ಬಿಟ್ಟು ಬಿಡದೇ ಸುರಿದ ಮಳೆಯಿಂದ ಬೆಳೆ ಹಾನಿ

ಶಹಾಬಾದ : ಇತ್ತಿಚ್ಚಿಗೆ ಬಿಟ್ಟು ಬಿಡದೇ ಸುರಿದ ಮಳೆಯಿಂದ ಬಿತ್ತಿ ಬೆಳೆದ ರೈತನ ಬೆಳೆ ನೀರಿನಿಂದ ಜಲಾವೃತಗೊಂಡು ಅಪಾರ ಹಾನಿಯನ್ನುಂಟು ಮಾಡಿದೆ.ತಾಲೂಕಿನ ಸುತ್ತಮುತ್ತಲಿನ ಹೊಲದಲ್ಲಿ ಬೆಳೆದ ಬೆಳೆ ಸಂಪೂರ್ಣವಾಗಿ ನಾಶವಾದ ಪರಿಣಾಮ ರೈತರು ಸಂಕಷ್ಟ ಅನುಭವಿಸುವಂತಾಗಿದೆ.

ಜೂನ್ ತಿಂಗಳಲ್ಲಿ ಭೂಮಿಯಲ್ಲಿ ಬೀಜ ಬಿತ್ತಿದ ನಂತರ ಮಳೆ ಬಾರದೇ ಸಂಕಷ್ಟದಲ್ಲಿದ್ದರು. ನಂತರ ಸುರಿದ ಅಲ್ಪ ಮಳೆಗೆ ಮೊಳಕೆ ಒಡೆದು ಬಂದ ಬೆಳೆ ಬಾಡುವ ಹೊತ್ತಿಗೆ ಮಳೆ ಬಂದಿದ್ದರಿಂದ ತುಸು ಬೆಳೆಗಳಿಗೆ ಜೀವ ಬಂದಿತು. ಆದರೆ ಕಳೆದ ಹದಿನೈದು ದಿನಗಳ ಹಿಂದಷ್ಟೇ ಬಿಟ್ಟು ಬಿಡದೇ ದಿನಾಲೂ ಸುರಿದ ಮಳೆಯಿಂದ ತಾಲೂಕಿನ ಬಹುತೇಖ ಮುತ್ತಗಿ,ಮರತೂರ, ಭಂಕೂರ, ತೊನಸನಹಳ್ಳಿ, ಗೋಆ(ಕೆ), ಶಂಕರವಾಡಿ, ಹೊನಗುಂಟಾ ಗ್ರಾಮದ ರೈತರು ಬೆಳೆದ ಬೆಳೆ ನಾಶವಾಗಿ ರೈತ ಕಣ್ಣೀರು ಸುರಿಸುವಂತಾಗಿದೆ. ಸಾಲ ಮಾಡಿ ಬೀಜ,ಗೊಬ್ಬರ್ ಹಾಗೂ ಕ್ರಿಮಿನಾಶಕ ಖರೀದಿಸಿದ ರೈತ ಬೆಳೆ ಬಾರದಿರುವುದರಿಂದ ಸಾಲ ಸೂಳಿಯಲ್ಲಿ ಸಿಲುಕಿದಂತಾಗಿದೆ. ಜೂನ್ ತಿಂಗಳಿನಿಂದ ನಿರಂತರವಾಗಿ ಮಳೆ ಬಂದ ಪರಿಣಾಮ ಬಿತ್ತನೆ ಮಾಡಲು ಅವಕಾಶ ಸಿಗಲಿಲ್ಲ.

ಹೊಲದಲ್ಲಿ ನೀರು ನಿಂತು ಬಿತ್ತನೆಗೂ ತೊಂದರೆಯಾಗಿತ್ತು.ಇದರಿಂದ ಮುಂಗಾರು ಬೆಳೆಗಳಾದ ಹೆಸರು, ಉದ್ದು ಸಂಪೂರ್ಣ ಬಿತ್ತಲಾರದೇ ತೊಂದರೆಗೆ ರೈತರು ಒಳಗಾದರು. ಆದರೆ ಜುಲೈ ತಿಂಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ, ಹೊಲ ಗಾಳಿಯಾಡಿದ್ದರಿಂದ ರೈತರು ತೊಗರಿ ಬಿತ್ತನೆ ಮಾಡಿದರು.

ಅಲ್ಲದೇ ಬೀಜವೂ ಮೊಳಕೆಯೊಡೆದು ಎರಡು ಎಲೆ ಬಿಟ್ಟಿದ್ದ ಬೆಳೆಯನ್ನು ಕಂಡು ರೈತರು ಸಂತಸದಲ್ಲಿದ್ದರು.ಆದರೆ ಮತ್ತೆ ಸುರಿದ ನಿರಂತರ ಮಳೆಯಿಂದ ರೈತರ ಹೊಲಗಳಲ್ಲಿ ನೀರು ಜಮಾವಣೆಗೊಂಡು ಅಲ್ಪಸ್ವಲ್ಪ ಉಳಿದ ಬೆಳೆಗಳ ಬೇರು ಕೊಳೆತು ನಾಶವಾಗಿದೆ.ಅಲ್ಲದೇ ತೇವಾಂಶ ಹೆಚ್ಚಾಗಿ ತೊಗರಿ, ಹತ್ತಿ, ಸಂಪರ್ಣ ಹಾಳಾಗಿದೆ. ಇದರಿಂದ ರೈತ ಆರ್ಥಿಕ ಸಂಕಷ್ಟದಲ್ಲಿ ತೊಳಲಾಡುತ್ತಿದ್ದಾನೆ.ಅವನ ನೆರವಿಗೆ ಸರಕಾರ ಬರಬೇಕಿದೆ. ಇತ್ತ ಸಂಬಂಧಪಟ್ಟ ಅಧಿಕಾರಿಗಳು ಧಾವಿಸಿ ಹಾನಿಯಾದ ಬೆಳೆಗಳ ಸಮೀಕ್ಷೆ ನಡೆಸಬೇಕು.ಅಲ್ಲದೇ ಹಾನಿಯಾದ ರೈತರಿಗೆ ಪರಿಹಾರ ಧನ ನೀಡಬೇಕು ಎಂಬುದು ಹೊನಗುಂಟಾ ರೈತ ರಾಜೇಶ ಯನಗುಂಟಿಕರ್ ಆಗ್ರಹಿಸಿದ್ದಾರೆ.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

5 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

8 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

13 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

13 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

15 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420