ಕಲಬುರಗಿ: ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಕಲಬುರಗಿ ನಗರದಲ್ಲಿ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳ್ಳುತ್ತಿದ್ದು, ಈ ಕಾಮಗಾರಿಗಳು ಉತ್ತಮ ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗಾಗಿ ಪೂರ್ಣಗೊಳಿಸಬೇಕೆಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾದ ಭುವನೇಶ ದೇವಿದಾಸ್ ಪಾಟೀಲ್ ಅವರು ಗುರುವಾರ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ಕಲಬುರಗಿ ನಗರದ ಬಂಬು ಬಜಾರ ರಸ್ತೆಯಲ್ಲಿರುವ ಹಳೇ ಜಲಶುದ್ದೀಕರಣ ಕೇಂದ್ರದಲ್ಲಿ ನೀರು ಶುದ್ಧೀಕರಣ ಘಟಕಗಳ ಪುನಶ್ಚೇತನ, ಪ್ಲಾಕುಲೇಟರ್ ದುರಸ್ತಿ, ಡಿಸ್ಲಡ್ಜ್ ಮಾಡುವುದು ಮತ್ತು ಶುದ್ಧೀಕರಣ ಘಟಕ್ಕೆ ಹೋಗದೇ ಬೈಪಾಸ್ ಆಗುತ್ತಿರುವ ನೀರನ್ನು ಶುದ್ಧೀಕರಣ ಘಟಕಕ್ಕೆ ಹೋಗುವ ವಾಲ್ವುಗಳ ಹಾಗೂ ರಾಸಾಯನಿಕ ಬೆರಿಗೆ ಮಾಡುವ ಚೇಂಬರ್ ಹಾಗೂ ಮೋಟಾರುಗಳನ್ನು ದುರಸ್ತಿ ಮಾಡುವ ಕಾಮಗಾರಿಗಳನ್ನು ಮಹಾನಗರ ಪಾಲಿಕೆ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈಗಾಗಲೇ ಪ್ರಾರಂಭಗೊಂಡ ನಿರಂತರ ನೀರು ಸರಬರಾಜಿಗೆ ಸಂಬಂಧಿಸಿದ ಮೇಲ್ಮಟ ಜಲಸಂಗ್ರಹಗಾರ, ತಾವರಗೇರಾ ಕ್ರಾಸ್ ಹತ್ತಿರ ಹೊಸದಾಗಿ ನಿರ್ಮಿಸುತ್ತಿರುವ ಜಲ ಶುದ್ಧೀಕರಣ ಘಟಕ ಹಾಗೂ ಹರಸೂರುನಿಂದ ತಾವಗೇರಾ ಕ್ರಾಸ್ವರೆಗೂ ಹೊಸದಾಗಿ ಅಳವಡಿಸುತ್ತಿರುವ ಕೊಳವೆ ಮಾರ್ಗವು ಕೂಡಾ ಪಾಲಿಕೆ ಆಯುಕ್ತರು ವೀಕ್ಷಿಸಿದರು.
ಕಲಬುರಗಿ ನಗರಕ್ಕೆ ವಿಶ್ವ ಬ್ಯಾಂಕ್ ನೆರವಿನಿಂದ ಯೋಜನಾ ಅನುಷ್ಠಾನ ಘಟಕ ಕೆ.ಯು.ಡಬ್ಲ್ಯೂ.ಎಸ್.ಎಮ್.ಪಿ. (ಏUWSಒP) ಅಡಿಯಲ್ಲಿನ ೨೪x೭ ನೀರು ಸರಬರಾಜು ಆಧುನೀಕರಣ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ. ಈ ಯೋಜನೆಯನ್ನು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ನಗರಕ್ಕೆ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಕಲಬುರಗಿ ಕೆಯುಐಡಿಎಫ್ಸಿ ಅಧೀಕ್ಷಕ ಅಭಿಯಂತರ ಕಾಂತರಾಜ್ ಕೆ., ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರರಾದ ಕೆ.ಎಸ್.ಪಾಟೀಲ್ ಹಾಗೂ ಮೆ. ಎಲ್ ಆಂಡ್ ಟಿ ಕಂಪನಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…