ಕಲಬುರಗಿ: ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳಬೇಕು ಎಂದು ಶ್ರೀ ಶಿವಶರಣ್ ಹರಳಯ್ಯ ಸಮಾಜ (ಹಟಗಾರ್), ಮಚಗಾರ್ ಸಮಾಜದ ಜಿಲ್ಲಾಧ್ಯಕ್ಷ ಕಾಶಿರಾಯ್ ಎಸ್. ನಂದೂರಕರ್ ಅವರು ಇಲ್ಲಿ ಒತ್ತಾಯಿಸಿದರು.
ಬುಧವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ್ ಅವರು ಇಡೀ ರಾಜ್ಯದಲ್ಲಿ ಹರಳಯ್ಯ ಸಮಾಜದಿಂದ ಆಯ್ಕೆಯಾದ ಏಕೈಕ ಶಾಸಕರು. ಆದ್ದರಿಂದ ಸಮಾಜಕ್ಕೆ ಪ್ರಾತಿನಿಧ್ಯ ಕೊಡಲು ಅವರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಹಾಗೂ ಮುಖ್ಯಮಂತ್ರಿಗಳಾಗಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರ ಸ್ವೀಕರಿಸಿದ್ದು ಸಮಾಜಕ್ಕೆ ಅತೀವ ಸಂತೋಷವನ್ನು ತಂದಿದೆ. ಸಾಮಾಜಿಕ ನ್ಯಾಯದ ಪರವಾಗಿ ಯಡಿಯೂರಪ್ಪ ಅವರು ಕಾರ್ಯನಿರ್ವಹಿಸುತ್ತಿದ್ದು, ಸಮಾಜಕ್ಕೆ ಪ್ರಾತಿನಿಧ್ಯ ಕೊಡಲು ಮತ್ತಿಮೂಡ್ ಅವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಅವರು ಕೋರಿದರು.
ಇಲ್ಲಿಯವರೆಗೆ ಹರಳಯ್ಯ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಬಿಜೆಪಿ ಸರ್ಕಾರದಲ್ಲಿ ಪರಿಶಿಷ್ಟ ಜಾತಿಗೆ ಸೇರಿರುವ ಹರಳಯ್ಯ ಸಮಾಜಕ್ಕೆ ಸೂಕ್ತ ಸ್ಥಾನ ದೊರಕಿಸಬೇಕು ಎಂದು ಅವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ವೀರಭದ್ರಪ್ಪ ಹೆಬ್ಬಾಳಕರ್, ಶಿವಶರಣಪ್ಪ ದೊಡ್ಡಮನಿ, ಶಿವಶರಣಪ್ಪ ಹೀರಾಪೂರ್ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…