ಬಿಸಿ ಬಿಸಿ ಸುದ್ದಿ

ಅಂಬೇಡ್ಕರರಿಗೆ ಅಗೌರವ ಆರೋಪ: ಗಾಂಧಿ ವೃತ್ತದಲ್ಲಿ ಪ್ರತಿಭಟನೆ

ಸುರಪುರ:ತಾಲೂಕು ಆಡಳಿತದಿಂದ ಶ್ರೀ ಪ್ರಭು ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ೭೬ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ:ಬಿ.ಆರ್ ಅಂಬೇಡ್ಕರರ ಭಾವಚಿತ್ರವನ್ನು ಇಡದೆ ಅವಮಾನಿಲಾಗಿದೆ ಎಂದು ಆರೋಪಿಸಿ ದಲಿತ ಸಾಮೂಹಿಕ ಸಂಘಟನೆಗಳ ಮುಖಂಡರು ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಅನೇಕ ಮುಖಂಡರು ಭಾಗವಹಿಸಿ,ಸಂವಿಧಾನ ಶಿಲ್ಪಿ ಡಾ:ಬಿ.ಆರ್ ಅಂಬೇಡ್ಕರರನ್ನು ಕಡೆಗಣಿಸಿರುವ ತಾಲೂಕು ಆಡಳಿತದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ಸಂವಿಧಾನದಡಿಯಲ್ಲಿ ನೌಕರಿ ಪಡೆದಿರುವ ಅಧಿಕಾರಿಗಳು ಇಂದು ಅಂತಹ ಸಂವಿಧಾನ ಶಿಲ್ಪಿಗೆ ಅವಮಾನಿಸಿದ್ದಾರೆ,ಶಾಸಕ ರಾಜುಗೌಡ ಅವರು ಕೂಡ ಕಾರ್ಯಕ್ರಮದಲ್ಲಿದ್ದು ನಿರ್ಲಕ್ಷ್ಯ ತೋರಿದ್ದಾರೆ ಎಂದರು.ಕೂಡಲೇ ತಹಸೀಲ್ದಾರ್ ಮತ್ತು ಡಿವೈಎಸ್ಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಲಾಯಿತು.ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಿ ಮನವಿ ಸ್ವೀಕರಿಸುವ ವರೆಗೂ ಪ್ರತಿಭಟನೆ ನಡೆಸುವುದಾಗಿ ಪಟ್ಟು ಹಿಡಿದರು.ನಂತರ ಪಿಐ ಸುನೀಲಕುಮಾರ ಮೂಲಿಮನಿ ಪ್ರತಿಭಟನಾಕರಾರರ ಬಳಿ ಬಂದು ಜಿಲ್ಲಾಧಿಕಾರಿಗಳಿಂದ ಮಾತನಾಡಿಸಿ ನಿಮ್ಮ ಮನವಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪಿಐ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಡಾ:ಮಂಜುನಾಥ ಟಿ, ಹೋರಾಟಗಾರರಾದ ಮಾನಪ್ಪ ಕಟ್ಟಿಮನಿ,ಮಾಳಪ್ಪ ಕಿರದಹಳ್ಳಿ,ಮಲ್ಲು ಕೆಸಿಪಿ,ವೆಂಕೋಬದೊರೆ ಬೊಮ್ಮನಹಳ್ಳಿ,ದಾವೂದ್ ಪಠಾಣ,ರಾಜು ಕಟ್ಟಿಮನಿ,ಮಾನಪ್ಪ,ವಿಶ್ವನಾಥ ಹೊಸ್ಮನಿ,ಶರಣು ತಳವಾರಗೇರಾ,ರಾಮಣ್ಣ ಶೆಳ್ಳಗಿ,ಶಿವಶಂಕರ ಕಟ್ಟಿಮನಿ,ಹಣಮಂತ ಕಟ್ಟಿಮನಿ ಬೊಮ್ಮನಹಳ್ಳಿ,ಪ್ರಶಾಂತ ಉಗ್ರಂ,ಸಾಹೇಬಗೌಡ ವಾಗಣಗೇರಾ,ನಾಗರಾಜ ಓಕಳಿ,ವೈಜನಾಥ ಹೊಸ್ಮನಿ,ಜೆಟ್ಟೆಪ್ಪ ನಾಗರಾಳ,ಮಲ್ಲು ನಾಯಕ ಕಬಾಡಗೇರ,ತಿಪ್ಪಣ್ಣ ಪಾಟೀಲ್,ಕನಕಾಚಲ ಯಡಿಯಾಪುರ ಸೇರಿದಂತೆ ಅನೇಕರು ಭಾಗವಹಿಸಿದ್ದರು.ಧಿಡೀರ್ ಪ್ರತಿಭಟನೆ ನಡೆಸಿದ್ದರಿಂದ ಟ್ರಾಫಿಕ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.

emedialine

Recent Posts

ಮಹಾತ್ಮರ ಬದುಕು, ಬರಹ ನಮ್ಮದಾಗಬೇಕು: ಸುರೇಶ ಬಡಿಗೇರ

ಕಲಬುರಗಿ: ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯನ್ನು ಕೇವಲ ಮೆರವಣಿಗೆಗೆ ಸೀಮಿತಗೊಳಿಸದೆ, ಅವರ ಬದುಕು ಬೋಧನೆಯನ್ನು ಅನುಸರಿಸಬೇಕು ಎಂದು ಕನ್ನಡ ಅಭಿವೃದ್ಧಿ…

11 hours ago

ಸಿದ್ದಪ್ಪ ಹೊಸಮನಿಗೆ ಪಿಎಚ್.ಡಿ

ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವಿದ್ಯಾರ್ಥಿ ಸಿದ್ದಪ್ಪ ಹೊಸಮನಿ ಅವರು " ಡಾ. ಕೆ. ಆರ್.…

11 hours ago

ಕಲಬುರಗಿ; ಜಿಲ್ಲಾ ಮಾಸ್ಟರ್ ಟ್ರೇನರ್ಸ್ ಗಳಿಗೆ ತರಬೇತಿ

ಕಲಬುರಗಿ; ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕ್ಷೇತ್ರದ ವ್ಯಾಪ್ತಿಗೆ…

12 hours ago

ಸುರಪುರ:ವಾಸವಿ ಜಯಂತಿ ಆಚರಣೆ ಅದ್ಧೂರಿ ಮೆರವಣಿಗೆ

ಸುರಪುರ: ನಗರದಲ್ಲಿ ವಾಸವಿ ಜಯಂತಿ ಆಚರಣೆ ಅಂಗವಾಗಿ ಅದ್ಧೂರಿ ಮೆರವಣಿಗೆ ನಡೆಸಲಾಗಿದೆ.ಮೊದಲಿಗೆ ನಗರದ ಹಳೆ ಬಸ್ ನಿಲ್ದಾಣದ ಬಳಿಯಲ್ಲಿನ ಕನ್ನಿಕಾ…

13 hours ago

ಕೃಷಿ ಅಧಿಕಾರಿ ಬೀಜ ಗೊಬ್ಬರ ಮಾರಾಟ ಅಂಗಡಿಗೆ ಭೇಡಿ;ಬಿತ್ತನೆ ಬೀಜ ಪರಿಶೀಲನೆ

ಸುರಪುರ: ತಾಲೂಕಿನಲ್ಲಿ ಮುಂಗಾರು ಆರಂಭಗೊಂಡು ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದರಿಂದ ಕೃಷಿ ಬೀಜ ಗೊಬ್ಬರ ಮಾರಾಟ ಅಂಗಡಿಗಳಿಗೆ ತಾಲೂಕು ಸಹಾಯಕ ಕೃಷಿ…

13 hours ago

ಶ್ರೀ ವಾಸವಿ ಜಯಂತಿ ನಿಮಿತ್ತ ವಾಸವಿ ಮಾತೆಗೆ ತೊಟ್ಟಿಲ ಸೇವೆ

ಕಲಬುರಗಿ: ನಗರದ ಪುಟಾಣಿ ಗಲ್ಲಿಯಲ್ಲಿ ಶ್ರೀ ನಗರೇಶ್ವರ ದೇವ ಸ್ಥಾನದಲ್ಲಿ ಆರ್ಯ ವೈಶ್ಯ ಸಮಾಜ ವತಿಯಿಂದ ಶ್ರೀ ವಾಸವಿ ಜಯಂತಿ…

13 hours ago