ಬಿಸಿ ಬಿಸಿ ಸುದ್ದಿ

ಶ್ರೀ ಜಡೆಶಂಕಲಿಂಗ ದೇವಸ್ಥಾನದಲ್ಲಿ ಪ್ರವಚನ ಮಂಗಳ, ಪ್ರತಿಭಾ ಪುರಸ್ಕಾರ ನಾಳೆ

ಕಲಬುರಗಿ: ಜಿಲ್ಲಾ ಬಣಗಾರ ಸಮಾಜ ಹಾಗೂ ಶ್ರೀ ಜಡೆ ಶಂಕರಲಿಂಗ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಮಕ್ತಂಪೂರದ ಶ್ರೀ ಜಡೆ ಶಂಕರಲಿಂಗ ದೇವಸ್ಥಾನದಲ್ಲಿ ಆ.೨೫ರಿಂದ ಹಮ್ಮಿಕೊಂಡಿರುವ ಪ್ರವಚನ‌ ಮುಕ್ತಾಯ, ಪ್ರತಿಭಾ ಪುರಸ್ಕಾರ ಸಮಾರಂಭ ಸೆ.೪ರಂದು ನಡೆಯಲಿದೆ.

ಬೆಳಿಗ್ಗೆ ೧೦ಕ್ಕೆ ಪ್ರವಚನ ಮಂಗಲ ಕಾರ್ಯಕ್ರಮ ನಡೆಯಲಿದೆ. ಮಕ್ತಂಪುರ ಶ್ರೀ ಗುರುಬಸವ ಬೃಹನ್ಮಠದ ಶ್ರೀ ಶಿವಾನಂದ ಮಹಾಸ್ವಾಮೀಜಿ, ಗದ್ದುಗೆ ಮಠದ ಶ್ರೀ ವಿಜಯ ಮಹಾಂತೇಶ ದೇವರು ಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಪಾಲಿಕೆ ಸದಸ್ಯ ವಿಜಯಕುಮಾರ ಸೇವಲಾನಿ, ಮಾಜಿ ಸದಸ್ಯ ಬಸವರಾಜ ನಾಶಿ ಆಗಮಿಸುವರು. ದೇವಸ್ಥಾನ ಟ್ರಸ್ಟ್‌ನ ಅಧ್ಯಕ್ಷ ಶಾಂತವೀರಪ್ಪ ಕಲ್ಯಾಣಿ, ಜಿಲ್ಲಾ ಸಮಾಜದ ಅಧ್ಯಕ್ಷ ಘಾಳೇಪ್ಪ ದೊಡ್ಡಮನಿ ಅಧ್ಯಕ್ಷತೆ ವಹಿಸುವರು. ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.೮೦ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಗುತ್ತದೆ. ಸಮಾಜದ ಮೂವರು ಬಡ ಮಹಿಳೆಯರಿಗೆ ಹೊಲಿಗೆ ಯಂತ್ರಗಳು ವಿತರಿಸಲಾಗುತ್ತದೆ.
ರಾತ್ರಿ ೮.೩೦ರಿಂದ ಬೆಳಗಿನ ಜಾವದವರೆಗೆ ಭಜನಾ ಕಾರ್ಯಕ್ರಮ ನಡೆಯಲಿದೆ.

ಸೆ.೫ರಂದು ಮಧ್ಯಾಹ್ನ ೨ರಿಂದ ಸಂಜೆ ೭ ಗಂಟೆವರೆಗೆ ಶ್ರೀ ಜಡೆ ಶಂಕರಲಿಂಗ ದೇವರ ಪಲ್ಲಕ್ಕಿ ಉತ್ಸವ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ.

ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಮಾಜದ ಜಿಲ್ಲಾ ಅಧ್ಯಕ್ಷ ಘಾಳೆಪ್ಪ ದೊಡ್ಡಮನಿ, ಪ್ರಧಾನ ಕಾರ್ಯದರ್ಶಿ ಶಾಂತಪ್ಪ ವ್ಹಿ.ಘೂಳಿ, ಟ್ರಸ್ಟ್‌ನ ಅಧ್ಯಕ್ಷ ಶಾಂತವೀರಪ್ಪ ಕಲ್ಯಾಣಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಧನಶೆಟ್ಟಿ ಅವರು ಮನವಿ ಮಾಡಿದ್ದಾರೆ.

emedialine

Recent Posts

ಜುಲೈ 7.ರಂದು ವೀರಶೈವ ಲಿಂಗಾಯತ ಯುವ ಸಮ್ಮಿಲನ-2 ಕಾರ್ಯಕ್ರಮ

ಕಲಬುರಗಿ: ಬಸವೇಶ್ವರ ಸೇವಾ ಸಮಜಾ ಟ್ರಸ್ಟ್ ವತಿಯಿಂದ ನಗರದ ಜಗತ್ ವೃತ್ತದಲ್ಲಿರುವ ಅನುಭವ ಮಂಟಪದಲ್ಲಿ ರವಿವಾರ ಬೆಳೆಗ್ಗೆ 10 ಗಂಟೆಗೆ…

5 mins ago

ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾಗಿ ರವಿಕುಮಾರಗೆ ಜಿ.ಶಿವಶಂಕರ ನೇಮಕಕ್ಕೆ ನಿಗಮದ

ಕಲಬುರಗಿ: ಭೋವಿ ಅಭಿವೃದ್ಧಿ ನಿಗಮ ಕಲಬುರಗಿ ಶಾಖೆಯನ್ನು ಪ್ರತ್ಯೇಕವಾಗಿ ನಿರ್ವಹಿಸುವ ಮತ್ತು ಪ್ರತ್ಯೇಕವಾಗಿ ಜಿಲ್ಲಾ ವ್ಯವಸ್ಥಾಪಕರನ್ನು ನೇಮಕ ಮಾಡಬೇಕೆಂದು ಕ್ರಾಂತಿವೀರ…

11 mins ago

ಅಪ್ರಾಪ್ತೆ ಮೇಲೆ ಅತ್ಯಾಚಾರ, ಸಾವು ಪ್ರಕರಣ; ಬಾಲಕಿ ಕುಟುಂಬಸ್ಥರಿಗೆ ರಕ್ಷಣೆ ನೀಡಲು ಮಹ್ಮದ್ ಅಶ್ರಫ್ ಅಲಿ ಆಗ್ರಹ

ಕಲಬುರಗಿ; ನಗರದಲ್ಲಿ ಕಳೆದ ಜೂನ್ 28 ರಂದು 14 ವರ್ಷದ ಅಪ್ರಾಪ್ತ ಬಾಲಕಿ 8 ತಿಂಗಳ ಗರ್ಭಿನಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

25 mins ago

ವಚನ ಕಮ್ಮಟ ಪರೀಕ್ಷೆಯಲ್ಲಿ ನೇತ್ರಾ ಶಾಂತಯ್ಯ ರಾಜ್ಯಕ್ಕೆ ತೃತೀಯ ರ್ಯಾಂಕ್

ಸುರಪುರ: ಚಿತ್ರದುರ್ಗದಲ್ಲಿ ನಡೆಸಲಾದ 2022-23ನೇ ಸಾಲಿನ ವಚನ ಕಮ್ಮಟ ಪರೀಕ್ಷೆಯಲ್ಲಿ ಪಟ್ಟಣದ ಸರಕಾರಿ ಕನ್ಯಾ ಮಾಡದರಿಯ ಹಿರಿಯ ಪ್ರಾಥಮಿಕ ಶಾಲೆ…

29 mins ago

ನೇಕಾರರ ಸೌಹಾರ್ದ ಸಹಕಾರಿಗೆ ನೂತನ ಪದಾಧಿಕಾರಿಗಳ ನೇಮಕ

ಸುರಪುರ: ತಾಲೂಕ ನೇಕಾರರ ಸೌಹಾರ್ದ ಸಹಕಾರಿಗೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ. ನಗರದ ತಿಮ್ಮಾಪುರದ ಚೌಡೇಶ್ವರಿ ದೇವಸ್ಥಾನದಲ್ಲಿನ ಸಹಕಾರಿ ಸಂಘದ ಕಚೇರಿಯಲ್ಲಿ…

36 mins ago

ರಾಜಕೀಯಕ್ಕಾಗಿ ಮಠಾಧೀಶರು ನೀತಿ ಬಿಟ್ಟು ಜಾತಿವಂತರಾಗಿದ್ದಾರೆ; ಅರ್ಜುನ ಭದ್ರೆ

ಸುರಪುರ: ರಾಜಕೀಯಕ್ಕಾಗಿ ಇಂದು ಕೆಲವು ಮಠಾಧೀಶರು ಮುಖ್ಯಮಂತ್ರಿ ಹುದ್ದೆ ತಮ್ಮ ಜಾತಿ ಅಥವಾ ತಮ್ಮ ಸಮುದಾಯದವರಿಗೆ ನೀಡುವಂತೆ ಬಹಿರಂಗವಾಗಿ ಹೇಳಿಕೆ…

42 mins ago