ಶಹಾಬಾದ: ಕಲ್ಬುರ್ಗಿ ನಗರದಲ್ಲಿ ಹಿಂದ ಬಂಜಾರ ಗೌರವ ಗಾಥಾ ಸಮಿತಿಯಿಂದ ಅಗಸ್ಟ ೩೧ ರಂದು ಬೆಳಿಗ್ಗೆ ಕಲಬುರಗಿಯ ಪಂಡಿತ ರಂಗ ಮಂದಿರದಲ್ಲಿ ಆಯೋಜಿಸಲಾದ ವಿಮುಕ್ತಿ ದಿನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಾಬುರಾವ್ ಚವ್ಹಾಣ ಅವರ ಹೆಸರನ್ನು ಕೈ ಬಿಟ್ಟಿರುವುದಕ್ಕೆ ಅಖಿಲ ಭಾರತ ಬಂಜಾರ ಸೇವಾ ಸಂಘದ ತಾಲೂಕ ಅಧ್ಯಕ್ಷ ಕುಮಾರ ಚವ್ಹಾಣ ಹಾಗೂ ನಗರದ ಅಧ್ಯಕ್ಷ ದಿಲೀಪ್ ನಾಯಕ್ ತೀವ್ರವಾಗಿ ಖಂಡಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಮೊದಲ ಬಂಜಾರ ಸಮಾಜದ ಶಾಸಕರಾಗಿ, ಸಚಿವರಾಗಿ ಬಾಬುರಾವ ಚವ್ಹಾಣ ಸಮಾಜವನ್ನು ಸಂಘಟಿಸಿದ್ದಾರೆ.ಸಮಾಜಕ್ಕಾಗಿ ಹಲವಾರು ಸೇವೆಯನ್ನು ಸಲ್ಲಿಸಿದ್ದಾರೆ. ಅವರು ಬಂಜಾರ ತಾಂಡಗಳಲ್ಲಿ ಪ್ರವಾಸ ಮಾಡುವ ಮೂಲಕ ಸಮಾಜದ ಜನರಿಗೆ ಅರಿವು ಮೂಡಿಸಿರುವ ಏಕೈಕ ಪ್ರಮುಖ ನಾಯಕರು. ಕಲಬುರ್ಗಿ ಜಿಲ್ಲೆ ಅಲ್ಲದೆ ಇಡೀ ರಾಜ್ಯದಲ್ಲಿ ಚವ್ಹಾಣ ಅವರು ಚಿರಪರಿಚಿತರಿದ್ದಾರೆ.
ದೇಶದಲ್ಲಿಯೇ ಸಂತ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಮೊದಲು ಪ್ರಾರಂಭ ಮಾಡಿರುವ ಶ್ರೇಯಸ್ಸು ಬಾಬುರಾವ ಚವ್ಹಾಣ ಅವರಿಗೆ ಸಲ್ಲುತ್ತದೆ. ಇಂದು ಕೆಲವರು ತಮ್ಮ ತೋಚಿದಂತೆ ಸಮಾಜದ ಹೆಸರು ಹಾಗೂ ಸಮಾಜಕ್ಕೆ ತಮ್ಮ ವೈಯಕ್ತಿಕ ಲಾಭಕ್ಕಾಗಿ ಏನೆಲ್ಲಾ ಮಾಡುತ್ತಿದ್ದಾರೆ.ಇದರಿಂದ ಸಮಾಜಕ್ಕೆ ಕೆಟ್ಟ ಹೆಸರು ಬರುತ್ತಿದೆ. ಅಲ್ಲದೆ ಬಂಜಾರ ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಗುತ್ತಿದೆ. ಇಡೀ ದೇಶದಲ್ಲಿ ಬಂಜಾರ ಸಮಾಜ ರಾಜಕೀಯವಾಗಿ, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಮುನ್ನಡೆಯುತ್ತಿದೆ. ಆದರೆ ಕೆಲ ರಾಜಕೀಯ ಪಕ್ಷದ ಮುಖಂಡರು ಬಂಜಾರ ಸಮಾಜದ ತಮ್ಮ ಮನೆಯ ಆಸ್ತಿ ಎನ್ನುವಂತೆ ವರ್ತಿಸುತ್ತಿದ್ದಾರೆ.
ಹಿಂದ ಬಂಜಾರ ಗೌರವ ಗಾಥಾ ಸಮಿತಿಯಿಂದ ವಿಮುಕ್ತಿ ದಿನ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಬಂಜಾರಾ ಸಮಾಜದ ಒಬ್ಬ ಹಿರಿಯ ಮುಖಂಡ ಮಾಜಿ ಸಚಿವ ಬಾಬುರಾವ್ ಚವ್ಹಾಣ ಅವರಿಗೆ ಕಾರ್ಯಕ್ರಮದಲ್ಲಿ ಕೈಬಿಟ್ಟಿರುವುದು ಹಾಗೂ ಆಹ್ವಾನ ಕೂಡ ನೀಡದಿರುವುದಕ್ಕೆ ನೋವು ತಂದಿದೆ. ಈ ರೀತಿ ಮಾಡುವುದರಿಂದ ಏನು ಸಾಧಿಸುವುದಕ್ಕೆ ಮುಂದಾಗಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ.
ಈ ರೀತಿಯ ಚವ್ಹಾಣ ಹೆಸರು ಬಿಟ್ಟಿರುವುದಕ್ಕೆ ತೀವ್ರವಾಗಿ ಖಂಡಿಸುತ್ತೆವೆ. ಅಲ್ಲದೆ ಸಮಾಜದ ಕಾರ್ಯಕರ್ತರು ವಿಮುಕ್ತಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದು ಎಂದು ಸಮಾಜದವರಿಗೆ ಅಖಿಲ ಭಾರತ ಬಂಜಾರ ಸೇವಾ ಸಂಘದ ತಾಲೂಕ ಅಧ್ಯಕ್ಷ ಕುಮಾರ ಚವ್ಹಾಣ ಹಾಗೂ ನಗರದ ಅಧ್ಯಕ್ಷ ದಿಲೀಪ್ ನಾಯಕ್ ಮನವಿ ಮಾಡಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…