ಬಿಸಿ ಬಿಸಿ ಸುದ್ದಿ

ಹಿತ್ತಲ ಶಿರೂರದಲ್ಲಿ 2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ಶಾಸಕ ಸುಭಾಷ್ ಗುತ್ತೇದಾರ

ಆಳಂದ: ತಾವು ಶಾಸಕರಾಗಿ ಆಯ್ಕೆಯಾದ ಮೇಲೆ ಹಿತ್ತಲ ಶಿರೂರ ಗ್ರಾಮಕ್ಕೆ ಈ ಅವಧಿಯಲ್ಲಿ ಸುಮಾರು ೨ ಕೋಟಿ ರೂ. ಅನುದಾನ ನೀಡಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.

ಗುರುವಾರ ತಾಲೂಕಿನ ಹಿತ್ತಲ ಶಿರೂರ ಗ್ರಾಮದಲ್ಲಿ ೨೦೨೧-೨೨ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಅನುದಾನದಡಿ ಮಂಜೂರಾದ ರೂ. ೧೫.೮೧ ಲಕ್ಷಗಳ ಅಂಬಿಗರ ಚೌಡಯ್ಯನವರ ಸಮುದಾಯ ಭವನ ನಿರ್ಮಾಣ ಹಾಗೂ ಮಾನ್ಯ ಮುಖ್ಯಮಂತ್ರಿಗಳ ವಿಶೇ? ಅನುದಾನದಡಿ ಮುಜರಾಯಿ ಇಲಾಖೆಯಿಂದ ಮಂಜೂರಾದ ರೂ. ೨೦.೦೦ ಲಕ್ಷಗಳ ಅಂಬಾ ಭವಾನಿ ದೇವಸ್ಥಾನದ ನಿರ್ಮಾಣ ಕಾಮಗಾರಿಗಳ ಭೂಮಿ ಪೂಜೆ ನೇವೇರಿಸಿ ಶಾಸಕರಾದ ಸುಭಾ? ಆರ್ ಗುತ್ತೇದಾರ ಅವರು ಮಾತನಾಡಿದರು.

ಗ್ರಾಮದಲ್ಲಿ ಗ್ರಾಮ ಪಂಚಾಯತ ನೂತನ ಕಟ್ಟಡ, ಕುಡಿಯುವ ನೀರಿನ ವ್ಯವಸ್ಥೆ, ಶಾಲಾ ಕಟ್ಟಡಗಳ ದುರಸ್ತಿ, ಶೌಚಾಲಯ ನಿರ್ಮಾಣ, ಸಮುದಾಯ ಭವನ, ಕ್ಷೇಮಪಾಲನಾ ಕೇಂದ್ರ ನಿರ್ಮಾಣ, ಪ್ರೌಢಶಾಲೆಗೆ ಆವರಣ ಗೋಡೆ, ಸಿಸಿ ರಸ್ತೆ, ಅಂಬಾ ಭವಾನಿ ದೇವಸ್ಥಾನ ಜೀರ್ಣೋದ್ಧಾರ ಸೇರಿದಂತೆ ಅನೇಕ ಕಾಮಗಾರಿ ಪೂರ್ಣಗೊಳಿಸಲು ಅನುದಾನ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ ರಾಜ ಇಂಜಿನಿಯರಿಂಗ್ ಇಲಾಖೆಯ ಕಿರಿಯ ಅಭಿಯಂತರರಾದ ಸಂದೀಪ, ಮುಖಂಡರಾದ ರಾಜಶೇಖರ ಮಲಶೆಟ್ಟಿ, ಗಿರೀಶ ಕುಲಕರ್ಣಿ, ಶರಣಬಸಪ್ಪ ಸರಸಂಬಿ, ಅಮೃತ ಬಿಬ್ರಾಣಿ, ಶರಣಪ್ಪ ನಾಟಿಕಾರ, ನಿಂಗಣ್ಣ ಮಾಸ್ಟರ್ ದೆನಕ, ಪ್ರಭು ಸರಸಂಬಿ, ರಾಜು ಧಂಗಾಪೂರ ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

12 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

12 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

14 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

14 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

14 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

15 hours ago