ಬಿಸಿ ಬಿಸಿ ಸುದ್ದಿ

ಅಕ್ಷರದ ಹಣತೆ ಹಚ್ಚಿದ ಸುತ್ತೂರು ಶ್ರೀಗಳು

ಯಾವುದೇ ವಿವಾದಗಳಿಗೆ ಎಡೆ ಮಾಡಿಕೊಡದೆ ಮಠ-ಮಾನ್ಯಗಳನ್ನು ಮುಂದುವರಿಸಿಕೊಂಡು ಹೋಗುವುದು ದುಸ್ತರವಾಗಿರುವ ಈಗಿನ ಕಾಲದಲ್ಲಿ ಪೂಜ್ಯರ ದೂರದೃಷ್ಟಿ ಹಾಗೂ ಕತೃತ್ವ ಶಕ್ತಿ ಮಾದರಿಯಾಗಿದೆ. ಸರ್ಕಾರದ ಅನೇಕ ಯೋಜನೆಗಳಿಗೆ ಪ್ರೇರಣೆಯಾಗಿರುವ ಅವರ ಕಾರ್ಯಗಳನ್ನು ಕಾರ್ಯಗತಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. -ವೈಜನಾಥ ಕೋಳಾರ, ನಿವೃತ್ತ ಪ್ರಾಚಾರ್ಯ, ಕಲಬುರಗಿ.

ಕಲಬುರಗಿ: ಸುತ್ತೂರು ಮಠದ ೨೩ನೇ ಪೀಠಾಧಿಪತಿಗಳಾಗಿದ್ದ ಲಿಂ. ಡಾ. ರಾಜೇಂದ್ರ ಮಹಾಸ್ವಾಮಿಗಳು ಮುನುಷ್ಯನಿಗೆ ಅನ್ನ, ಅರಿವು, ಆರೋಗ್ಯ ಅಗತ್ಯ ಎನ್ನುವ ನಿಟ್ಟಿನಲ್ಲಿ ಸಾಕಷ್ಟು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು ಎಂದು ನಿವೃತ್ತ ಪ್ರಾಚಾರ್ಯ ವೈಜನಾಥ ಕೋಳೂರು ತಿಳಿಸಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಘಟಕದ ವತಿಯಿಂದ ನಗರದ ವೀರೇಂದ್ರ ಪಾಟೀಲ ಬಡಾವಣೆಯ “ವಚನಾಮೃತ” ಸಭಾಂಗಣದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಸಂಸ್ಥಾಪಕರ ದಿನಾಚರಣೆ ಹಾಗೂ ಜಗದ್ಗುರು ಲಿಂ. ಡಾ. ರಾಜೇಂದ್ರ ಮಹಾಸ್ವಾಮಿಗಳ ೧೦೯ನೇ ಜನ್ಮ ದಿನೋತ್ಸವ ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದ ಅವರು, ಬಡ, ದೀನ-ದಲಿತ ವಿದ್ಯಾರ್ಥಿಗಳಿಗಾಗಿ ೧೯೯೩೬ರಲ್ಲಿ ವಸತಿ ನಿಲಯ ಆರಂಭಿಸಿದ್ದರು. ೧೯೫೪ರಲ್ಲಿ ಜೆ.ಎಸ್.ಎಸ್. ವಿದ್ಯಾಪೀಠ ಆರಂಭಿಸುವ ಮೂಲಕ ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿದರು ಎಂದು ತಿಳಿಸಿದರು.

ಡಾ. ರಾಜೇಂದ್ರ ಮಹಾಸ್ವಾಮಿಗಳ ಕುರಿತು ವಿಶೇಷ ಉಪನ್ಯಾಸ ನೀಡಿದ ಶರಣ ಚಿಂತಕ ಬಸವರಾಜ ಜನಕಟ್ಟಿ, ಶಿಕ್ಷಣ ಹಾಗೂ ಅನ್ನ ದಾಸೋಹ ಪರಂಪರೆಯನ್ನು ಮುಂದುವರಿಸಿದ ಪೂಜ್ಯರು, ಅಕ್ಷರದ ಹಣತೆ ಹಚ್ಚಿದರು. ವ್ಯಕ್ತಿ ಪೂಜೆ ಮಾಡಿದೆ ತತ್ವ ಪೂಜಕರಾಗಬೇಕು ಎಂಬುದರ ಅರಿವು ನೀಡಿದರು ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಪಿಡಿಎ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶಶಿಕಾಂತ ಆರ್. ಮೀಸೆ ಮಾತನಾಡಿ, ಬಸವಾದಿ ಶರಣರ ಕಾಯಕ, ದಾಸೋಹ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ ಬದುಕು ಬಂಗಾರ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ವಡ್ಡನಕೇರಿ, ಉಪಾಧ್ಯಕ್ಷ ಡಾ. ವಿಜಯಕುಮಾರ ಪರೂತೆ, ಕೋಶಾಧ್ಯಕ್ಷ ವಿಶ್ವನಾಥ ಮಂಗಲಗಿ ವೇದಿಕೆಯಲ್ಲಿದ್ದರು. ಸಂತೋಷ ಹೂಗಾರ ನಿರೂಪಿಸಿದರು. ಡಾ. ಶರಣಬಸವ ವಡ್ಡನಕೇರಿ ಸ್ವಾಗತಿಸಿದರು. ಡಾ. ಶಿವರಂಜನ ಸತ್ಯಂಪೇಟೆ ಶರಣು ಸಮರ್ಪಿಸಿದರು.

ಕಲ್ಯಾಣಪ್ಪ ಬಿರಾದಾರ. ಹಣಮಂತರಾಯ ತೋಟ್ನಳ್ಳಿ, ವಿ.ಎಸ್.ರಟಕಲ್, ಬಸವರಾಜ ಧೂಳಾಗುಂಡಿ, ಸಿದ್ರಾಮಪ್ಪ ಹಾಗರಗಿ, ಶಿವಶರಣಪ್ಪ ಕಲಶೆಟ್ಟಿ, ಬಾಬುರಾವ ಜನಕಟ್ಟಿ, ಸಿದ್ದಮ್ಮ ಜನ್ನಾ, ಮಹಾದೇವಿ ಜನಕಟ್ಟಿ, ಕಮಲಾಬಾಯಿ, ಪರ್ವತಯ್ಯ ಮಠ, ಚಿದಂಬರ ಪಾಟೀಲ ರಾಜನಾಳ, ನಿಜಗುಣಿ ದೇವಣಗಾಂವ, ಬಸಯ್ಯಸ್ವಾಮಿ ಹುಬ್ಬಳ್ಳಿಮಠ, ಸುನಿಲ್, ಹರ್ಷಿತ ವಡ್ಡನಕೇರಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

5 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

7 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

7 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

7 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

8 hours ago