ಶಹಾಬಾದ:ಸೇಡಂ ಶೈಕ್ಷಣಿಕ ಜಿಲ್ಲೆಗೆ ಶಹಾಬಾದ ತಾಲೂಕಾವನ್ನು ಸೇರಿಸುತ್ತಿರುವುದು ಸಂಪೂರ್ಣ ಅವೈಜ್ಞಾನಿಕ ಕ್ರಮವಾಗಿದ್ದು, ಯಾವುದೇ ಕಾರಣಕ್ಕೂ ಕಲಬುರಗಿ ಜಿಲ್ಲಾ ಕೇಂದ್ರದಿಂದ ಸೇಡಂ ಶೈಕ್ಷಣಿಕ ಜಿಲ್ಲೆಗೆ ಸೇರಿಸುವುದಕ್ಕೆ ನಮ್ಮ ವಿರೋಧವಿದೆ ಎಂದು ಕಸಾಪ ಮಾಜಿ ಅಧ್ಯಕ್ಷ ನಾಗಣ್ಣ ರಾಂಪೂರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಹಾಬಾದಿಂದ ಕಲಬುರಗಿ ಜಿಲ್ಲಾ ಕೇಂದ್ರ ಕೇವಲ ೨೫ ಕಿಮೀ ದೂರದಲ್ಲಿ.ಆದರೆ ಸೇಡಂ ಸುಮಾರು ೭೦ ಕಿಮೀ ದೂರದಲ್ಲಿದೆ.ಅಲ್ಲದೇ ಸೇಡಂಗೆ ಹೋಗಲು ಯಾವುದೇ ರೀತಿಯ ಅನುಕೂಲತೆಗಳು ಇಲ್ಲ. ಶಹಾಬಾದ ತಾಲೂಕಿನ ಹೊನಗುಂಟಾ ಗ್ರಾಮದವರು ತಾಲೂಕಿಗೆ ಬರಲು ಸುಮಾರು ೧೩ ಕಿಮೀ ಆಗುತ್ತದೆ. ಕಡೆಹಳ್ಳಿ ಗ್ರಾಮದವರು ಹೊನಗುಂಟಾ ಗ್ರಾಮಕ್ಕೆ ಬಂದು ನಂತರ ತಾಲೂಕಾ ಕೇಂದ್ರವಾದ ಶಹಾಬಾದಕ್ಕೆ ಬರಬೇಕು.ಹೀಗೆ ಅನೇಕ ಗ್ರಾಮದ ಜನರಿಗೆ ಮತ್ತಷ್ಟು ದೂರವಾಗುತ್ತದೆ.
ಮರತೂರ ಗ್ರಾಮದವರಿಗೆ ಕಲಬುರಗಿ ಅತ್ಯಂತ ಸಮೀಪದಲ್ಲಿದೆ.ಅಲ್ಲಿನ ಗ್ರಾಮಸ್ಥರು ದೂರದ ಸೇಡಂಗೆ ಹೋಗಿ ಬರಲು ಅನಾನುಕೂಲವಾಗುತ್ತದೆ.ಶಿಕ್ಷಕರಿಗೆ, ಪಾಲಕರಿಗೆ ತಮ್ಮ ಕೆಲಸ ಕಾರ್ಯಗಳಿಗೆ ಕಚೇರಿಗಳಿಗೆ ಅಲೆಯುವುದೇ ನಿತ್ಯ ಕಾಯಕವಾಗುತ್ತದೆ.ಇದರಿಂದ ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ.ಆದ್ದರಿಂದ ಯಾವುದೇ ಕಾರಣಕ್ಕೂ ಸೇಡಂ ಶೈಕ್ಷಣಿಕ ಜಿಲ್ಲೆಗೆ ಸೇರಿಸುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಆದ್ದರಿಂದ ಕಲಬುರಗಿ ಜಿಲ್ಲೆಯಲ್ಲಿಯೇ ಮುಂದುವರಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.
ಅಲ್ಲದೇ ಶಾಸಕ ಬಸವರಾಜ ಮತ್ತಿಮಡು, ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ ಅವರು ಈ ಬಗ್ಗೆ ಗಮನಹರಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಸರಕಾರದ ಮೇಲೆ ಒತ್ತಡ ಹಾಕಬೇಕು. ಇಲ್ಲದಿದ್ದರೇ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…