ವಚನ ಸಾಹಿತ್ಯ ಸರ್ವಕಾಲಕ್ಕು ಪ್ರಸ್ತುತ: ಶರಣಗೌಡ ಜೈನಾಪುರ

ಸುರಪುರ: ಬಸವಣ್ಣನವರು ಮತ್ತು ಬಸವಾದಿ ಶರಣರು ಈ ನಾಡಿಗೆ ಮಹತ್ತರವಾಗಿ ಕೊಡುಗೆ ನೀಡಿದ ವಚನ ಸಾಹಿತ್ಯ ಸರ್ವಕಾಲಕ್ಕು ಪ್ರಸ್ತುತವಾಗಿದೆ ಎಂದು ಸಾಹಿತಿ ಶರಣಗೌಡ ಪಾಟೀಲ್ ಜೈನಾಪುರ ಹೇಳಿದರು.

ರಂಗಂಪೇಟೆಯ ಬಸವಪ್ರಭು ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಇಂದು ಅಖಿಲ ಭಾರತ ಶರಣಸಾಹಿತ್ಯ ಪರಿಷತ್ ಸುರಪುರ ತಾಲೂಕಾ ಘಟಕದವತಿಯಿಂದ ಏರ್ಪಡಿಸಿದ್ದ ವಚನದಿನ ಕಾರ್ಯಕ್ರಮದಲ್ಲಿ ವಚನಸಾಹಿತ್ಯದ ಪ್ರಸ್ತುತತೆ ಕುರಿತು ಉಪನ್ಯಾಸ ನೀಡಿ ಮಾತನಾಡಿದ ಅವರು, ವಚನ ಸಾಹಿತ್ಯವು ಮಾನವಿಯ ಮೌಲ್ಯಗಳ ಸಂಗಮವಾಗಿದೆ ಜೊತೆಗೆ ವಚನಸಾಹಿತ್ಯ ನಮಗೆ ಬದುಕನ್ನು ಕಟ್ಟಿಕೊಡುತ್ತದೆ ಹಾಗೂ ನಮ್ಮ ಬದುಕಿನ ಪ್ರತಿಗಳಿಗೆಗೂ ವಚನಗಳ ಸಾರ ಅನ್ವಯವಾಗುತ್ತದೆ ಎಂದ ಅವರು ವಿದ್ಯಾರ್ಥಿಗಳು ಮತ್ತು ಯುವಜನರು ಹೆಚ್ಚಾಗಿ ಶರಣ ಸಾಹಿತ್ಯ ಮತ್ತು ವಚನಸಾಹಿತ್ಯದ ಅದ್ಯಾಯನಮಾಡುವುದು ಪ್ರಸ್ತುತ ಸಂದರ್ಭಕ್ಕೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳಲ್ಲಿ ನೈತಿಕ ಪ್ರಜ್ಞ ಜೊತೆಗೆ ಸಾಂಸ್ಕೃತಿಕ ಸ್ಥಿತಿ, ವ್ಯಕ್ತಿತ್ವ ವಿಕಸನ ಈ ಎಲ್ಲವುಗಳ ಬಲವರ್ಧನೆಯಲ್ಲಿ ವಚನಸಾಹಿತ್ಯದ ಕೊಡುಗೆ ಮಹತ್ತರವಾಗಿದೆ ಎಂದು ಹೆಳಿದರು.
ತಾಲೂಕ ಶರಣಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸುತ್ತುರು ಜಗದ್ಗುರುಗಳ ದೂರ ದೃಷ್ಟಿಯ ಫಲವಾಗಿ ಶರಣಸಾಹಿತ್ಯ ಪರಿಷತ್ ರಚನೆಯಾಗಿದ್ದು, ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಪರಿಷತ್ತಿನ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶರಣಸಾಹಿತ್ಯ ಪರಿಷತ್ತಿನ ೩೫ನೇ ವರ್ಷದ ಸಂಸ್ಥಾಪನಾದಿನ ಹಾಗೂ ಲಿಂಗೈಕ್ಯ ಸುತ್ತೂರು ಶಿವರಾತ್ರಿ ಸ್ವಾಮಿಜಿಗಳ ಜನ್ಮದಿನವನ್ನು ಆಚರಿಸಲಾಯಿತು, ಇದೆ ಸಂದರ್ಭದಲ್ಲಿ ಅನೇಕ ವಿದ್ಯಾರ್ಥಿಗಳಿಂದ ವಚನ ಕಂಟಪಾಠ ಸ್ಪರ್ದೆ ಹಾಗೂ ವಿಧ್ಯಾರ್ಥಿನಿಯರಿಂದ ವಚನಗಾಯನ ಕಾರ್ಯಕ್ರಮ ನಡೆಯಿತು, ಕಾರ್ಯಕ್ರಮದಲ್ಲಿ ಪ್ರಮುಖರಾದ ವಿನೋದ ಚಾಮನಾಳ, ಶ್ರೀಕಾಂತ ರತ್ತಾಳ, ಪ್ರವೀಣ ಜಕಾತಿ, ಸಿದ್ದಪ್ರಸಾದ ಪಾಟೀಲ್ ಸೇರಿದಂತೆ ಇತರರಿದ್ದರು. ಕಾರ್ಯಕ್ರಮವನ್ನು ಸಲೀಂ ಪಾಷಾ ಅಡ್ಡೊಡಗಿ ನಿರೂಪಿಸಿದರು, ವೆಂಕಟೇಶ ಸ್ವಾಗತಿಸಿದರು, ಬಸವನಗೌಡ ಸೂಗುರು ವಂದಿಸಿದರು.

emedialine

Recent Posts

ಅ.6 ರಂದು ಡಾ. ಲಕ್ಷ್ಮಣ ದಸ್ತಿಯವರಿಂದ 371 J ಕಲಂ ಸೌಲತ್ತುಗಳ ಬಗ್ಗೆ ವಿಶೇಷ ಉಪನ್ಯಾಸ

ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…

9 mins ago

ಜಾತಿ, ಧರ್ಮ, ಭಾಷೆ, ಎಲ್ಲವನ್ನು ಮೀರಿನಿಂತ ಭಕ್ತಿಯ ದೇವರ ಉಪಾಸನೆಯೇ ಭಜನೆ

ಕಲಬುರಗಿ: ಎಷ್ಟೋ ಜನರ ಜೀವನ ಭಜನೆಯಿಂದ ಬದಲಾಗಿಗೆ ಕಾಯಿಲೆ ಬಿದ್ದು ಹಾಸಿಗೆ ಹಿಡಿದ ವ್ಯಕ್ತಿ ಭಜನೆ ಮಾಡುವುದರಿಂದ ಎದ್ದು ಗುಣಮುಖರಾದ…

12 mins ago

ಪೌರಕಾರ್ಮಿಕರ ಧರಣಿ ಸ್ಥಳಕ್ಕೆ ಶಾಸಕ ಮಹಾನಗರ ಪಾಲಿಕೆ ಆಯುಕ್ತರು ಭೇಟಿ

ಕಲಬುರಗಿ: ಖಾಯಂ ಉದ್ಯೋಗ ಮತ್ತು ಬಾಕಿ ವೇತನಕ್ಕೆ ಸಂಬಂಧಿಸಿದಂತೆ ಕಲಬುರಗಿ ಮಹಾನಗರ ಪಾಲಿಕೆ ಪೌರಕಾರ್ಮಿಕರು ಧರಣಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ…

15 mins ago

‘ಮೊಬೈಲ್ ಡೆಂಟಲ್ ಫೋಟೋಗ್ರಾಫಿ’ ಕಾರ್ಯಾಗಾರಕ್ಕೆ ನಮೋಶಿ ಚಾಲನೆ

ಕಲಬುರಗಿ: ನಗರದ ಎಚ್‍ಕೆಇ ಎಸ್ ನಿಜಲಿಂಗಪ್ಪ ದಂತ ಮಹಾವಿದ್ಯಾಲಯದ ಬಿಟಿಜಿಎಚ್ ಅಡಿಟೋರಿಯಮ್ ಸಭಾಂಗಣದಲ್ಲಿ ಎಚ್.ಕೆ.ಇ. ದಂತಮಹಾವಿದ್ಯಾಲಯದಿಂದ ಹಮ್ಮಿಕೊಂಡಿದ್ದ 'ಮೊಬೈಲ್ ಡೆಂಟಲ್…

20 mins ago

ಪಾಲಿಕೆ ಪೌರಕಾರ್ಮಿಕರ ಪ್ರತಿಭಟನೆಗೆ ಕೃಷ್ಣಾ ರೆಡ್ಡಿ ಬೆಂಬಲ

ಕಲಬುರಗಿ: ಖಾಯಂ ಉದ್ಯೋಗ ಮತ್ತು ಬಾಕಿ ವೇತನಕ್ಕೆ ಸಂಬಂಧಿಸಿದಂತೆ ಕಲಬುರಗಿ ಮಹಾನಗರ ಪಾಲಿಕೆ ಪೌರಕಾರ್ಮಿಕರು ಧರಣಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ…

22 mins ago

ಆರೋಗ್ಯ ಮೇಳವನ್ನು ಡಿಸಿ ಫೌಜಿಯಾ ತರನ್ನುಮ್ ಚಾಲನೆ

ಕಲಬುರಗಿ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ…

25 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420