ಕಲಬುರಗಿ,ಆ.16(ಕ.ವಾ) ಮನೆ ಬಾಗಿಲಿಗೆ ಸಾಮಾಜಿಕ ಭದ್ರತಾ ಪಿಂಚಣಿಯನ್ನು 72 ಗಂಟೆಯಲ್ಲಿ ನೀಡುವ ಬಗ್ಗೆ ಸಲಹೆ ನೀಡಿದಕ್ಕೆ ಕಂದಾಯ ಸಚಿವ ಆರ್.ಅಶೋಕ ಅವರು ಕಲಬುರಗಿ ಡಿ.ಸಿ.ಯಶವಂತ ವಿ. ಗುರುಕರ್ ಅವರಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದಾರೆ.
ಫ್ಲಿಪ್ ಕಾರ್ಟ್ ಎಂಬ ಖಾಸಗಿ ದೈತ್ಯ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿ ಅನುಭವ ಹೊಂದಿರುವ ಯಶವಂತ ವಿ. ಗುರುಕರ್ ಅವರು ಸರ್ಕಾರಿ ವ್ಯವಸ್ಥೆಯಲ್ಲಿ ಕಾಲಮಿತಿಯಲ್ಲಿ ಪಿಂಚಣಿ ಒದಗಿಸಲು ಉದ್ದೇಶಿಸಿ ಇದನ್ನು ಕಲಬುರಗಿ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲು ಉದ್ದೇಶಿಸಿದರು.
ಈ ವಿಷಯ ಕಂದಾಯ ಸಚಿವರಿಗೆ ಗೊತ್ತಾಗಿದ್ದೆ ತಡ ಡಿ.ಸಿ. ಅವರನ್ನು ಸಂಪರ್ಕಿಸಿದ ಸಚಿವರು ಅಗತ್ಯ ಸಲಹೆ ಪಡೆದು ಕಲಬುರಗಿಯಷ್ಟೆ ಅಲ್ಲ ರಾಜ್ಯದಾದ್ಯಂತ ಇದನ್ನು ಜಾರಿಗೆ ತರೋಣ ಎಂದು ತಿಳಿಸಿ ಕಳೆದ ಮೇ 11ಕ್ಕೆ ಅಧಿಕೃತ ಸರ್ಕಾರಿ ಆದೇಶ ಹೊರಡಿಸುವ ಮೂಲಕ ರಾಜ್ಯದಾದ್ಯಂತ ಈ ಯೋಜನೆ ಜಾರಿಗೊಳಿಸಿದ್ದರು.
ಸಾರ್ವಜನಿಕರು ಟೋಲ್ ಫ್ರೀ ಸಂ.155245 ಸಂಖ್ಯೆ ಕರೆ ಮಾಡಿ “ಹಲೋ ಕಂದಾಯ ಸಚಿವರೇ” ಕೇಂದ್ರಿಕೃತ ಸಹಾಯವಾಣಿಗೆ ಮಾಹಿತಿ ನೀಡಿದರೆ ಸಾಕು, ಗ್ರಾಮ ಲೆಕ್ಕಧಿಕಾರಿಗಳೇ ಪಿಂಚಣಿದಾರರ ಮನೆಗೆ ತೆರಳಿ ನವೋದಯ ತಂತ್ರಾಂಶದ ಮೂಲಕ ಆಧಾರ್ ಸೇರಿದಂತೆ ಅಗತ್ಯ ದಾಖಲೆಗಳು ಪಡೆದು ಕಚೇರಿ ಕೆಲಸ ದಿನದ 72 ಗಂಟೆಯಲ್ಲಿ ಪಿಂಚಣಿ ಮಂಜೂರಾತಿ ನೀಡಲಾಗುತ್ತದೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…