ಕಲಬುರಗಿ; ನಗರದ ಪಿಡಿಎ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಹೈದರಾಬಾದ್ ಕರ್ನಾಟಕ ಎಜುಕೇಶನ್ ಸೊಸೈಟಿಯ ಪಾಲಿಟೆಕ್ನಿಕ್ ವಾರ್ಷಿಕ ಕೂಟ ಫ್ರೆಶರ್ಸ್ಗೆ ಸ್ವಾಗತ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭಕ್ಕೆ ಸಿಐಡಿ ಡಿವೈಎಸ್ಪಿ ಶಂಕರಗೌಡ ವಿ.ಪಾಟೀಲ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ, ಉಪಾಧ್ಯಕ್ಷ ಡಾ.ಶರಣಬಸಪ್ಪ ಹರವಾಳ, ಕಾರ್ಯದರ್ಶಿ ಡಾ.ಜಗನ್ನಾಥ ಬಿಜಾಪುರ, ಜಂಟಿ ಕಾರ್ಯದರ್ಶಿ ಡಾ.ಮಹಾದೇವಪ್ಪ ರಾಂಪರೆ, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಹಾಗೂ ಕನವಿನರಾದ ವಿನಯ್ ಪಾಟೀಲ, ಆಡಳಿತ ಮಂಡಳಿಯ ಸದಸ್ಯರಾದ ಡಾ.ಶರಣಬಸಪ್ಪ ಕಾಮರೆಡ್ಡಿ, ಡಾ.ಕೈಲಾಸ ಪಾಟೀಲ, ಡಾ.ಅನಿಲಕುಮಾರ ಪಟ್ಟಣ, ಸಾಯಿನಾಥ ಪಾಟೀಲ, ಡಾ.ನಾಗೇಂದ್ರ ಮಂಠಾಳ, ಅರುಣಕುಮಾರ ಪಾಟೀಲ, ಬಸವರಾಜ ಖಂಡೇರಾವ, ಸೋಮನಾಥ ನಿಗಾಡಗಿ, ಗಿರಿಜಾ ಶಂಕರ, ಡಾ. ರಜನಿಶ ವಾಲಿ, ಡಾ. ರಾಜಶೇಖರ ಪಾಟೀಲ, ಹಾಗೂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಮಲ್ಲಿಕಾರ್ಜುನ ಬಬಲೇಶ್ವರ, ವಿದ್ಯಾರ್ಥಿ ಸಂಘದ ಸಲಹೆಗಾರ ಶಿವಶರಣಯ್ಯ ಹಿರೇಮಠ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಯುವರಾಜ ಹಾಗೂ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.