ನಗರದಲ್ಲಿ ಗಣೇಶ ಹಬ್ಬದ ನಿಮಿತ್ತ ಅನಗತ್ಯವಾಗಿ ವಾಹನಗಳನ್ನು ನಿಲ್ಲಿಸಿ ಒತ್ತಾಯಪೂರ್ವಕವಾಗಿ ಯುವಕರು ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಆದ್ದರಿಂದ ಒಂದು ವೇಳೆ ವಸೂಲಿ ಮಾಡುತ್ತಿರುವುದು, ವಾಹನಗಳನ್ನು ನಿಲ್ಲಿಸುವುದು ಕಂಡು ಬಂದರೆ ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು.ಇದೊಂದು ಉತ್ತಮ ಸಂಸ್ಕೃತಿಯಲ್ಲ. ಅಲ್ಲದೇ ಸಮಾಜದ ಮುಖಂಡರು, ಪಾಲಕರು ಈ ಬಗ್ಗೆ ಗಮನಹರಿಸಿ ತಿಳುವಳಿಕೆ ನೀಡಬೇಕು- ರಾಘವೇಂದ್ರ ಪಿಐ
ಶಹಾಬಾದ: ಗಣೇಶ ಹಬ್ಬದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ನಗರದ ಪೊಲೀಸ್ ಠಾಣೆಯಲ್ಲಿ ಗುರುವಾರ ಸಾಯಂಕಾಲ ಪೊಲೀಸ್ ಆರಕ್ಷಕ ನಿರೀಕ್ಷಕ ರಾಘವೇಂದ್ರ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಪಿಐ ರಾಘವೇಂದ್ರ, ಹಬ್ಬಗಳ ಆಚರಣೆ ಸಮಾಜದ ಎಲ್ಲರಲ್ಲೂ ಸಾಮರಸ್ಯ ಮೂಡಿಸಬೇಕು.ಒಬ್ಬರಿಗೊಬ್ಬರಿಗೂ ಸಹಕಾರಯುತವಾಗಿ ನಡೆದುಕೊಂಡು ಆಚರಿಸಬೇಕು. ಎಂದರಲ್ಲದೇ, ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ಕೊಡದರೀತಿ ಹಬ್ಬದ ಆಚರಣೆ ಶಾಂತರೀತಿಯಲ್ಲಿ ನಡೆಸಿಕೊಂಡು ಹೋಗುವಂತೆ ತಿಳಿಸಿದರು.
ಗಣೇಶ ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ದೇವರಲ್ಲ. ಎಲ್ಲಾ ಭಕ್ತರ ಸಂಕಷ್ಟಗಳನ್ನು ಪರಿಹರಿಸುವ ಆರಾಧ್ಯ ದೈವ.ಆದ್ದರಿಂದ ಗಣೇಶೋತ್ಸವ ಸುಗಮವಾಗಿ ನಡೆಯಬೇಕೆಂಬುದು ಪೊಲೀಸ್ ಇಲಾಖೆಯ ಅಪೇಕ್ಷೆ. ಹಾಗಾಗಿ ಸಾರ್ವಜನಿಕರ ಹಿತ ಕಾಪಾಡುವ ದೃಷ್ಟಿಯಿಂದ ಇಲಾಖೆ ಈ ಬಾರಿ ಹಲವಾರು ಮಾರ್ಗಸೂಚಿಗಳನ್ನು ಅಳವಡಿಸಿದೆ. ಗಣೇಶ ಕೂಡಿಸುವ ಸ್ಥಳದಲ್ಲಿ ಪೆಂಡಾಲ ನಿರ್ಮಾಣಕ್ಕೂ ಮುನ್ನ ಅನುಮತಿ ಪಡೆಯಬೇಕು.
ಅಲ್ಲದೇ ಸರಕಾರದ ಆದೇಶದಂತೆ ಡಿಜೆ ಧ್ವನಿವರ್ಧಕ ಯಾವುದೇ ಕಾರಣಕ್ಕೂ ಬಳಸುವಂತಿಲ್ಲ. ಬಳಸಿದರೆ ಕಠಿಣ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಆದೇಶದಲ್ಲಿ ಬದಲಾವಣೆಯಾದರೆ ತಮ್ಮ ಗಮನಕ್ಕೆ ತರಲಾಗುವುದೆಂದು ಹೇಳಿದರು.
ಪಿಎಸ್ಐ ಅಶೋಕ ಪಾಟೀಲ, ಗಣೇಶ ವಿಗ್ರಹ ವಿಸರ್ಜನೆ ವೇಳೆ ಬಾವಿ, ನದಿ ಹಾಗೂ ನೀರಿರುವ ಸ್ಥಳಗಳಲ್ಲಿ ಈಜು ಬಾರದವರನ್ನು ಬಿಡದಂತೆ ಎಚ್ಚರ ವಹಿಸಬೇಕು. ಅಲ್ಲದೇ ಯಾವುದೇ ರೀತಿಯ ಸಮಸ್ಯೆ ಇದ್ದರೂ ಅದನ್ನು ತಕ್ಷಣ ಪೊಲೀಸ್ ಇಲಾಖೆಯ ಗಮನಕ್ಕೆ ತಂದು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕೆಂದು ಹೇಳಿದರು.
ನಗರಸಭೆಯ ಪೌರಾಯುಕ್ತ ಅಶೋಕ ಬಿಲಗುಂದಿ, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ವಾಡಿ-ಶಹಾಬಾದ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್, ಕದಸಂಸ ಜಿಲ್ಲಾ ಸಂಚಾಲಕ ಕೃಷ್ಣಪ್ಪ ಕರಣಿಕ್ ಮಾತನಾಡಿದರು.
ನಗರದ ಗಣ್ಯರಾದ ಶಿವಕುಮಾರ ಇಂಗಿನಶೆಟ್ಟಿ, ಅರುಣ ಪಟ್ಟಣಕರ್, ನಿಂಗಣ್ಣ ಹುಳಗೋಳಕರ್,ನಾಗರಾಜ ಮೇಲಗಿರಿ, ವಿಶ್ವಹಿಂದು ಪರಿಷತ್ ಅಧ್ಯಕ್ಷ ಬಸವರಾಜ ಸಾತ್ಯಾಳ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ದಿನೇಶ ಗೌಳಿ,ಅನೀಲ ಹಿಬಾರೆ,ಸದಾನಂದ ಕುಂಬಾರ,ರಾಜ ಮಹ್ಮದ್ ರಾಜಾ, ಲಿಂಗರಾಜ ಮಲಕೂಡ, ಜಗದೇವ ಸುಬೇದಾರ,ಮಹಾದೇವ ತರನಳ್ಳಿ ಸೇರಿದಂತೆ ಅನೇಕರು ಹಾಜರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…