ಕಲಬುರಗಿ: ಕಾಂಗ್ರೆಸ್ ಜನಜಾಗೃತಿ ಯಾತ್ರೆಗೆ ಕಲಬುರಗಿ ದಕ್ಷಿಣದಲ್ಲಿ ಭಾರಿ ಜನ ಬೆಂಬಲ ವ್ಯಕ್ತವಾಗಿದೆ. ಮಾಜಿ ಎಂಎಲ್ಸಿ ಅಲ್ಲಂಪ್ರಭು ಪಾಟೀಲ್ ನೇತೃತ್ವದಲ್ಲಿ ಆರಂಭವಾಗಿರುವ 2 ನೇ ಹಂತದ ಪಾದಯಾತ್ರೆಯು ಮಂಗಳವಾರ ಗುಲ್ಲಾಬಾವಡಿ, ರಾಮ ಮಂದಿರ, ಕರುಣೇಶ್ವ ರ ನಗರ, ಇಂದಿರಾ ನಗರ, ಜೀವನ ಪ್ರಕಾಶ ಸಾಲೆ ಪ್ರದೇಶಲ್ಲೆಲ್ಲಾ ಸಂಚರಿಸಿತು.
ಕರುಣೇಶ್ವರ ನಗರದಲ್ಲಂತೂ ಸುಮಂಗಲೀಯರು ಸಾಲಾಗಿ ನಿಂತು ಕಲಶದೊಂದಿಗೆ ಅಲ್ಲಂಪ್ರಭು ಪಾಟೀಲ್ ಸೇರಿದಂತೆ ಪಕ್ಷದ ಪ್ರಮುಖರೆಲ್ಲರನ್ನು ಸ್ವಾಗತಿಸಿ ಬೆಂಬಲಿಸಿದರು. ಇದಲ್ಲದೆ ಪಾದಯಾತ್ರೆ ಸಾಗಿದ ಬಡಾವಣೆಗಳಲ್ಲೆಲ್ಲಾ ಜನ ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಮೂಲಕ ತಮ್ಮ ಸ್ಪಂದನೆ ವ್ಯಕ್ತಪಡಿಸಿದ್ದು ವಿಶೇಷವಾಗಿತ್ತು.
ಸರ್ದಾರ್ ಪಟೇಲ್ ವೃತ್ತದಲ್ಲಿ ಪಟೇಲರಿಗೆ ಮಾಲೆ ಹಾಕುವ ಮೂಲಕ ಅಲ್ಲಂಪ್ರಭು ಪಾಟೀಲರು ಉಕ್ಕಿನ ಮನುಷ್ಯನಿಗೆ ಗೌರವ ಸಲ್ಲಿಸಿದರು. ಕೆಪಿಸಿಸಿ ಪ್ರ. ಕಾರ್ಯದರ್ಶಿ ಶರಣು ಮೋದಿ, ಸಂತೋಷ ಬಿಲಗುಂದಿ, ಡಾ. ಕಿರಣ ದೇಶಮುಖ, ವಾಣಿಶ್ರೀ ಸಗರಕರ್, ಲತಾ ರಾಠೋಡ, ಮಹೇಶ ಹೊಸೂರಕರ್, ಹುಲಿಗೆಪ್ಪ ಕನಕಗಿರಿ, ಹಮೀದ್, ಶೀನು ಲಾಖೆ, ದಿಗಂಬರ ಬೆಳಮಗಿ, ಸಂತೋಷ ಪಾಟೀಲ್ ದಣ್ಣೂರ, ಬ್ಲಾಕ್ ಕಾಂಗ್ರೆಸ್ ಅದ್ಕ್ಷರಾದ ಲಿಂಗರಾಜ ತಾರಫೈಲ್, ಲಿಂಗರಾಜ ಕಣ್ಣಿ ಸೇರಿದಂತೆ ಪಕ್ಷದ ಪ್ರಮುಖರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲಂಪ್ರಭು ಪಾಟೀಲ್ ನೇತ್ವದ ಕಾಂಗ್ರೆಸ್ ಜನ ಜಾಗೃತಿಯ ಈ ಪಾದಯಾತ್ರೆ ಇನ್ನೂ ನಾಲ್ಕು ದಿನ ಮುಂದುವರಿಯಲಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…