ಶಹಾಪುರ: ಕೆಲವು ತಿಂಗಳುಗಳ ಹಿಂದೆ ಸಂಶಯಾಸ್ಪದವಾಗಿ ಸಾವಿಗೀಡಾದ ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ ಅವರ ಕುರಿತು ಸಿನಿಮಾ ಮಾಡುವುದನ್ನು ನಿಲ್ಲಿಸುವಂತೆ ಮಧು ಪತ್ತಾರ ಅವರ ತಂದೆ ನಾಗರಾಜ ಪತ್ತಾರ್ ರಾಯಚೂರು ಜಿಲ್ಲಾ ಎಸ್ಪಿಗೆ ದೂರನ್ನು ಕೊಟ್ಟಿದ್ದಾರೆ.
ಮಧು ಪತ್ತಾರ ಸಂಶಯಾಸ್ಪದ ಸಾವಿನ ಪ್ರಕರಣ ಸಿಐಡಿ ತನಿಖೆ ಮುಗಿದಿದ್ದು ರಾಯಚೂರು ಜಿಲ್ಲಾ ನ್ಯಾಯಾಲಯದ ವಿಚಾರಣೆಯಲಿದೆ ಈಗಾಗಲೇ ಸಂಬಂಧಪಟ್ಟ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಧು ಪತ್ತಾರ ಸಾವಿನ ಪ್ರಕರಣ ಕುರಿತು ರಾಜ್ಯ ಮತ್ತು ಅಂತಾರಾಷ್ಟ್ರ ಮಟ್ಟದಲ್ಲಿ ಹೋರಾಟ ಮಾಡಿ ಪ್ರಗತಿಪರ ಚಿಂತಕರಿಂದ ಕೆಲವು ಚರ್ಚೆಗಳು ಕೂಡ ನಡೆದಿವೆ.
ಮಧು ಸಾವಿನ ನೋವಿನಿಂದ ಇನ್ನೂ ನಾವು ಹೊರಬಂದಿಲ್ಲ ಅದಕ್ಕಿಂತಲೂ ಮುಂಚೆ ರಾಯಚೂರು ಯುವಕರು ಮಧು ಪತ್ತಾರ ಸಾವಿನ ಕುರಿತು ಸಿನಿಮಾ ಚಿತ್ರೀಕರಣ ಮಾಡುತ್ತಿರುವುದು ನಮಗೆ ತುಂಬಾ ಬೇಸರವಾಗಿದೆ ಎಂದು ಅವರ ಹೆತ್ತವರು ಎಸ್ಪಿಗೆ ದೂರನ್ನು ನೀಡಿ ವಿನಂತಿಸಿಕೊಂಡಿದ್ದಾರೆ.
ನ್ಯಾಯಾಲಯಲಿರುವ ಪ್ರಕರಣ ತಿರುವು ಪಡೆಯುವುದರಿಂದ ಯಾವುದೇ ರೀತಿಯ ಸಿನಿಮಾ ನಿರ್ಮಾಣಕ್ಕೆ ಅನುಮತಿ ನೀಡದೆ, ತಡೆಯೊಡ್ಡಬೇಕೆಂದು ರಾಯಚೂರು ಜಿಲ್ಲಾ ಎಸ್ಪಿಗೆ ದೂರು ಸಲ್ಲಿಸಲಾಗಿದೆ ಎಂದು ವಿಶ್ವಕರ್ಮ ಸಮಾಜದ ಮುಖಂಡ ಮಾರುತಿ ಬಡಿಗೇರ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಮುಖಂಡರಾದ ಈಶ್ವರ್ ಎ. ಮಿಲಿಟರಿ ಮಲ್ಲೇಶಿ ಹಾಗೂ ಮಧು ಪತ್ತಾರ ತಂದೆ ನಾಗರಾಜ್ ಪತ್ತಾರ್ ಹಾಗೂ ಅವರ ಕುಟುಂಬದ ಎಲ್ಲ ಸದಸ್ಯರು ಹಾಜರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…