ಬಿಸಿ ಬಿಸಿ ಸುದ್ದಿ

ಪರಿಸರ ಸ್ನೇಹಿ ಸ್ಟಾರ್ಟ್ ಅಪ್ ಗಳಿಗೆ ಆದ್ಯತೆ ನೀಡಿ: ಗೌರವಾನ್ವಿತ ರಾಜ್ಯಪಾಲರು

ಬೆಂಗಳೂರು: ಹೊಸ ಮತ್ತು ಸೃಜನಾತ್ಮಕ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಪರಿಸರ ಸಂರಕ್ಷಣೆಗಾಗಿ ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ ಮೂಲಕ ಭಾರತ ಸರ್ಕಾರವು ಅನೇಕ ಸ್ಟಾರ್ಟ್‌ಅಪ್‌ಗಳನ್ನು ಪ್ರೋತ್ಸಾಹಿಸುತ್ತಿದೆ, ಜಗತ್ತನ್ನು ಹಸಿರಾಗಿಡಲು ನಾವು ಸರ್ವ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ನಾವೆಲ್ಲರೂ ಒಟ್ಟಾಗಿ ಪ್ರತಿಜ್ಞೆ ಮಾಡೋಣ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.

ಶನಿವಾರ ನಗರದ ಸಿಎಂಆರ್ ವಿಶ್ವವಿದ್ಯಾನಿಲಯವು ಆಯೋಜಿಸಿದ್ದ ಏಕೋ ಯೂತ್ ಸ್ಟಾರ್ಟ್ ಅಪ್ ಶೃಂಗಸಭೆ-2022 ಅಲ್ಲಿ ಕರ್ನಾಟಕದಗೌರವಾನ್ವಿತ ರಾಜ್ಯಪಾಲರು ಭಾಗವಹಿಸಿ ಮಾತನಾಡಿದರು.

ಭಾರತೀಯ ಸಂಸ್ಕೃತಿಯಲ್ಲಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇಲ್ಲಿ ಮಾನವ ಜೀವನವು ಭೂಮಿ, ನೀರು, ಗಾಳಿ, ಆಕಾಶ, ಸೂರ್ಯ, ಚಂದ್ರ, ನದಿ, ಮರಗಳು ಮತ್ತು ಪ್ರಾಣಿಗಳು ಮತ್ತು ಪಕ್ಷಿಗಳು ಇತ್ಯಾದಿಗಳ ಸಾಂಗತ್ಯದಲ್ಲಿ ಕಂಡುಬರುತ್ತದೆ. ಪರಿಸರ ಮತ್ತು ಪ್ರಾಣಿಗಳು ಪರಸ್ಪರ ಅವಲಂಬಿತವಾಗಿವೆ. ಭಾರತೀಯ ಚಿಂತನೆಯಲ್ಲಿ ಪರಿಸರ ಸಂರಕ್ಷಣೆಯ ಪರಿಕಲ್ಪನೆಯು ಮನುಕುಲದ ಇತಿಹಾಸದಷ್ಟೇ ಪ್ರಾಚೀನವಾದುದು ಇದಕ್ಕೆ ಕಾರಣ ಎಂದರು.

ಜಾಗತಿಕ ಮಟ್ಟದಲ್ಲಿ ಜಾಗತಿಕ ತಾಪಮಾನವು ದೊಡ್ಡ ಸವಾಲಾಗಿದೆ. ವಾತಾವರಣದಲ್ಲಿ ಮೀಥೇನ್, ಕಾರ್ಬನ್ ಡೈಆಕ್ಸೈಡ್, ಕ್ಲೋರೋ-ಫ್ಲೋರೋ- ರ್ಬನ್ ಮುಂತಾದ ಅನಿಲಗಳ ಹೆಚ್ಚಳದಿಂದ ಭೂಮಿಯ ಸರಾಸರಿ ಉಷ್ಣತೆಯ ಹೆಚ್ಚಳದಿಂದಾಗಿ ಹವಾಮಾನ ಬದಲಾವಣೆಯೂ ಸಂಭವಿಸುತ್ತಿದೆ. ವಿಶ್ವ ಹವಾಮಾನ ಅಭಿವೃದ್ಧಿ ಸಂಸ್ಥೆಯ ಪ್ರಕಾರ, ಭೂಮಿಯ ಉಷ್ಣತೆಯು ನಿರಂತರವಾಗಿ ಹೆಚ್ಚುತ್ತಿದೆ. ತಾಪಮಾನ ಹೆಚ್ಚಳದಿಂದ ಧ್ರುವದಲ್ಲಿ ಹೆಪ್ಪುಗಟ್ಟಿದ ಮಂಜುಗಡ್ಡೆ ಕರಗುತ್ತಿದ್ದು, ಅದರ ಪರಿಣಾಮ ದಿನೇ ದಿನೇ ಸಮುದ್ರ ಮಟ್ಟ ಏರಿಕೆಯ ರೂಪದಲ್ಲಿ ಕಾಣುತ್ತಿದ್ದೇವೆ ಎಂದು ತಿಳಿಸಿದರು.

ವಿಜ್ಞಾನಿಗಳು ಮತ್ತು ಪರಿಸರವಾದಿಗಳು ಪ್ರಕಾರ ಜಾಗತಿಕ ತಾಪಮಾನವನ್ನು ಕಡಿಮೆ ಮಾಡಲು, ಮುಖ್ಯವಾಗಿ ಸಿಎಫ್‌ಸಿ ಅನಿಲಗಳ ಹೊರಸೂಸುವಿಕೆಯನ್ನು ನಿಲ್ಲಿಸಬೇಕು, ಕಡಿಮೆ ಸಿಎಫ್‌ಸಿ ಅನಿಲಗಳನ್ನು ಹೊರಸೂಸುವ ಅಂತಹ ಯಂತ್ರಗಳನ್ನು ಬಳಸಬೇಕಾಗುತ್ತದೆ, ಸಸ್ಯಗಳನ್ನು ಬೆಳೆಸಬೇಕು, ಮರಗಳನ್ನು ಉಳಿಸಬೇಕು. ವಾಹನಗಳು ಮತ್ತು ಕೈಗಾರಿಕೆಗಳಿಂದ ಹೊರಸೂಸುವ ಹಾನಿಕಾರಕ ಅನಿಲಗಳಿಗೆ ಸರಿಯಾದ ವಿಲೇವಾರಿ ವ್ಯವಸ್ಥೆಯ ಅವಶ್ಯಕತೆಯಿದೆ, ನೀರು ಮತ್ತು ವಾಯು ಮಾಲಿನ್ಯವನ್ನು ಕಡಿಮೆ ಮಾಡಲು ಕ್ರಮಗಳನ್ನು ಅಳವಡಿಸಿಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

54 mins ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

1 hour ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

2 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago