ರೈತರು, ಪರಿಶಿಷ್ಟ ವರ್ಗಕ್ಕೆ ವಿಶೇಷ ಪರಿಹಾರ ನೀಡಲು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಅಷ್ಠಗಿ ಮನವಿ

0
48

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಹಾಗೂ ಪರಿಶಿಷ್ಟ ವರ್ಗದವರಿಗೆ ವಿಶೇಷ ಪರಿಹಾರ ನೀಡಲು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಡಾ. ಅಂಬಾರಾಯ ಅಷ್ಠಗಿ ಮನವಿ ಮಾಡಿದರು.

ಮುಂಬೈನಿಂದ ರಾಯಚೂರಿಗೆ ಕಾರ್ಯಕ್ರಮ ನಿಮಿತ್ತ ತೆರಳುತ್ತಿದ್ದ ಸಚಿವರನ್ನು ಇಂದು ಕಲಬುರ್ಗಿಯ ರೈಲ್ವೆ ನಿಲ್ದಾಣದಲ್ಲಿ ಭೇಟಿ ಮಾಡಿ ಸನ್ಮಾನಿಸಿದ ನಂತರ ಮನವಿ ಮಾಡಿದರು.

Contact Your\'s Advertisement; 9902492681

ಜಿಲ್ಲೆಯ ರೈತರ ಬೆಳೆಗಳು ಅತಿವೃಷ್ಟಿಯಿಂದ ಹಾನಿಯಾಗಿದ್ದರ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಇದರ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮುಂಜಾನೆ ವಿಶೇಷ ಸನ್ಮಾನ ನೀಡಿದ್ದಕ್ಕಾಗಿ ಅಷ್ಠಗಿ ಹಾಗೂ ಕಲಬುರಗಿ ಜನತೆಯನ್ನು ಮುಕ್ತ ಕಂಠದಿಂದ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ, ಅಪರ ಜಿಲ್ಲಾಧಿಕಾರಿ ಭೀಮಾಶಂಕರ್ ತೆಗ್ಗಳ್ಳಿ, ತಹಶಿಲ್ದಾರ ಪ್ರಕಾಶ್ ಕುದುರೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here