್ನು ಹಾಗೂ ಕೋವಿಡ್-೧೯ ವೈರಸ್ ಸಂತ್ರಸ್ತರಕುಟುಂಬ ಸದಸ್ಯರನ್ನು ಮತ್ತು ಪ್ರಕೃತಿ ವಿಕೋಪದಲ್ಲಿ ಬೆಳೆ ಕಳೆದುಕೊಂಡ ರೈತರನ್ನುಗೌರವಿಸಲಾಗುವುದುಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವಡಾ. ಅನಿಲಕುಮಾರ ಬಿಡವೆ ತಿಳಿಸಿದ್ದಾರೆ.

ಹುತಾತ್ಮರಾದರಕ್ಷಣಾ ಸಿಬ್ಬಂದಿಯ ತಲಾಐದು ಕುಟುಂಬಗಳು, ಕೋವಿಡ್-೧೯ ಸೋಂಕಿಗೆ ಬಲಿಯಾದವರಐದು ಕುಟುಂಬಗಳು ಮತ್ತು ಪ್ರಕೃತಿ ವಿಕೋಪದಿಂದ ಬೆಳೆ ಕಳೆದುಕೊಂಡ ಹಾಗೂ ತೀವ್ರಆರ್ಥಿಕ ಸಂಕಷ್ಟ ಅನುಭವಿಸುತ್ತಿರುವಐವರುರೈತರಿಗೆಆಗಸ್ಟ್ ೧೭ ರಂದು ಶರಣಬಸವ ವಿಶ್ವವಿದ್ಯಾಲಯದದೊಡ್ಡಪ್ಪಅಪ್ಪ ಸಭಾಂಗಣದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿತಲಾ ೨೫ ಸಾವಿರರೂ. ನೀಡಿ ಸನ್ಮಾನಿಸಲಾಗುವುದು.

ಮಾಜಿ ಸಂಸದ ಹಾಗೂ ಕಲ್ಯಾಣಕರ್ನಾಟಕ ಮಾನವ ಸಂಪನ್ಮೂಲ, ಕೃಷಿ, ಸಾಂಸ್ಕೃತಿಕ ಸಂಘದಅಧ್ಯಕ್ಷಡಾ.ಬಸವರಾಜ ಪಾಟೀಲ ಸೇಡಂ ಮುಖ್ಯಅತಿಥಿಯಾಗಿ ಭಾಗವಹಿಸಲಿದ್ದು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಚೇರಪರ್ಸನ್ ಮಾತೋಶ್ರೀ ಡಾ. ದಾಕ್ಷಾಯಿಣಿಅವ್ವಾಜಿಅವರುಎಲ್ಲಾ ಮೂರು ವಿಭಾಗಗಳಲ್ಲಿ ಆಯ್ಕೆಯಾದಐದು ಕುಟುಂಬಗಳಿಗೆ ತಲಾ ೨೫ ಸಾವಿರರೂ. ನೀಡಿಅವರನ್ನುಗೌರವಿಸುವರು.

ಸಮಾರಂಭದಲ್ಲಿ ಶ್ರೀ ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಪೂಜ್ಯಡಾ.ಶರಣಬಸವಪ್ಪಅಪ್ಪಾಜಿ, ಶರಣಬಸವೇಶ್ವರ ಸಂಸ್ಥಾನದ ೯ನೇ ಪೀಠಾಧಿಪತಿ ಪೂಜ್ಯಚಿರಂಜೀವಿ ದೊಡ್ಡಪ್ಪಅಪ್ಪಾಜಿ, ಬೆಳಗುಂಪಿ ಬ್ರಹನ್ಮಠದ?ಟಸ್ಥಲ ಬ್ರಹ್ಮಅಭಿನವ ಪರ್ವತೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜದೇಶಮುಖ, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿಡಾ.ನಿರಂಜನ್ ವಿ. ನಿಷ್ಠಿ ಉಪಸ್ಥಿತರಿರುವರು ಎಂದುಅವರು ತಿಳಿಸಿದ್ದಾರೆ.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

57 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

1 hour ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago