ಮಕ್ಕಳಲ್ಲಿ ಅಡಗಿದ ಪ್ರತಿಭೆ ಹೊರತರಲು ವಿಜ್ಞಾನ ಪ್ರದರ್ಶನಗಳು ನೆರವಾಗಬಲ್ಲವು: ವೆಂಕಟರೆಡ್ಡಿ

ಶಹಾಬಾದ: ಮಕ್ಕಳಲ್ಲಿ ಅಡಗಿದ ಪ್ರತಿಭೆ ಹೊರತರಲು ಹಾಗೂ ಅವರ ಜ್ಞಾನದ ಬೆಳೆವಣಿಗೆಗೆ ವಿಜ್ಞಾನ ಪ್ರದರ್ಶನಗಳು ನೆರವಾಗಬಲ್ಲವು ಎಂದು ಕಾಳಗಿ ವಲಯದ ಶಿಕ್ಷಣ ಸಂಯೋಜಕ ವೆಂಕಟರೆಡ್ಡಿ ಹೇಳಿದರು.

ಅವರು ನಗರದ ಮಿನಿರೋಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾದ ವಿಜ್ಞಾನ ಪ್ರದರ್ಶನವನ್ನು ಮುಖ್ಯ ನಿರ್ಣಾಯಕರಾಗಿ ಆಗಮಿಸಿ ಮಾತನಾಡಿದರು.

ಶಾಲೆಗಳಲ್ಲಿ ವಿಜ್ಞಾನಕ್ಕೆ ಹೆಚ್ಚು ಒತ್ತು ನೀಡಿದರೆ, ಮಕ್ಕಳ ಪ್ರತಿಭೆಯ ತಕ್ಕಂತೆ ಅವರು ತಾಲೂಕಾ, ರಾಜ್ಯ , ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿ ದೇಶಕ್ಕೆ ಕೀರ್ತಿ ತರುತ್ತಾರೆ. ಆದ್ದರಿಂದ ಮಕ್ಕಳ ಪ್ರತಿಭೆಯನ್ನು ಚಿಕ್ಕ ವಯಸ್ಸಿನಲ್ಲಿ ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಲು ಶಿಕ್ಷಕರು ಮುಂದಾಗಬೇಕು ಎಂದು ತಿಳಿಸಿದರಲ್ಲದೇ, ಮಕ್ಕಳಿಗೆ ಅನ್ವೇ?ಣೆ, ಸಂಶೋಧನೆ ಬೆಳೆಸಲು ಇಂತಹ ವಿಜ್ಞಾನ ವಸ್ತು ಪ್ರದರ್ಶನ ತುಂಬಾ ಅನುಕೂಲವಾಗಿವೆ. ಇದರಿಂದ ಮಕ್ಕಳಿಗೆ ವೈಜ್ಞಾನಿಕ ವಿಚಾರ ಬೆಳೆಸಲು ವಿಜ್ಞಾನ ಮಹತ್ವ ಮಕ್ಕಳಿಗೆ ತಿಳಿದುಕೊಳ್ಳಲು ನೆರವಾಗುತ್ತದೆ ಎಂದರು.

ಶಹಾಬಾದ ವಲಯದ ಶಿಕ್ಷಣ ಸಂಯೋಜಕ ಶ್ರೀಧರ ರಾಠೋಡ ಮಾತನಾಡಿ, ವಿಜ್ಞಾನ ವಸ್ತು ಪ್ರದರ್ಶನದಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಯಲು ಹಾಗೂ ಅವರಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸಾಧ್ಯವಾಗುತ್ತದೆ. ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ. ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷರಾಭ್ಯಾಸ ಇದ್ದರೆ ಸಾಕಾಗಾದು. ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷಣದ ಬಗ್ಗೆ ಅಭಿರುಚಿ ಬೆಳೆಸುವುದು ಅತ್ಯವಶ್ಯಕವಾಗುತ್ತದೆ. ಈ ನಿಟ್ಟಿನಲ್ಲಿ ಆಯೋಜಿಸಿದ್ದ ವಿಜ್ಞಾನ ಪ್ರದರ್ಶನ ಮಕ್ಕಳ ಪ್ರತಿಭೆ ಅನಾವರಣಕ್ಕೊಂದು ಉತ್ತಮ ವೇದಿಕೆಯಾಗಿತ್ತು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಿನಿರೋಸ್ ಶಾಲೆಯ ಅಧ್ಯಕ್ಷರಾದ ಶಬ್ಬೀರ್ ಅಹ್ಮದ್,ಮುಖ್ಯ ಶಿಕ್ಷಕರಾದ ಪರಶುರಾಮ ಶಿಕ್ಷಕರಾದ ಮುತ್ತಗಿಕರ್, ಅಲಮಾ ಅಂಜುಮ್, ಕು. ಸ್ನೇಹಾ,ರೇಣುಕಾ, ಶರಣಮ್ಮ, ಶಹನವಾಜ್,ಅನೀಸ್,ಮಹೇಶಕುಮಾರ ಸೇರಿದಂತೆ ಶಿಕ್ಷಕರು ಹಾಗೂ ಶಾಲಾಮಕ್ಕಳು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

4 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

4 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

4 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

4 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420