ಶಹಾಬಾದ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಎನ್ನುವ ಈ ಕಾರ್ಯಕ್ರಮ ಅತ್ಯಂತ ಯಶಸ್ವೀ ಕಾರ್ಯಕ್ರಮವಾಗಿದ್ದು ಸಂಪೂರ್ಣ ಆಡಳಿತವೇ ಹಳ್ಳಿಗೆ ಬಂದು ತಮ್ಮ ಸಮಸ್ಯೆಗಳಿಗೆ ಅಲ್ಲಿಯೇ ಪರಿಹಾರ ನೀಡುವಂತಹ ಕಾರ್ಯಕ್ರಮವಾಗಿದೆ ಎಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.
ಅವರು ಶನಿವಾರ ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಮದಲ್ಲಿ ಆಯೋಜಿಸಲಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದು ಅವರವರ ಇಲಾಖೆಗಳ ಸಮಸ್ಯೆಗಳಿದ್ದರೆ ಅವರು ಇಲ್ಲಿಯೇ ಪರಿಹಾರ ದೊರಕಿಸಿಕೊಡುತ್ತಾರೆ. ಕಂದಾಯ ಇಲಾಖೆಯ ಸಮಸ್ಯೆಗಳಿದ್ದರೆ, ಪಿಂಚಣಿ, ವಿಧವಾ ವೇತನ, ಅಂಗವಿಕಲರ ವೇತನ, ಪಹಣಿಯಲ್ಲಿನ ದೋ?, ಆಧಾರ್ ಕಾರ್ಡ ತಿದ್ದುಪಡಿ ಇತ್ಯಾದಿ ಯಾವುದೇ ಇದ್ದರೂ ಸಹ ಅವುಗಳನ್ನು ಸ್ಥಳದಲ್ಲಿಯೇ ಮಾಡಿಕೊಡಲಾಗುವುದು ಎಂದರು.
ಜಿಲ್ಲಾಡಳಿತ ಪ್ರತಿನಿಧಿಸುವ ತಾಲೂಕಾ ಆಡಳಿತದಿಂದ ಕುಂದು ಕೊರತೆಗಳನ್ನು ನಿವಾರಿಸುವತ್ತ ಎಲ್ಲಾ ಪ್ರಯತ್ನ ಮಾಡುತ್ತೇವೆ. ನೀವ? ಅಲ್ಲ ನಿಮ್ಮಲ್ಲಿ ಇನ್ಯಾರಾದರೂ ಸಮಸ್ಯೆಯಿದ್ದವರಿದ್ದರೆ ಅವರಿಗೂ ಹೇಳಿ ಕಳುಹಿಸಿಕೊಡಿ ಎಂದು ಕೋರಿದರು.
ಗ್ರೇಡ್-೨ ತಹಸೀಲ್ದಾರ ಗುರುರಾಜ ಸಂಗಾವಿ ಮಾತನಾಡಿ, ಜನತೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಲ್ಲಿ ಇಲ್ಲಿ ಸಾಧ್ಯವಿರುವ ಎಲ್ಲಾ ಸಮಸ್ಯೆಗಳಿಗೂ ಇಲ್ಲಿಯೇ ಪರಿಹಾರ ನೀಡುತ್ತೇವೆ. ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಪಟ್ಟ ಇಲಾಖೆಗಳಿಗೆ ಅರ್ಜಿಯನ್ನು ಕಳುಹಿಸಿ ಮಾಡಲಾಗುವುದು ಎಂದರು.
ತೊನಸನಹಳ್ಳಿ(ಎಸ್) ಗ್ರಾಪಂ ಅಧ್ಯಕ್ಷೆ ತಾಪಂ ಕಾವೇರಿ ಮಹಾಲಿಂಗ ಮದ್ರಿಕಿ, ತಾಪಂ ಇಓ ಡಾ.ಬಸಲಿಂಗಪ್ಪ ಡಿಗ್ಗಿ, ಪ್ರಭು ಮುತ್ಯಾ,ಪಶು ಇಲಾಖೆಯ ಡಾ.ನೀಲಪ್ಪ ಪಾಟೀಲ,ರೈತ ಸಂಪರ್ಕ ಕೇಂದ್ರದ ಅಧಿಕಾರಿ ರವೀಂದ್ರ, ಸಿಡಿಪಿಓ ಇಲಾಖೆಯ ಅಧಿಕಾರಿ ಬಿ.ಎಸ್.ಹೊಸಮನಿ, ಸಮಾಜ ಕಲ್ಯಾಣ ಇಲಾಖೆಯಿಂದ ರವಿ ಮುತ್ತಗಾ, ಶಿಕ್ಷಣ ಸಂಯೋಜಕ ಶ್ರೀಧರ ರಾಠೋಡ, ಕಂದಾಯ ಅಧಿಕಾರಿ ಹಣಮಂತರಾವ ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಒಟ್ಟು ೩೧ ಅರ್ಜಿಗಳು ಬಂದಿದ್ದು, ಅದರಲ್ಲಿ ೨೦ ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಯಿತು. ಉಳಿದ ೧೧ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ವರ್ಗಾಯಿಸಲಾಯಿತು.
ನಂತರ ಅಂಗನವಾಡಿಗೆ ಬೇಟಿ ನೀಡಿದ ತಹಸೀಲ್ದಾರ ಮಕ್ಕಳಲ್ಲಿ ಪೋಷಕಾಂಶ ಹೆಚ್ಚಿಸಲು ಸೇವಿಸುವ ಆಹಾರ ಪದಾರ್ಥಗಳನ್ನು ಅನಾವರಣಗೊಳಿಸಲಾಗಿತ್ತು.ಅಂಗನವಾಡಿಯಿಂದ ನೀಡಲಾಗುವ ಆಹಾರ ಧಾನ್ಯಗಳಿಂದ ಮಕ್ಕಳಿಗೆ ರುಚಿಕರ ತಿನಸು ಮಾಡಬಹುದು ಎಂದು ತಿಳಿಸುವ ವಸ್ತು ಪ್ರದರ್ಶನ ಎಲ್ಲರ ಗಮನ ಸೆಳೆಯುತ್ತಿತ್ತು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…