ತೆಲಂಗಾಣ ನಿಲುವಿಗೆ ವ್ಯಕ್ತವಾಗದ ವಿರೋಧ: ವಾದಿರಾಜ ವ್ಯಾಸಮುದ್ರ ಕಳವಳ

  • ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ವಲಯ ಘಟಕ ಉದ್ಘಾಟನೆ

ಕಲಬುರಗಿ: ತೆಲಂಗಾಣವು ರಾಯಚೂರು ತನಗೆ ಸೇರಬೇಕು ಎಂದು ಪ್ರಸ್ತಾಪ ವ್ಯಕ್ತಪಡಿಸಿದಾಗಲೂ ಕರ್ನಾಟಕ ಸರ್ಕಾರದಿಂದಲೂ ಕನ್ನಡ ಪರ ಹೋರಾಟ ಸಂಘಟನೆಗಳಿಂದ ಪ್ರಬಲವಾದ ವಿರೋಧ ವ್ಯಕ್ತವಾಗದಿರುವುದು ಅತ್ಯಂತ ಕಳವಳಕಾರಿ ಸಂಗತಿ ಎಂದು ಸಂಯುಕ್ತ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕ ಹಾಗೂ ಗುರುಪಾದೇಶ್ವರ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಾದಿರಾಜ ವ್ಯಾಸಮುದ್ರ ಹೇಳಿದರು.

ನಗರದ ರಮಾಬಾಯಿ ಜಾಗಿರದಾರ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ವಲಯದ ಕಾರ್ಯಚಟುವಟಿಕೆಗಳ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು,
ರಾಯಚೂರು ಯಾವತ್ತೂ ಕನ್ನಡ ನಾಡಿನ ಅವಿಭಾಜ್ಯ ಅಂಗವಾಗಿದ್ದು, ಪ್ರತಿಯೊಬ್ಬ ಕನ್ನಡಿಗನೂ ವಿರೋಧಿಸುವ ಮೂಲಕ ತೆಲಂಗಾಣಕ್ಕೆ ತಕ್ಕ ಉತ್ತರ ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಬಗ್ಗೆ ಚಕಾರ ಎತ್ತುತ್ತಿಲ್ಲ.ಕನ್ನಡ‌ಸಾಹಿತ್ಯ ಪರಿಷತ್ ಈ ಕುರಿತು ಹೋರಾಟ ಹಮ್ಮಿಕೊಳ್ಳುವ ಮೂಲಕ ಪ್ರಬಲವಾಗಿ ವಿರೋಧ ವ್ಯಕ್ತಪಡಿಸಲಿ ಎಂದು‌ ಸಲಹೆ ನೀಡಿ,ನೂತನ‌ ಪದಾಧಿಕಾರಿ ಗಳಿಗೆ ಶುಭ ಕೋರಿದರು.

ಖ್ಯಾತ ಎಲಬು ಮತ್ತು ಕೀಲು ವೈದ್ಯರಾದ ಡಾ.ಅಲೋಕ ಪಾಟೀಲ್ ರೇವೂರ ಮಾತನಾಡಿ, ಕನ್ನಡ ಉಳಿಸುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ.‌ಎಲ್ಲರೂ ಮನೆಯಲ್ಲಿ ಕನ್ನಡ‌ ಮಾತನಾಡಬೇಕು ಎಂದು ಸಲಹೆ ನೀಡಿದರು.

ಎಸ್.ಡಿ.ಆರ್.ಎಫ್ ನ ಡೆಪ್ಯೂಟಿ ಕಮಾಂಡೆಂಟ್ ಗುರುನಾಥ ಮಡಿವಾಳ ಮಾತನಾಡಿ, ಕನ್ನಡ ಭಾಷೆ ಉಳಿಸಿಕೊಳ್ಳಲು ಹೋರಾಟ ಮಾಡುವ ಕಾಲ ಬಂದಿರುವುದು ದುರಂತವೇ ಸರಿ. ಅನ್ಯ ಭಾಷೆಗಳ ಪ್ರಭಾವಕ್ಕೊಳಗಾಗಿ ಕನ್ನಡ ಭಾಷೆ ಅವನತಿಯತ್ತ ಸಾಗುತ್ತಿದೆ. ಕನ್ನಡಿಗರಾದ ನಾವೆಲ್ಲರೂ ಕನ್ನಡವನ್ನು ಉಳಿಸಿ ಬೆಳೆಸುವ ಮೂಲಕ ಕನ್ನಡತನದ ಬೀಜವನ್ನು ಬಿತ್ತುವ ಕೆಲಸ ಮಾಡೋಣ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿದರು.

ರಮಾಬಾಯಿ ಜಾಗಿರದಾರ ಪದವಿಪೂರ್ವ ವಿಜ್ಞಾನ ಕಾಲೇಜಿನ ಶೈಕ್ಷಣಿಕ ನಿರ್ದೆಶಕ ಹಾಗೂ ಪ್ರಾಚಾರ್ಯ ಡಾ.‌ಪ್ರಹ್ಲಾದ ಬುರ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಸಾಪ ದಕ್ಷಿಣ ವಲಯದ ಅಧ್ಯಕ್ಷ ಶಾಮಸುಂದರ ಕುಲಕರ್ಣಿ ಪ್ರಾಸ್ತಾವಿಕ‌ ಮಾತಾಡಿದರು.

ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ವಿಪ್ರಸಮಾಜದ ಮುಖಂಡ ರವಿಲಾತೂರಕರ್, ಚರಣರಾಜ ಚಪ್ಪರಬಂದಿ, ಬಾಬುರಾವ ಹಾಗರಗುಂಡಗಿ,
ಮಾಜಿ‌ ಸೈನಿಕ ಮಲ್ಲಣ್ಣ ಮಡಿವಾಳ, ರಾಜೇಂದ್ರ,
ಕಸಾಪ ದಕ್ಷಿಣ ವಲಯದ ಗೌರವ ಕಾರ್ಯದರ್ಶಿ ಗಳಾದ ಧನೇಶ ಮಾಲಗತ್ತಿ, ರವಿಕುಮಾರ ಶಹಾಪುರಕರ, ಮಹಿಳಾ ಪ್ರತಿನಿಧಿ ಜ್ಯೋತ್ಸನಾ ಹೇರೂರ, ಸಂಘಟನಾ ಕಾರ್ಯದರ್ಶಿಗಳಾದ ಮಲ್ಲಿನಾಥ ಸಂಘಶೆಟ್ಟಿ, ಶಿವಯ್ಯ ಮಠಪತಿ,ಸಹ ಕಾರ್ಯದರ್ಶಿ ಶಿವಕುಮಾರ ಸಿ.ಎಚ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿ ಶ್ರೀಕಾಂತ‌ ಅಗ್ನಿಹೋತ್ರಿ ಪ್ರಾರ್ಥಿಸಿದರು. ರವಿಕುಮಾರ ಶಹಾಪುರಕರ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಮಳೇಂದ್ರ ಹೀರೆಮಠ ವಂದಿಸಿದರು.
ಕಸಾಪ ದಕ್ಷಿಣ ವಲಯದ ಮಹಿಳಾ‌ ಪ್ರತಿನಿಧಿ ಜ್ಯೋತ್ಸನಾ ರಾಜೇಂದ್ರ ಹೇರೂರ ಕಾರ್ಯಕ್ರಮ ನಿರೂಪಿಸಿದರು.

ಕಲಬುರಗಿ ದಕ್ಷಿಣ ವಲಯ ವ್ಯಾಪ್ತಿಯ ಶಾಲಾ, ಕಾಲೇಜುಗಳ ಹತ್ತನೇ ತರಗತಿಯ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದರೆ ದಕ್ಷಿಣ ಕಸಾಪ ಘಟಕದಿಂದ ಸೂಕ್ತ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಗುವುದು. – ಶಾಮಸುಂದರ ಕುಲಕರ್ಣಿ, ಅಧ್ಯಕ್ಷರು, ಕಸಾಪ ದಕ್ಷಿಣ ವಲಯ
ಜಿಲ್ಲಾ ಕನ್ನಡ‌ಸಾಹಿತ್ಯ ಪರಿಷತ್ ವಿವಿಧ ಕ್ಷೇತ್ರಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಇಡೀ ರಾಜ್ಯದಲ್ಲಿ ಮಾದರಿಯನ್ನಾಗಿಸುವ ಸಂಕಲ್ಪವನ್ನು ಹೊಂದಲಾಗಿದೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ. – ವಿಜಯಕುಮಾರ ತೇಗಲತಿಪ್ಪಿ, ಅಧ್ಯಕ್ಷರು, ಜಿಲ್ಲಾ ಕಸಾಪ.
emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

9 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

12 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

17 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

17 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

19 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420