ಸರಕಾರ ನೀಡಿರುವ ಪ್ರಶಸ್ತಿ ನಮ್ಮೆಲ್ಲ ತಂಡಕ್ಕೆ ಸಲ್ಲುತ್ತದೆ-ಡಾ:ಆರ್.ವಿ ನಾಯಕ

  • ಪ್ರಶಸ್ತಿ ಪುರಸ್ಕೃತ ಡಾ:ಆರ್.ವಿ ನಾಯಕಗೆ ಪತ್ರಕರ್ತರ ಸಂಘ ಸನ್ಮಾನ

ಸುರಪುರ: ಕರ್ನಾಟಕ ಸರಕಾರ ದಿಂದ ಉತ್ತಮ ತಾಲೂಕು ಆರೋಗ್ಯಾಧಿಕಾರಿ ಪ್ರಶಸ್ತಿ ಪಡೆದ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ಅವರಿಗೆ ಇಲ್ಲಿಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿದ ಪ್ರಶಸ್ತಿ ಪುರಸ್ಕೃತ ಟಿಹೆಚ್‌ಓ ಡಾ:ಆರ್.ವಿ ನಾಯಕ ಮಾತನಾಡಿ,ಸರಕಾರ ಇಂದು ಪ್ರಶಸ್ತಿಯನ್ನು ನೀಡಿದೆ ಎಂದರೆ ಅದು ಕೇವಲ ನನ್ನೊಬ್ಬನಿಂದ ಬಂದಿದ್ದಲ್ಲ ಕೊರೊನಾ ಸಂದರ್ಭದಲ್ಲಿ ಅವಿರತ ಕಾರ್ಯನಿರ್ವಹಿಸಲು ನೆರವು ನೀಡಿದ ಕ್ಷೇತ್ರದ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಅವರ ಸಹಕಾರವೂ ತುಂಬಾ ಇದೆ ಜೊತೆಗೆ ನಮ್ಮ ಇಲಾಖೆಯ ಎಲ್ಲಾ ವೈದ್ಯರು ಮತ್ತು ಸಿಬ್ಬಂದಿಗಳು ಹಾಗೂ ಅಂಗನವಾಡಿ,ಆಶಾ ಕಾರ್ಯಕರ್ತೆಯರ ಶ್ರಮವೂ ಇದೆ ಜೊತೆಗೆ ಮಾದ್ಯಗಳು ಸಹಕಾರ ನೀಡಿರುವುದರ ಫಲವಾಗಿ ಲಭಿಸಿದೆ ಎಂದರು.ಅಂದು ನಮ್ಮ ಕುಟುಂಬದ ಒಟ್ಟು ೭ ಜನರು ಕೊರೊನಾ ಸೊಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾಗ ಶಾಸಕರಾದ ರಾಜುಗೌಡ,ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಸೇರಿದಂತೆ ಅನೇಕರು ಆರೋಗ್ಯವನ್ನು ನಿರಂತರವಾಗಿ ವಿಚಾರಿಸುತ್ತಿದ್ದರು ಎಂದು ಸ್ಮರಿಸಿದರು.

ಅಲ್ಲದೆ ಸರಕಾರ ಒಟ್ಟು ಐದು ಸಾವಿರ ಜನ ವೈದ್ಯರಲ್ಲಿ ೧೫೦ ಜನರನ್ನು ಗುರುತಿಸಿ ಪ್ರಶಸ್ತಿ ನೀಡಿದೆ,ಇದರಿಂದ ನಮ್ಮ ಜವಬ್ದಾರಿ ಇನ್ನಷ್ಟು ಹೆಚ್ಚಿದೆ.ಆದ್ದರಿಂದ ತಾವೆಲ್ಲರೂ ಮುಂದೆಯೂ ಎಂದಿನಂತೆ ಸಹಕಾರ ನೀಡುವ ಮೂಲಕ ತಾಲೂಕಿನಲ್ಲಿ ಉತ್ತಮ ಸೇವೆ ಮಾಡಲು ಸಹಕಾರ ನೀಡುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಗಿರೀಶ ಶಾಬಾದಿ ಸೇರಿದಂತೆ ಅನೇಕ ಜನ ಪತ್ರಕರ್ತರು ಮಾತನಾಡಿ,ಡಾ:ಆರ್.ವಿ ನಾಯಕ ಅವರು ತಾಲೂಕು ಆರೋಗ್ಯಾಧಿಕಾರಿಗಳಾದ ಮೇಲೆ ಅನೇಕ ಸುಧಾರಣೆಗಳಾಗಿವೆ,ಅಲ್ಲದೆ ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಅವರು ಕಾರ್ಯನಿರ್ವಹಿಸಿದ ರೀತಿ ಅನನ್ಯವಾಗಿದೆ.ಸ್ವತಃ ತಮಗೇ ಕೊರೊನಾ ಸೊಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಇಲ್ಲಿಯ ಜನರ ಆರೋಗ್ಯದ ಕುರಿತು ಸದಾಕಾಲ ಗಮನಹರಿಸುತ್ತಿದ್ದರು.ಕೋವಿಡ್ ಸಂದರ್ಭದಲ್ಲಿ ಮಾತ್ರವಲ್ಲದೆ ಇನ್ನುಳಿದ ಸಂದರ್ಭದಲ್ಲೂ ಯಾರೇ ಆರೋಗ್ಯ ಇಲಾಖೆಯ ಸಹಕಾರ ಕೇಳಿದಲ್ಲಿ ತಕ್ಷಣಕ್ಕೆ ಸ್ಪಂದಿಸುತ್ತಿದ್ದರು.ಆದ್ದರಿಂದ ಅವರ ಶ್ರಮವನ್ನು ಗುರುತಿಸಿ ಸರಕಾರ ಇಂದು ಉತ್ತಮ ತಾಲೂಕು ಆರೋಗ್ಯಾಧಿಕಾರಿ ಪ್ರಶಸ್ತಿ ನೀಡಿದೆ,ಡಾ;ಆರ್.ವಿ ನಾಯಕ ಅವರಿಗೆ ಪ್ರಶಸ್ತಿ ದೊರಕಿದ್ದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು ಹಾಗೂ ಡಾ:ಆರ್.ವಿ ನಾಯಕ ಅವರ ಹಿತೈಷಿಗಳಾದ ಹೊನ್ನಪ್ಪ ತಳವಾರ,ವೆಂಕಟೇಶ ಚಟ್ನಳ್ಳಿ,ಮಲ್ಲು ವಿಷ್ಣು ಸೇನಾ ಅವರು ಕೂಡ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಆರೊಗ್ಯ ಇಲಾಖೆಯ ಸಿಬ್ಬಂದಿ ಸಂಗಣ್ಣ ಚೆಟ್ಟಿ ಹಾಗೂ ಪತ್ರಕರ್ತರಾದ ಮಲ್ಲು ಗುಳಗಿ,ಹೊನ್ನಪ್ಪ ತೇಲ್ಕರ್,ಕಲೀಂ ಫರೀದಿ,ರಾಜು ಕುಂಬಾರ,ಶ್ರಿಕರಭಟ್ ಜೋಷಿ,ವಿರೇಶರಡ್ಡಿ ಯಾಳಗಿ,ಮಹಾದೇವಪ್ಪ ಬೊಮ್ಮನಹಳ್ಳಿ,ಪರಶುರಾಮ ಮಲ್ಲಿಬಾವಿ,ರಾಘವೇಂದ್ರ ಮಾಸ್ತರ,ಶ್ರೀಮಂತ ಚಲುವಾದಿ,ಮದನಲಾಲ ಕಟ್ಟಿಮನಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

4 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

7 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

11 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

12 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

14 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420