ಕಲಬುರಗಿ: ನಗರದ ಅನನ್ಯ ಪದವಿ ಮತ್ತು ಸ್ನಾತಕೋತ್ತರ ಎಂ ಎಸ್ ಡಬ್ಲ್ಯೂ ಪದವಿ ಮಹಾವಿದ್ಯಾಲಯದಲ್ಲಿ ೭೫ ನೆಯ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ಯವಾಗಿ ಸಂಸ್ಕೃತಿಕ ಕಾರ್ಯಕ್ರಮಕ್ಕೆ ಮಾಜಿ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷ ದಿಲೀಪ್ ಆರ್.ಪಾಟೀಲ್ ಉದ್ಘಾಟಿಸಿ ಮಾತನಾಡುತ್ತಾ ಈ ಅಮೃತ ಮಹೋತ್ಸವದ ಹಿಂದೆ ಅನೇಕ ಮಹಾನ್ ವೀರರನ್ನು ದೇಶಪ್ರೇಮಿಗಳ ತ್ಯಾಗ ಬಲಿದಾನವನ್ನು ಸ್ಮರಿಸುತ್ತಾ ಯುವ ಪೀಳಿಗೆಗೆ ಪೂರ್ತಿದಾಯಕ ಹಿತ ನುಡಿಗಳನ್ನು ವ್ಯಕ್ತಪಡಿಸಿದರು.
ಅತಿಥಿಗಳಾಗಿ ಆಗಮಿಸಿದ ಖ್ಯಾತ ನ್ಯಾಯವಾದಿ ಭೀಮಾಶಂಕರ ಪೂಜಾರಿ ಮತ್ತು ಹಿರಿಯರಾದ ಸೂರ್ಯಕಾಂತ ಹಾಗರಗಿ ಅವರು ರಾಷ್ಟ್ರಧ್ವಜದ ಮಹತ್ವವನ್ನು ಗೌರವಿಸಿದರ ಉದ್ದೇಶವಾಗಿ ವಿದ್ಯಾರ್ಥಿಗಳಲ್ಲಿ ದೇಶಪ್ರೇಮದ ಅಭಿಮಾನವನ್ನು ಕುರಿತು ಮಾತನಾಡಿದರು.
ಕಾಲೇಜಿನ ಅಧ್ಯಕ್ಷರಾದ ಸುಷ್ಮಾವತಿ ಎಸ್ ಹೊನ್ನಗೇಜಿ ಅವರು ಮಾತನಾಡಿ ದೇಶದ ಅಮೃತ ಮಹೋತ್ಸವದ ಗಳಿಗೆಯಲ್ಲಿ ಮಹಾನ್ ದೇಶಪ್ರೇಮಿಗಳ ಸಾಧಕರ ಸಾಧನಗಳನ್ನು ಉತ್ತಮ ಗುರಿ ಮತ್ತು ಗುರುವಿನ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ದೇಶಪ್ರೇಮದ ಬೀಜವನ್ನು ಬಿತ್ತಿದರು.
ಕಾಲೇಜಿನ ಕೇಂದ್ರ ಬಿಂದುಗಳಾದ ಪ್ರಾಂಶುಪಾಲ ಶರಣು ಬಿ ಪೂಜಾರಿ ಹೊನ್ನಗೇಜಿ ಅವರು ೭೫ ನೇ ಆಜಾಧಿಕಾ ಅಮೃತ ಮಹೋತ್ಸವದ ಮಹತ್ವವನ್ನು ವ್ಯಕ್ತಪಡಿಸಿದರು.
ಎಲ್ಲಾ ಉಪನ್ಯಾಸಕರು ಸ್ವತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಭಾಷಣಗಳ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಪ್ರೇಮದ ಬಗ್ಗೆ ಹುರಿದುಂಬಿಸಿದರು ಎಲ್ಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ೭೫ ನೇ ಅತಂತ್ರೋತ್ಸವಕ್ಕೆ ಮೆರಗು ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಆಶಾರಾಣಿ ಕಲ್ಕೋರಿ, ಗೌರಿ ಬೆಟಗೇರಿ, ಚೈತ್ರ, ಶಿಲ್ಪ ಲಿಂಗದೇ, ಭಾಗ್ಯಶ್ರೀ ಪಾಟೀಲ್, ಪ್ರೀತಿ ಸಜ್ಜನ್, ಡಾ. ಸರಿತಾ ಕರಿಗುಡ್ಡ, ಶಿವಕುಮಾರ, ಕಿರಣಕುಮಾರ, ಬೋಜು ಬಿ ಪೂಜಾರಿ, ಸುಜಾತ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…