ಬಿಸಿ ಬಿಸಿ ಸುದ್ದಿ

ನೌಕರರ ವರ್ಗಾವಣೆ ರದ್ದುಗೊಳಿಸಲು ಒತ್ತಾಯಿಸಿ ಸಾಮೂಹಿಕ ಸಂಘಟನೆಗಳಿಂದ ಧರಣಿ

ಸುರಪುರ: ನಗರದ ಬಸ್ ಡಿಪೋದಲ್ಲಿ ಚಾಲಕ ಮತ್ತು ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ ಬಾಬು ರಾಠೋಡ ಮತ್ತು ಸಂತೋಷಕುಮಾರ ಎಂಬ ಇಬ್ಬರು ನೌಕರರನ್ನು ಉದ್ದೇಶಪೂರ್ವಕವಾಗಿ ಅಂತರ ಜಿಲ್ಲಾ ಘಟಕಗಳಿಗೆ ವರ್ಗಾವಣೆ ಮಾಡಿದ್ದು,ಇದನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನಗರದ ಬಸ್ ಡಿಪೋ ಮುಂದೆ ಸಾಮೂಹಿಕ ಸಂಘಟನೆಗಳಿಂದ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಧರಣಿ ನಿರತ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ,ಸುರಪುರ ಬಸ್ ಡಿಪೋದಲ್ಲಿ ಕೆಲ ಅಧಿಕಾರಿಗಳ ಸರ್ವಾಧಿಕಾರಿ ಧೋರಣೆ ಎದ್ದು ಕಾಣುತ್ತಿದೆ.ಇದನ್ನು ವಿರೋಧಿಸಿದವರ ಮೇಲೆ ವಿನಾಕಾರಣ ಕೇಸು ದಾಖಲಿಸುವ ಮೂಲಕ ಕಾರ್ಮಿಕರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ.ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಡಿಪೋದಲ್ಲಿ ಚಾಲಕ ಮತ್ತು ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ ಬಾಬು ರಾಠೋಡ ಮತ್ತು ಸಂತೋಷಕುಮಾರ ಎಂಬ ಕಾರ್ಮಿಕರ ಮೇಲೆ ಯಾದಗಿರಿ ವಿಭಾಗಿಯ ನಿಯಂತ್ರಣಾಧಿಕಾರಿಗಳ ಸಂಬಂಧಿಯಾದ ಗಿರೀಶ ಕುಮಟಳ್ಳಿ ಎಂಬ ಸಂಚಾರಿ ನಿರೀಕ್ಷಕರು ಮುಂಚೆಯಿಂದಲು ವಿನಾಕಾರಣ ಈ ಇಬ್ಬರು ಕಾರ್ಮಿಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಅಲ್ಲದೆ ಈ ಕಾರ್ಮಿಕರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆಂದು ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರನ್ನು ನೀಡಿದ್ದಾರೆ.

ಇದರಿಂದ ನೊಂದ ಕಾರ್ಮಿಕರು ಕೂಡ ಪೊಲೀಸರಿಗೆ ಪ್ರತಿ ದೂರು ನೀಡಿದ್ದು.ಇದನ್ನೆ ಸೇಡಾಗಿಸಿಕೊಂಡ ಸಂಚಾರಿ ನಿರೀಕ್ಷಕ ಗಿರೀಶ ಕುಮಟಳ್ಳಿ ಮತ್ತು ಘಟಕ ವ್ಯವಸ್ಥಾಕರು ಕಾರ್ಮಿಕರಾದ ಬಾಬು ರಾಠೋಡ ಮತ್ತು ಸಂತೋಷಕುಮಾರರನ್ನು ಬಳ್ಳಾರಿ ಹಾಗು ಹೋಸಪೇಟೆ ಡಿಪೋಗಳಿಗೆ ವರ್ಗಾವಣೆ ಮಾಡಿದ್ದಾರೆ.ಡಿ ಗ್ರುಪ್ ನೌಕರರಾದ ಇವರಿಗೆ ದೂರದ ಬಳ್ಳಾರಿಗೆ ಹೋಗಿ ಕೆಲಸ ಮಾಡುವುದು ಕಷ್ಟವಾಗುತ್ತಿದೆ.ಆದ್ದರಿಂದ ಯಾದಗಿರಿ ಜಿಲ್ಲೆಯ ಯಾವುದೇ ಡಿಪೋಗೆ ವರ್ಗಾಯಿಸಲು ಅಭ್ಯಾಂತರವಿಲ್ಲ.ಆದರೆ ಉದ್ದೇಶಪೂರ್ವಕವಾಗಿ ಇವರನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲ,ಇದನ್ನು ಕೂಡಲೆ ರದ್ದುಗೊಳಿಸುವಂತೆ ಆಕ್ರೋಶದಿಂದ ಆಗ್ರಹಿಸಿದರು.ಅಲ್ಲದೆ ಈ ಕಾರ್ಮಿಕರ ವರ್ಗಾವಣೆ ರದ್ದುಗೊಳಿಸದಿದ್ದಲ್ಲಿ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಧರಣಿ ನಿರತರ ಬಳಿಗೆ ವಿಭಾಗಿಯ ಸಂಚಾರಿ ಅಧಿಕಾರಿ ಬೈಲಪ್ಪ ಬಿರಾದಾರ ಆಗಮಿಸಿ ಧರಣಿ ನಿರತರ ಬೇಡಿಕೆಗಳನ್ನು ಆಲಿಸಿ,ನಂತರ ಸುರಪುರ ಠಾಣೆ ಪಿಐ ಆನಂದರಾವ್ ಅವರ ಮದ್ಯಸ್ಥಿಕೆಯಲ್ಲಿ ನಿಮ್ಮ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ವ್ಯವಸ್ಥಾಪಕ ನಿರ್ದೇಶಕರು ಸಾರಿಗೆ ಸದನ ಕಲಬುರ್ಗಿರವರಿಗೆ ಬರೆದ ಮನವಿಯನ್ನು ಸಲ್ಲಿಸಿ ಧರಣಿಯನ್ನು ನಿಲ್ಲಿಸಲಾಯಿತು.

ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆಗಾಗಿ ಡಿಎಸ್‌ಪಿ ಶಿವನಗೌಡ ಪಾಟೀಲರ ನೇತೃತ್ವದಲ್ಲಿ ಆರಕ್ಷಕ ನಿರೀಕ್ಷಕ ಆನಂದರಾವ್ ಪೊಲೀಸ್ ಬಂದೋ ಬಸ್ತ್ ಮಾಡಲಾಗಿತ್ತು.ಧರಣಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ದೇವಿಂದ್ರಪ್ಪ ಪತ್ತಾರ,ಚಂದ್ರಶೇಖರ ಹಸನಾಪುರ,ನಿಂಗಣ್ಣ ಗೋನಾಲ,ರಾಹುಲ ಹುಲಿಮನಿ,ಭೀಮಾಶಂಕರ ಬಿಲ್ಲವ್,ಭೀಮರಾಯ ಸಿಂಧಗೇರಿ,ಉಸ್ತಾದ ವಜಾಹತ್ ಹುಸೇನ,ಸೋಮಶೇಖರ ಸಜ್ಜನ್,ಶೇಖರ ನಾಯ್ಕ,ವೆಂಕೋಬ ದೊರೆ,ತಾಯಪ್ಪ ಕನ್ನೆಳ್ಳಿ,ಮಾನಪ್ಪ ಝಂಡದಕೇರಾ,ವಿಜಯಕುಮಾರ ಕರಡಕಲ್,ನಾಗು ಗೋಗಿಕೇರಾ,ಶಿವಣ್ಣ ನಾಗರಾಳ,ರಮೇಶ ನಂಬಾ,ಹಣಮಂತ ಕಟ್ಟಿಮನಿ,ಪರಮಣ್ಣ ಹಂಧ್ರಾಳ ಸೇರಿದಂತೆ ಅನೇಕರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420