ಶರಣರ ವಚನಗಳು ಸವ೯ಕಾಲಿಕ: ಬಸವರಾಜ ಮತ್ತಿಮೂಡ

ಕಲಬುರಗಿ:ಬಸವಾದಿ ಶರಣರ ವಚನಗಳು ಹಾಗೂ ಜನಪದ ಹಾಡು ಗಳು  ಸವ೯ಕಾಲಿಕ ಪ್ರಸ್ತುತವಾಗಿವೆ. ಇವು ಜಾತಿ, ಮತ, ಪಂಥ ಎನ್ನದೇ ಸವ೯ಕಾಲಿಕ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಬಸವರಾಜ ಮತ್ತಿಮೂಡ ಹೇಳಿದರು.

ನಗರದ ಕಲಾ ಮಂಡಳದಲ್ಲಿ ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ಪಾಳಾ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡುತ್ತಿದ್ದರು.

ಮುಂದುವರೆದು ಮಾತನಾಡಿದ ಅವರು,ಸಂಗೀತ ಆಲಿಸುವುದರಿಂದ ಏಕಾಗ್ರತೆ ಮೂಡಿ ಮನಸ್ಸು ಪ್ರಫುಲ್ಲ ಗೊಳ್ಳುತ್ತದೆ ಮತ್ತು ಚೈತನ್ಯ ಭರಿತವಾಗುತ್ತದೆ. ಸಂಗೀತದಲ್ಲಿ ಪ್ರತಿಯೊಬ್ಬರು ತಮ್ಮನ್ನು ತಾವು ತೊಡಗಿಸಿಕೊಳ್ಳುವುದಲ್ಲದೇ ಮಕ್ಕಳಿಗೆ ಸಂಗೀತದಲ್ಲಿ ಆಸಕ್ತಿ  ಮೂಡುವಂತೆ ಮಾಡಬೇಕಾಗಿದೆ ಎಂದು ಹೇಳಿದರು.

ಸಂಗೀತ ದಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಮನಸ್ಸಿಗೆ ಶಾಂತಿ ನೆಮ್ಮದಿ ಮತ್ತು ಸಂತಸ ತಂದುಕೊಡುತ್ತದೆ. ಅಲ್ಲದೆ ಸಂಗೀತವು ರೋಗಗಳನ್ನು ನಿವಾರಿಸುವ ಶಕ್ತಿ ಹೊಂದಿದೆ ಎಂದು ಬಿಜೆಪಿ ಎಸ್ ಸಿ ಮೂಚಾ೯ ರಾಜ್ಯ ಉಪಾಧ್ಯಕ್ಷರಾದ ಡಾ ಅಂಬಾರಾಯ ಅಷ್ಟಗಿ ಹೇಳಿದರು.

ಸುಭಾಶ್ಚಂದ್ರ ಸ್ಮಾರಕ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷರಾದ ಶರಣಗೌಡ ಪಾಟೀಲ ಪಾಳಾ ಮಾತನಾಡಿ, ನಮ್ಮ ಟ್ರಸ್ಟ್ ವತಿಯಿಂದ  ವಿವಿಧ ಕಲಾಪ್ರಕಾರಗಳ ಜತೆಗೆ ವಚನ ಗಾಯನ, ಸಂಗೀತ ಸುಧೆ ಮತ್ತು ದಾಸ ಸಾಹಿತ್ಯದ ಹಾಡುಗಳ ಕಾರ್ಯಕ್ರಮ ಏರ್ಪಡಿಸುವುದರ ಮೂಲಕ ಶರಣರ  ದಾಸರ ತತ್ವಗಳನ್ನು ಸಮಾಜಕ್ಕೆ ಮುಟ್ಟಿಸುವಂತ ಕೆಲಸ ಮಾಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕಲಾವಿದರಾದ ಪವಿತ್ರಾ ವಿಶ್ವನಾಥ ರಾಜನಾಳ, ಕು . ಪ್ರತೀಕ್ಷಾ ಬಾಬುರಾವ ಯಡ್ರಾಮಿ  ಭರತ ನಾಟ್ಯ ಮಾಡಿದರು. ಗುರುಶಾಂತಯ್ಯ ಸ್ಥಾವರಮಠ.  ಸೈದಪ್ಪಾ ಸಪ್ಪಣಗೋಳ, ಅಣ್ಣಾರಾವ ಶೆಳ್ಳಗಿ ಮತ್ತಿಮಡು, ಚಾಮರಾಜ್ ದೊಡ್ಮನಿ, ಜಗನ್ನಾಥ್  ಪಾಳಾ, ಪ್ರಶಾಂತ್ ಕಂಬಾರ್, ವಿಜಯಲಕ್ಷ್ಮಿ ಕೆಂಗನಾಳ, ಚೇತನ್ ಬೀದಿಮನಿ, ಸೂರ್ಯಕಾಂತ್ ಪೂಜಾರಿ, ತೋಟಯ್ಯ ಶಾಸ್ತ್ರಿ, ಶ್ರೀಶೈಲ್ ಪಾಟೀಲ್, ಚೇತನ್ ಕೋಬಾಳ, ನಾಗೇಶ್ರೀ ಕೋಣೆ, ರವಿ ಆಳಂದ, ಪ್ರಶಾಂತ್ ಗೋಲ್ಡ್ ಸ್ಮಿತ್, ರವಿ ಸ್ವಾಮಿ ಗೋಟೂರ್, ನಿರ್ಮಲ ಕೋಣಿ, ಮೌನೇಶ್ ಪಂಚಾಳ, ವೀರಭದ್ರಯ್ಯ ಸ್ಥಾವರಮಠ, ಶಿವಯೋಗಿ ಭಜಂತ್ರಿ  ತಂಡ ದಿಂದ ಸಂಗೀತ ಕಾರ್ಯಕ್ರಮದಲ್ಲಿ 25 ಕ್ಕೂ ಹೆಚ್ಚು  ಕಲಾವಿದರು ಭಾಗವಹಿಸಿದರು.

ಹರ್ಷವರ್ಧನ್ ಗೂಗಳೆ,ಕೆ ಹೆಚ್ ಚನ್ನೂರ, ದತ್ತಪ್ಪ್ ಸಾಗನೂರ, ವಿನೋದ್ ಪಾಟೀಲ,ರೆಡ್ಡಿ, ರಾಜು, ಜಿ ಸಿ ಪಾಟೀಲ ಎಸ್ ಎಲ್ ಪಾಟೀಲ, ಎಸ್ ಬಿ ಪಾಟೀಲ, ಮಾಜಿ, ವಿ ಅಲ್ಲೂರ, ಬಿ ಎಚ್ ನಿರಗುಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಡಾ . ಶರಣಬಸಪ್ಪ ವಡ್ಡನಕೇರಿ ಕಾರ್ಯಕ್ರಮ ನಿರೂಪಿಸಿದರು

emedialine

Recent Posts

ಕ.ಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ಶೀಘ್ರ ಅಸ್ತಿತ್ವಕ್ಕೆ; ಸಿದ್ದರಾಮಯ್ಯ

ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…

2 mins ago

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 hour ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

11 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420