ಕಲಬುರಗಿ: ನಗರದ ವಿಜಿ ಮಹಿಳಾ ಮಹಾವಿದ್ಯಾಲಯದಲ್ಲಿ ಶನಿವಾರ ೨೦೨೧-೨೦೨೨ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸ್ಯಾಕ್ ಸಭಾಂಗಣದಲ್ಲಿ ಜರುಗಿತು.
ಮೊದಲಿಗೆ ಸಂಗೀತ ವಿಭಾಗದ ಡಾ.ರೇಣುಕಾ ಮೋಳಗಿ ಮತ್ತು ಡಾ.ಮುಖೀಮ್ ಮಿಂಯಾರವರು ಪ್ರಾರ್ಥನಾ ಗೀತೆ ನಡೆಸಿ ಕೊಟ್ಟರು.ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ರಾಜೇಂದ್ರ ಕೊಂಡಾ ಸ್ವಾಗತಿಸಿದರು. ಡಾ.ಶಾಂತಾ ಮಠ ಪರಿಚಯಿಸಿದರು.ವಿದ್ಯಾರ್ಥಿ ಸಂಘದ ಸಲಹೆಗಾರರಾದ ಉಮಾ ರೇವೂರ ಅವರು ಕಾಲೇಜಿನ ವಿವಿಧ ಸಂಘಗಳ ವಾರ್ಷಿಕ ವರದಿ ವಾಚನ ಮಾಡಿದರು.
ಸಂಸ್ಥೆಯ ಉಪಾಧ್ಯಕ್ಷರಾದ ಡಾ. ಶಿವಶರಣಪ್ಪ ಹರವಾಳ,ಕಾರ್ಯದರ್ಶಿಗಳಾದ ಡಾ.ಜಗನ್ನಾಥ ಬಿಜಾಪೂರ,ಆಡಳಿತ ಮಂಡಳಿಯ ಸದಸ್ಯರುಗಳಾದ ಶಿವಶರಣಪ್ಪ ನಿಗ್ಗುಡಗಿ,ಸುನಿಲಕುಮಾರ ಪಟ್ಟಣ,ವಿನೋದ ಪಾಟೀಲ್,ಡಾ.ಬಸವರಾಜ ಖಂಡೆರಾವ ಅವರುಗಳು, ಕಾಲೇಜಿನ ವಿದ್ಯಾರ್ಥಿನಿಯರು ವಿವಿಧ ಸಾಂಸ್ಕೃತಿಕ ಮತ್ತು ಆಟೋಟಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿಪತ್ರ ಮತ್ತು ಪಾರಿತೋಷಕ ಪ್ರದಾನ ಮಾಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯಸ್ಥರು ಹಾಗೂ ಡೀನರಾದ ಡಾ.ಕವಿತಾ ಪಾಟೀಲ ಅವರು ವಿದ್ಯಾರ್ಥಿಗಳನುದ್ದೇಶಿಸಿ ವಿದ್ಯಾರ್ಥಿನಿಯರು ಕಾಲೇಜಿನ ಮತ್ತು ಅಂತರ್ ಕಾಲೇಜುಗಳು ನಡೆಸುವ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಕಾಲೇಜಿಗೆ ಕೀರ್ತಿ ಮತ್ತು ನಿಮ್ಮ ಹೆತ್ತ ತಂದೆ ತಾಯಿಗಳಿಗೆ ಸಂತೋಷ ತಂದಿದ್ದಿರಾ ಅದಕ್ಕೆ ನನ್ನ ಹಾರ್ದಿಕ ಅಭಿನಂದನೆಗಳು.ಇನ್ನು ಚೆನ್ನಾಗಿ ಓದಿ,ಆಟೋಟಗಳಲ್ಲಿ ಭಾಗವಹಿಸಿ ನಾಡಿಗೆ ಕೀರ್ತಿ ತನ್ನಿ. ರಾಷ್ಟ್ರ ಮಟ್ಟದಲ್ಲಿ ಬೆಳೆಯಲೆಂದು ಹಾರೈಸಿದರು.
ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಭೀಮಾಶಂಕರ ಬಿಲಗುಂದಿ ಅಧ್ಯಕ್ಷೀಯ ಮಾತನಾಡಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
View Comments
Super