ಪೂಜ್ಯ ಶ್ರೀ ಮಲ್ಲಣ್ಣಪ್ಪ ಮಹಾಸ್ವಾಮಿಜಿ ನೇತೃತ್ವದಲ್ಲಿ ಮಂಗಲೋತ್ಸವ, ಧರ್ಮ ಸಭೆಗೆ ಚಾಲನೆ

ಶಹಾಬಾದ್: ತಾಲೂಕಿನ ತೊನಸನಳ್ಳಿ (ಎಸ್) ಗ್ರಾಮದ ಭಾವೈಕ್ಯತೆಯ ತಾಣವಾದ ಶ್ರೀ ಅಲ್ಲಮಪ್ರಭು ಸಂಸ್ಥಾನ ಮಠದ ಪೀಠದ ಪೀಠಾಧಿಪತಿ ಮಲ್ಲಣ್ಣಪ್ಪ ಮಹಾಸ್ವಾಮಿಯವರ ನೇತೃತ್ವದಲ್ಲಿ ಶಹಾಬಾದ ತಾಲೂಕಿನ ಸುಕ್ಷೇತ್ರ ತೊನಸನಹಳ್ಳಿ ಗ್ರಾಮದಲ್ಲಿರುವ ಶ್ರೀ ಅಲ್ಲಮಪ್ರಭು ಸಂಸ್ಥಾನ ಮಠದಲ್ಲಿ ಶ್ರಾವಣ ಮಾಸದ ಮಂಗಲೋತ್ಸವ ಹಾಗೂ ಧರ್ಮ ಸಭೆ ಕಾರ್ಯಕ್ರಮಕ್ಕೆ ರಾವೂರನ ಸಿದ್ಧಲಿಂಗೇಶ್ವರ ಸಂಸ್ಥಾನ ವಿರಕ್ತಮಠದ ಪೂಜ್ಯ ಶ್ರೀ ಸಿದ್ಧಲಿಂಗ ದೇವರು ಕಾರ್ಯಕ್ರಮ ಉದ್ಘಾಟಿಸಿದರು.

ಪೇಠಶಿರೂರನ ಸಿದ್ಧಲಿಂಗೇಶ್ವರ ಸಂಸ್ಥಾನ ವಿರಕ್ತಮಠದ ಶ್ರೀ ಮ.ನಿ.ಪ್ರ ಸಿದ್ಧಲಿಂಗ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದರು.

ಮಾಜಿ ಸಚಿವರು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮ ಮಂಡಳಿ ಅಧ್ಯಕ್ಷರು ಹಾಗೂ ನೂತನ ವಿಧಾನ ಪರಿಷತ್ ಸದಸ್ಯ ಬಾಬುರಾವ ಚಿಂಚನಸೂರ ಹಾಗೂ ಕೇಂದ್ರ ಆಹಾರ ನಿಗಮ ಮಂಡಳಿಯ ರಾಜ್ಯ ಸಲಹಾ ಸಮಿತಿ ಸದಸ್ಯರು ಭಾರತ ಸರಕಾರ ಹಾಗೂ ಚಿತ್ತಾಪೂರನ ಗಂಗಾಪರಮೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಅಮರೇಶ್ವರಿ ಬಾಬುರಾವ ಚಿಂಚನಸೂರ ದಂಪತಿಗಳನ್ನು ಮಠದ ವತಿಯಿಂದ ಸನ್ಮಾನಿಸಲಾಯಿತು.

ನೂತನ ವಿಧಾನ ಪರಿಷತ್ ಸದಸ್ಯ ಬಾಬುರಾವ ಚಿಂಚನಸೂರ ಅವರು ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ ಅಲ್ಲಮಪ್ರಭು ಸಂಸ್ಥಾನ ಮಠ ತೊನಸನಹಳ್ಳಿ ,ಕಲ್ಯಾಣ ಕರ್ನಾಟಕದ ಪ್ರತಿಷ್ಠಿತ ಮಠವಾಗಿದೆ, ಇನ್ನೂ ಈ ಮಠದ ಪ್ರಗತಿಗಾಗಿ ಮುಂಬರುವ ದಿನಗಳಲ್ಲಿ ,ತನು ,ಮನ, ಧನ, ದಿಂದ ದುಡಿವದಾಗಿ ಹೇಳಿದರು.

ಸಭೆಯ ಅಧ್ಯಕ್ಷತೆ ಶ್ರೀಭಿಮಣ್ಣ ಸುಣಗಾರ ಸಿಂಧಗಿ ವಹಿಸಿದ್ದರು. ಅಥಿತಿಗಳಾಗಿ ಬಸವರಾಜ ಹರವಾಳ, ದೇವಿಂದ್ರ ಜೈನಾಪೂರ, ಶರಣಪ್ಪ ಹೊಸೂರ್, ನಿಂಗಪ್ಪ ಹುಳಗೋಳಕರ್, ಶರಣಪ್ಪ ಸಣಮೋ, ಆನಂದ ಕೊಡಸಾ, ನಾಗೇಂದ್ರ ಬೊಮ್ಮನಳ್ಳಿ ವಾಡಿ, ಚಂದ್ರಶೇಖರ್ ಕೋಟಾರಗಸ್ತಿ, ಶಿವಾನಂದ ದಂಡಪಗೋಳ, ಅಣೀವೀರಪ್ಪ ಯಾಕಾಪೂರ, ದಶರಥ ತೆಗನೂರ್ ಕುಸನೂರ್, ತೊನಸನಹಳ್ಳಿ ಎಸ್ ಗ್ರಾಂ .ಪಂ.ಅಧ್ಯಕ್ಷೆ ಕಾವೇರಿ ಮಹಾಲಿಂಗ ಮದ್ದರಕಿ, ಗುರು ಜುಲ್ಪಿ, ನಿಂಗಣ್ಣಗೌಡ ಮಾಲೀಪಾಟೀಲ್, ಮಹಾದೇವ ಬಂದಳ್ಳಿ, ಮಲ್ಲಿಕಾರ್ಜುನ್ ಎಸ್ ಗೊಳೇದ, ವಿರೇಶ್ ಜೀ ಗೋಳೇದ, ಅಶೋಕ ಕಟ್ಟಿ, ದೇವಿಂದ್ರಪ್ಪ ಯಲಗೋಡ್, ಕಾಶಣ್ಣ ಚೆನ್ನೂರ್, ಮಲ್ಲಿಕಾರ್ಜುನ್ ಇಟಗಿ ಮಾಲಗತ್ತಿ, ಕಾಶಿನಾಥ ಬೆಲ್ಲದ ಹಾಗೂ ಇತರರು ಗಣ್ಯರು ಭಾಗವಹಿಸಿದರು.

ಅಶೋಕ ಎಂ. ನಾಟೀಕಾರ್ ನಿರೂಪಿಸಿದರು. ನಂತರ ಭಜನಾ ಸೇವೆಯನು ಮಹೇಶ ನರಬೋಳಿ ಮತ್ತು ಮಾತೋಶ್ರೀ ಸಾತಮ್ಮ ತಾಯಿ ಭಜನೆ ಮೇಳದವರು ನಡೆಸಿಕೊಟ್ಟರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420