ಸುರಪುರ: ನಗರದಲ್ಲಿ ತಾಲೂಕು ಆಡಳಿತದಿಂದ ಮನೆ ಮನೆಗೆ ತ್ರಿವರ್ಣ ಧ್ವಜ ಅಭಿಯಾನದ ಅಂಗವಾಗಿ ನಗರದ ಬೃಹತ್ ಜಾಥಾ ನಡೆಸಲಾಯಿತು.ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಮೂಲಕ ಜಾಥಾಕೆ ಚಾಲನೆ ನೀಡಲಾಯಿತು.
ಶಾಸಕ ನರಸಿಂಹ ನಾಯಕ (ರಾಜುಗೌಡ) ಹಾಗೂ ಸುರಪುರ ಅರಸು ಮನೆತನದ ರಾಜಾ ಲಕ್ಷ್ಮೀನಾರಾಯಣ ನಾಯಕ ಚಾಲನೆ ನೀಡಿದರು.ತೆರೆದ ವಾಹನದಲ್ಲಿ ಭಾರತ ಮಾತೆ ಹಾಗೂ ಸುರಪುರ ಅರಸು ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಅವರು ಭಾವತ್ರಗಳ ಮೆರವಣಿಗೆ ಜೊತೆಗೆ ೧೦೫ ಅಡಿ ಉದ್ದದ ತ್ರಿವರ್ಣ ಧ್ವಜ ಎಲ್ಲರ ಗಮನ ಸೆಳೆಯಿತು.ಮೆರೆವಣಿಗೆಯುದ್ದಕ್ಕೂ ಭಾರತ ಮಾತಾ ಕೀ ಜೈ ಎನ್ನುವ ಘೋಷಣೆಗಳು ಕೇಳಿಬಂದವು.ನಗರದ ಪ್ರಮುಖ ಬೀದಿಗಳ ಮೂಲಕ ಡಾ:ಬಾಬಾ ಸಾಹೇಬ ಅಂಬೇಡ್ಕರ್ ವೃತ್ತದ ವರೆಗೆ ಜಾಥಾ ನಡೆಸಲಾಯಿತು.ಅಲ್ಲದೆ ಇದೇ ಸಂದರ್ಭದಲ್ಲಿ ನಿವೃತ್ತ ಯೋಧರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ),ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ನಾಯಕ ಜೇವರ್ಗಿ,ಉಪಾಧ್ಯಕ್ಷ ಮಹೇಶ ಪಾಟೀಲ್,ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ:ಸುರೇಶ ಸಜ್ಜನ್,ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ,ಟಿಹೆಚ್ಓ ಡಾ:ಆರ್.ವಿ.ನಾಯಕ,ಹೆಚ್.ಸಿ ಪಾಟೀಲ್,ಡಿವೈಎಸ್ಪಿ ಡಾ:ಮಂಜುನಾಥ ಟಿ, ಆರ್.ಕೆ ಜೈನ್,ಯಲ್ಲಪ್ಪ ಕುರಕುಂದಿ,ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ,ವೇಣುಮಾಧವ ನಾಯಕ,ನರಸಿಂಹಕಾಂತ ಪಂಚಮಗಿರಿ, ಶರಣು ನಾಯಕ ಬೈರಿಮಡ್ಡಿ,ಶ್ರೀನಿವಾಸ ನಾಯಕ ದರಬಾರಿ,ಲಕ್ಷ್ಮೀಕಾಂತ ದೇವರಗೋನಾಲ,ಗಂಗಾಧರ ನಾಯಕ ಅರಳಳ್ಳಿ,ಮಲ್ಲು ಬಾದ್ಯಾಪುರ ಸೇರಿದಂತೆ ಎಲ್ಲಾ ನಗರಸಭೆ ಸದಸ್ಯರು,ಕಂದಾಯ ಇಲಾಖೆ ಅಧಿಕಾರಿಗಳು,ಸಿಬ್ಬಂದಿಗಳು ಹಾಗೂ ನೂರಾರು ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.