ಬಿಸಿ ಬಿಸಿ ಸುದ್ದಿ

ಸುರಪುರ: ಅನೇಕ ಕಡೆಗಳಲ್ಲಿ ಗಣೇಶನ ಮೂರ್ತಿಗಳ ಪ್ರತಿಷ್ಠಾಪನೆ

ಸುರಪುರ:ಕಳೆದ ಎರಡು ವರ್ಷಗಳಿಂದ ಗಣೇಶನ ಹಬ್ಬ ಆಚರಣೆಗೆ ವಿವಿಧ ನಿರ್ಬಂಧಗಳಿಂದ ಸರಳವಾಗಿ ಆಚರಿಸಿದ್ದ ಜನರು ಈಬಾರಿ ನಗರದಾದ್ಯಂತ ಅನೇಕ ಕಡೆಗಳಲ್ಲಿ ಗಣೇಶನ ಹಬ್ಬ ಆಚರಣೆಗೆ ಅದ್ಧೂರಿಯಾಗಿ ತಯಾರಿ ಮಾಡಿಕೊಂಡಿದ್ದಾರೆ.

ನಗರದ ಸುಮಾರು ನಲವತ್ತಕ್ಕೂ ಹೆಚ್ಚು ಕಡೆಗಳಲ್ಲಿ ಗಣೇಶನ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.ಪ್ರಮುಖವಾಗಿ ನಗರದ ಶ್ರೀವೇಣುಗೋಪಾಲ ದೇವಸ್ಥಾನದ ಬಳಿಯಲ್ಲಿ,ಎಸ್.ಬಿ.ಐ ಬ್ಯಾಂಕ್ ಬಳಿಯಲ್ಲಿ,ರಂಗಂಪೇಟೆಯ ವಿವಿಧ ಕಡೆಗಳಲ್ಲಿ ಹೀಗೆ ಅನೇಕ ಕಡೆಗಳಲ್ಲಿ ಪ್ರತಿಷ್ಠಾಪಿಸಲಾಗಿದೆ.

ಬುಧವಾರ ಬೆಳಿಗ್ಗೆಯಿಂದ ವಾಹನವನ್ನು ತೆಗೆದುಕೊಂಡು ತಂಡೋಪತಂಡವಾಗಿ ಆಗಮಿಸುತ್ತಿದ್ದ ಗಣೇಶನ ಭಕ್ತರು ಗಣೇಶನ ಮೂರ್ತಿಯನ್ನು ತೆರೆದ ವಾಹನದಲ್ಲಿರಿಸಿ ಮೆರವಣೆಗೆಯೊಂದಿಗೆ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂತು.ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಮೂರ್ತಿಗಳನ್ನು ತೆಗೆದುಕೊಂಡು ಹೋಗುತ್ತಿರುವ ಎಲ್ಲರು ಪಟಾಕಿಗಳನ್ನು ಸಿಡಿಸಿ ಗುಲಾಲು ಎರಚಿ ವಾದ್ಯಗಳ ಸದ್ದಿಗೆ ಕುಣಿದು ಕುಪ್ಪಳಿಸುತ್ತಾ ತೆಗೆದುಕೊಂಡು ಹೋಗುತ್ತಿರುವುದನ್ನು ಜನರು ಕಂಡು ಖುಷಿಗೊಳ್ಳುತ್ತಿದ್ದರು.ಚಿಕ್ಕ ಚಿಕ್ಕ ಮಕ್ಕಳುಗಳು ಕೂಡ ಗಣೇಶನ ಮೂರ್ತಿಗಳನ್ನು ಹೊತ್ತು ಗಣಪತಿ ಬೊಪ್ಪಾ ಮೋರಾಯ ಎಂದು ಘೋಷಣೆಗಳನ್ನು ಕೂಗುತ್ತಾ ತೆಗೆದುಕೊಂಡು ಹೋಗುತ್ತಿರುವುದು ನೋಡುಗರ ಗಮನಸೆಳೆಯಿತು.

ಸರಕಾರ ಪರಿಸರ ಮಾಲಿನ್ಯ ತಡೆಗಟ್ಟಲು ಪ್ಲಾಸ್ಟರ್ ಆಫ್ ಪ್ಯಾರಿಸ್ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿಗಳ ಕೂರಿಸದಂತೆ ತಿಳಿಸಿದ್ದರು ಎಲ್ಲೆಡೆ ಪಿಒಪಿ ಗಣೇಶನ ಮೂರ್ತಿಗಳನ್ನೆ ಪ್ರತಿಷ್ಠಾಪಿಸಲಾಗಿದೆ.ಇದರ ಮದ್ಯೆ ಅನೇಕರು ಮಹಾತ್ಮ ಗಾಂಧಿ ವೃತ್ತದಲ್ಲಿ ಮಾರಾಟ ಮಾಡಲಾಗುತ್ತಿದ್ದ ಮಣ್ಣಿನ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನೂ ಖರಿದಿಗೆ ಮುಂದಾಗಿದ್ದು ಕಂಡು ಬಂತು.

ನಗರದ ಬೋವಿಗಲ್ಲಿಯಲ್ಲಿನ ಹುಲುಗಮ್ಮ ದೇವಸ್ಥಾನದ ಬಳಿಯಲ್ಲಿನ ಕೃಷ್ಣಾ ಚವ್ಹಾಣ ಅವರ ಮನೆಯಿಂದ ಗಣೇಶನ ಮೂರ್ತಿ ತೆಗೆದುಕೊಂಡು ಹೋಗಲು ವಾಹನಗಳು ಸಾಲುಗಟ್ಟಿ ನಿಂತಿದ್ದರೆ,ಮತ್ತೊಂದೆಡೆ ದರಬಾರ ರಸ್ತೆಯ ಅನೇಕ ಕಡೆಗಳಲ್ಲಿ ಚಿಕ್ಕ ಚಿಕ್ಕ ಗಣೇಶನ ಮೂರ್ತಿಗಳನ್ನು ಮಕ್ಕಳು ಹಾಗು ಮನೆಗಳಲ್ಲಿ ಪ್ರತಿಷ್ಠಾಪಿಸಲು ಖರಿದಿಯಲ್ಲಿ ತೊಡಗಿದ್ದು ಕಂಡುಬಂದಿದೆ.ಕಳೆದ ಎರಡು ವರ್ಷಗಳಿಂದ ಅದ್ಧೂರಿ ಆಚರಣೆ ಇಲ್ಲದೆ ಕಾದಿದ್ದ ಜನರು ಈಗ ಇಡೀ ತಾಲೂಕಿನಾದ್ಯಂತ ಅದ್ಧೂರಿ ಆಚರಣೆಗೆ ಮುಂದಾಗಿದ್ದಾರೆ.

emedialine

Recent Posts

ಮಹಿಳೆಯರನ್ನು ಗೌರವಿಸುವ ಶ್ರೀಮಂತ ಸಂಪ್ರದಾಯ ಹೊಂದಿರುವ ದೇಶ ಭಾರತ

ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…

5 days ago

ನಿಧನ ವಾರ್ತೆ: ಭೀಮರಾವ.ಸಿ.ಸುಗೂರ

ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…

1 week ago

ನೆಲೋಗಿ ಬಿ.ಆರ್.ಅಂಬೇಡ್ಕರ ಭವನದಲ್ಲಿ ಛತ್ರಪತಿ ಶಿವಾಜಿಯ ಮಹಾರಾಜರ ಜನ್ಮ ದಿನಾಚರಣೆ

ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…

3 weeks ago

ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋರಾಟ ಅಗತ್ಯ: ಮೇಯರ್

ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…

4 weeks ago

ಕಲಬುರಗಿ; 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಆಯೋಜನೆ

ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…

4 weeks ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…

1 month ago