ಕಲಬುರಗಿ: ಸರ್ಕಾರಿ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಕಲ್ಯಾಣರಾವ. ಜಿ.ಪಾಟೀಲರವರು ಆಗಸ್ಟ್ 31 ರಂದು ನಿವೃತ್ತಿ ಹೊಂದುತ್ತಿರುವ ಪ್ರಯುಕ್ತವಾಗಿ ಅವರ ವಿದ್ಯಾರ್ಥಿ ಬಳಗ ಹಾಗೂ ಅಭಿಮಾನಿ ಬಳಗ ಸೇರಿಕೊಂಡು “ಸೌಹಾರ್ದ ಪಥ” ಎನ್ನುವ ಸಾಂದರ್ಭಿಕ ಸಂಪುಟ ಲೋಕಾರ್ಪಣೆ ಮತ್ತು ಅಭಿನಂದನ ಸಮಾರಂಭ ಜರುಗಲಿದೆ.
ನಗರದ ಜಯನಗರ ಕಾಲೋನಿಯಲ್ಲಿರುವ ಅನುಭವ ಮಂಟಪದಲ್ಲಿ ಸೆಪ್ಟೆಂಬರ್ 4 ರಂದು ಬೆಳಿಗ್ಗೆ 10:30 ಕ್ಕೆ ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಸಾನಿಧ್ಯವನ್ನು ಭಾಲ್ಕಿ ಹಿರೇಮಠದ ಪರಮಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದೇವರು ವಹಿಸಿಕೊಳ್ಳಲಿದ್ದು, ಮಾಜಿ ಸಚಿವರಾದ ಡಾ. ಶರಣ ಪ್ರಕಾಶ ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
“ಸೌಹಾರ್ದ ಪಥ” ಸಂಪುಟವನ್ನು ಗುಲ್ಬರ್ಗ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಡಾ.ದಯಾನಂದ ಅಗಸರ ಅವರು ಲೋಕಾರ್ಪಣೆ ಮಾಡಲಿದ್ದು, ಡಾ. ಕಲ್ಯಾಣ ರಾವ ಪಾಟೀಲ್ ಅವರ ಸಂಕ್ಷಿಪ್ತ ಪರಿಚಯ ಹಾಗೂ ಕೃತಿ ಪರಿಚಯವುಳ್ಳ ” ಮಹಾಗುರು” ಎನ್ನುವ ಕೃತಿಯನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ. ಸತೀಶ ಕುಮಾರ ಹೊಸಮನಿ ಅವರು ಬಿಡುಗಡೆಗೊಳಿಸಲಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಯದ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾದ ಡಾ. ಎಚ್ ಟಿ ಪೋತೆ, ನಿವೃತ್ತ ಪ್ರಾಧ್ಯಾಪಕರಾದ ಡಾ. ಅಮರೇಶ್ ನುಗಡೋಣಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ವಿಕ್ರಮ ವಿಸಾಜಿ ಕೃತಿಯ ಕುರಿತು ಮಾತನಾಡಲಿದ್ದಾರೆ.
ಶ್ರೀ ಸಿ.ವಿ ಮಾಲಿಪಾಟೀಲ, ಡಾ. ಗುರುಲಿಂಗಪ್ಪ ದಬಾಲೆ ಹಾಗೂ ಡಾ. ಲಕ್ಷ್ಮಿಕಾಂತ ಪಂಚಾಳ ಅವರ ಉಪಸ್ಥಿತರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಬುರಗಿ ಬಸವ ಸಮಿತಿಯ ಅಧ್ಯಕ್ಷರಾದ ಡಾ. ವಿಲಾಸವತಿ ಖುಬಾ ಅವರು ವಹಿಸಲಿದ್ದಾರೆ ಇದೇ ಸಂದರ್ಭದಲ್ಲಿ ಪ್ರಾಥಮಿಕ ಹಂತದಿಂದ ಹಿಡಿದು ಪದವಿ ಹಂತದವರೆಗೆ ಡಾ. ಕಲ್ಯಾಣ ರಾವ ಪಾಟೀಲ ರವರನ್ನು ಬೋಧಿಸಿದ ಶಿಕ್ಷಕರಿಗೆ “ಗುರುವಂದನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಡಾ. ಕಲ್ಯಾಣ ರಾವ ಪಾಟೀಲ ಅವರ ಅಭಿನಂದನ ಸಮಿತಿಯ ಅಧ್ಯಕ್ಷರಾದ ಡಾ. ಜಗನ್ನಾಥ ಹೆಬ್ಬಾಳೆ,ಉಪಾಧ್ಯಕ್ಷರಾದ ಡಾ. ರೋಳೆಕರ್ ನಾರಾಯಣ, ಕಾರ್ಯದರ್ಶಿಗಳಾದ ಡಾ. ಬಸವ ಪಾಟೀಲ ಜವಳಿ ಹಾಗೂ ಅಪಾರ ವಿದ್ಯಾರ್ಥಿ ಬಳಗ ಮತ್ತು ಅಭಿಮಾನಿ ಬಳಗ ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಡಾ. ಶರಣಬಸಪ್ಪ ವಡ್ಡನಕೇರಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…