ವಾಡಿ: ಜೀವಾವಧಿ ಶಿಕ್ಷೆಗೆ ಒಳಪಟ್ಟಿದ್ದ ಗರ್ಭಿಣಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಆಕೆಯ ಮಗುವನ್ನು ಹತ್ಯೆಗೈದಿದ್ದ ಹನ್ನೊಂದು ಜನ ಗುಜರಾತ್ ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಬಿಜೆಪಿ ಸರ್ಕಾರದ ಕ್ರಮವನ್ನು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್ಯುಸಿಐ) ಖಂಡಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡುವ ಮೂಲಕ ಸರ್ಕಾರದ ಅಪರಾಧಿ ಪರವಾದ ನಿಲುವಿನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಎಸ್ಯುಸಿಐ ನಗರ ಸಮಿತಿ ಕಾರ್ಯದರ್ಶಿ ಕಾಮ್ರೇಡ್ ವೀರಭದ್ರಪ್ಪಾ ಆರ್.ಕೆ, ೨೦೦೨ರಲ್ಲಿ ನಡೆದ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಎಂಬ ಗರ್ಭಿಣಿ ಮಹಿಳೆಯ ಮೇಲೆ ಅತ್ಯಾಚಾರವನ್ನು ಎಸಗುವ ಜತೆಗೆ ಆಕೆಯ ಮಗುವನ್ನು ಸಾಮೂಹಿಕವಾಗಿ ಕೊಂದಿದ್ದ ಹಂತಕರು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಜೈಲಿನಲ್ಲೇ ಕೊಳೆಯಬೇಕಿದ್ದ ನರಹಂತಕರನ್ನು ಬಿಜೆಪಿಯವರು ಬಿಡುಗಡೆಗೊಳಿಸಿದ್ದಾರೆ. ಅಲ್ಲದೆ ಈ ಖೈದಿಗಳನ್ನು ಮಹಾನ್ ಸಾಧಕರು ಎಂಬಂತೆ ಹೂಮಾಲೆ ಹಾಕಿ ಸಿಹಿ ತಿನ್ನಿಸಿ ಸ್ವಾಗತಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಟೀಕಿಸಿದ್ದಾರೆ.
ಕಾನೂನು ಮತ್ತು ನೈತಿಕತೆಯ ಮಾನದಂಡವನ್ನು ಉಲ್ಲಂಘಿಸಿ ಅತ್ಯಂತ ಘೋರ ಅಪರಾಧ ಎಸಗಿರುವ ಅಪರಾಧಿಗಳ ಸೇವೆ ಮಾಡುತ್ತಾ, ಅವರ ಕೃತ್ಯಗಳನ್ನು ಪ್ರೋತ್ಸಾಹಿಸಿ ಅವರ ಪರವಾಗಿ ನಿಂತು ಬಿಜೆಪಿ ನಾಯಕರು ರಕ್ಷಣೆ ಮಾಡುತ್ತಾರೆ ಎಂಬುದಕ್ಕೆ ಗುಜರಾತ್ ಘಟನೆಯ ಅಪರಾಧಿಗಳ ಬಿಡುಗಡೆ ಪ್ರಕರಣವೇ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರದ ಇಂತಹ ಕಾನೂನು ಸಮ್ಮತವಲ್ಲದ ಅನೈತಿಕ ಕ್ರಮವನ್ನು ಖಂಡಿಸಿ ಜನರು ಹೋರಾಟಕ್ಕೆ ಮುಂದಾಗಬೇಕು ಎಂದು ವೀರಭದ್ರಪ್ಪ ಜನತೆಗೆ ಕರೆ ನೀಡಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…