ಯುವಕ ಯುವತಿಯರಿಗೆ ಸ್ವಾವಲಂಬಿ ಗ್ರಾಮದ ಪ್ರಶಿಕ್ಷಣ ತರಬೇತಿ ಕಾರ್ಯಗಾರ

ಬಸವರಾಜ ಪಾಟೀಲ್ ಸೇಡಂ ಅವರ ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಗೆ ೨೧ ಲಕ್ಷ ರೂಪಾಯಿಗಳ ಧನಸಹಾಯ ಮಾಡುವ ಮೂಲಕ ನಾಡಿನ ಅಭಿವೃಧ್ಧಿಗೆ ಕೈಜೋಡಿಸುವೆ-ಡಾ:ಸುರೇಶ ಸಜ್ಜನ್ ಕಲಬುರ್ಗಿ-ಯಾದಗಿರಿ ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ

ಸುರಪುರ: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಯುವಕ ಯುವತಿಯರಿಗೆ ಸ್ವಾವಲಂಬಿ ಗ್ರಾಮದ ಪ್ರಶಿಕ್ಷಣ ತರಬೇತಿ ಕಾರ್ಯಗಾರ ನಡೆಸಲಾಯಿತು.

ಕಾರ್ಯಗಾರವನ್ನು ಉದ್ಘಾಟಿಸಿದ ಕಲಬುರ್ಗಿ ಯಾದಗಿರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ:ಸುರೇಶ ಸಜ್ಜನ್ ಮಾತನಾಡಿ,ಬಸವರಾಜ ಪಾಟೀಲ್ ಸೇಡಂ ಅವರ ನೇತೃತ್ವದಲ್ಲಿ ಇಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘ ಮಾಡುತ್ತಿರುವ ಕಾರ್ಯ ಅಮೋಘವಾಗಿದೆ ಎಂದರು.ಇಂತಹ ಕಾರ್ಯಗಾರದ ಮೂಲಕ ಈ ಭಾಗದ ಯುವಕ ಯುವತಿಯರಿಗೆ ತರಬೇತಿಯನ್ನು ನೀಡಿ ಪ್ರತಿ ಗ್ರಾಮದ ಅಭೀವೃಧ್ಧಿಗೆ ಮುಂದಾಗಿಸುವ ಮೂಲಕ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃಧ್ಧಿಗೆ ಯೋಜನೆ ರೂಪಿಸಲಾಗಿದೆ.ಇಂತಹ ಕಾರ್ಯಕ್ರಮದ ಉದ್ಘಾಟನೆ ಭಾಗ್ಯ ನನಗೆ ಸಿಕ್ಕಿರುವುದು ಸಂತೋಷ ತಂದಿದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಗಿರಿಧರ ಪೂಜಾರ ಹಾಗೂ ಲೀಲಾ ಮಲ್ಲಿಕಾರ್ಜುನ ಕಾರಟಗಿ ಮಾತನಾಡಿ,ಬಸವರಾಜ ಪಾಟೀಲ್‌ಜಿ ಅವರ ಮಾರ್ಗದರ್ಶನದಲ್ಲಿ ಇಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಈ ಸಂಘದ ಮೂಲಕ ನಡೆಯುತ್ತಿರುವ ಕಾರ್ಯಗಳು ಇಂದು ಬಿ.ಬಿ.ಎಮ್.ಪಿ ಯವರಿಗೂ ಮಾದರಿಯಾಗಿದ್ದು ಶಿಕ್ಷಣ ಕ್ಷೇತ್ರದ ಅಭೀವೃಧ್ಧಿಗಾಗಿ ಸಂಘದ ಯೋಜನೆಗಳನ್ನು ಬೆಂಗಳೂರಲ್ಲಿಯೂ ಜಾರಿಗೆ ತರುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ನಮ್ಮ ಗ್ರಾಮೀಣ ಭಾಗದಲ್ಲಿ ಇರುವ ಸಂಪನ್ಮೂಲಗಳು ಅಲ್ಲಿಯೇ ಬಳಕೆಯಾಗಿ ಗ್ರಾಮಗಳ ಅಭಿವೃಧ್ಧಿಯಾಗಬೇಕು ಎಂಬುದು ಪಾಟೀಲ್‌ಜಿ ಕನಸಾಗಿದ್ದು ಅದಕ್ಕಾಗಿ ಇಂತಹ ಅನೇಕ ಕಾರ್ಯಗಾರಗಳು ನಡೆಯಲಿವೆ,ಯುವಕ ಯುವತಿಯರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.ಗ್ರಾಮೀಣ ಭಾಗದ ರೈತರು ಬೆಳೆದ ಫಸಲಿನಲ್ಲಿ ಉತ್ತಮ ಗುಣಮಟ್ಟದ ಧಾನ್ಯವನ್ನು ಮಾರಾಟ ಮಾಡಿ ರೈತರು ಕಳಪೆಯಾಗಿರುವುದನ್ನು ಸೇವಿಸುತ್ತಾರೆ.ಇದರಿಂದ ಆರೋಗ್ಯ ಹಾಳಾಗುವುದರ ಜೊತೆಗೆ ಉತ್ತಮವಾದ ಜೀವನವು ಸಾಧ್ಯವಿಲ್ಲ,ಆದ್ದರಿಂದ ಉತ್ತಮ ಗುಣಮಟ್ಟದ ಆಹಾರ ಧಾನ್ಯಗಳ ಸೇವನಗೆ ಯುವಕ ಯುವತಿಯರು ಜಾಗೃತಿ ಮೂಡಿಸಬೇಕು ಹಾಗೂ ರೈತರು ರಾಸಾಯನಿಕ ಬಳಕೆಯನ್ನು ಕೈಬಿಟ್ಟು ಗೊಮೂತ್ರ ಹಾಗೂ ಕೊಟ್ಟಿಗೆ ಗೊಬ್ಬರದ ಮೂಲಕ ಕೃಷಿಗೆ ಒತ್ತು ನೀಡಬೇಕೆಂದು ಕರೆ ನೀಡಿದರು.

ಸಂಘದ ಜಿಲ್ಲಾ ಸಂಚಾಲಕ ನೀಲಕಂಠ ಎಲ್ಹೇರಿ ಪ್ರಾಸ್ತಾವಿಕವಾಗಿ ಮಾತನಾಡಿ,ಯಾದಗಿರಿ ಜಿಲ್ಲೆಯ ೫೦೫ ಹಳ್ಳಿಗಳಲ್ಲಿ ಯುವಕರಿಗೆ ಸ್ವಾವಂಬಿ ಬದುಕಿಗಾಗಿ ತರಬೇತಿ ನೀಡುವ ಗುರಿ ಹೊಂದಲಾಗಿದೆ ಎಂದರು.೬೦೦ ಜನರಿಗೆ ಶಿಕ್ಷಣದ ಕುರಿತು ತರಬೇತಿ ನೀಡಲಾಗಿದೆ,ಯುವಕ ಯುವತಿಯರಿಗಾಗಿ ಸ್ವಯಂ ಉದ್ಯೋಗ ಯಂತ್ರಗಳನ್ನು ನೀಡಲಾಗಿದೆ,ಗ್ರಾಮೀಣ ಭಾಗದಲ್ಲಿ ಜನರ ಸಮಸ್ಯೆ ಅರಿಯಲು ಆಪ್ತ ಸಲಹಾ ಕೇಂದ್ರಗಳೂ ಕಾರ್ಯನಿರ್ವಹಿಸುತ್ತಿವೆ,೧೫೦ ಹಳ್ಳಿಗಳ ೧ ಸಾವಿರ ಯುವಕ ಯುವತಿಯರಿಗೆ ಸ್ವಾವಲಂಬಿ ಗ್ರಾಮ ತರಬೇತಿ ನೀಡುವ ಉದ್ದೇಶ ಹೊಂದಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ವೇದಿಕೆ ಮೇಲಿದ್ದ ಶಾಂತರಡ್ಡಿ,ಹೆಚ್.ಸಿ ಪಾಟೀಲ್ ಮಾತನಾಡಿದರು. ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್,ವೇಣುಗೋಪಾಲ ನಾಯಕ ಜೇವರ್ಗಿ,ನಾರಾಯಣಚಾರ್ಯ ಸಗರ,ರಾಘವೇಂದ್ರ ಕಾಮನಟಿಗಿ,ಶೈಲಜಾ ಶೆಳ್ಳಗಿ ವೇದಿಕೆ ಮೇಲಿದ್ದರು.ಕಾರ್ಯಕ್ರಮದಲ್ಲಿ ಸಂಘದ ಅನೇಕ ಜನ ಸಂಚಾಲಕರು,ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳೂ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಅಮರಯ್ಯಸ್ವಾಮಿ ಜಾಲಿಬೆಂಚಿ ನಿರೂಪಿಸಿದರು,ಡಿ.ಸಿ ಪಾಟೀಲ್ ಕೆಂಭಾವಿ ಸ್ವಾಗತಿಸಿದರು,ಮೌನೇಶ ನಾಯಕ ತಿಂಥಣಿ ವಂದಿಸಿದರು.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

1 hour ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

2 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

2 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

2 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

2 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420