ಕಲಬುರಗಿ: ನಗರದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ವಿಜಯನಗರ ಕಾಲೋನಿಯಲ್ಲಿ ಹಮ್ಮಿಕೊಂಡಿರುವ ಕನ್ನಡ ಸಾಹಿತ್ಯ ಪರಿಷತ್ತು ಉತ್ತರ ವಲಯ ವತಿಯಿಂದ ಉಚಿತ ಸರಣಿ ನೋಟ್ ಬುಕ್ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಬಡತನದಿಂದ ಯಾವ ಮಗು ಶಾಲೆಯಿಂದ ಹೊರ ಉಳಿಯಬಾರದು. ಬಡ ಮಕ್ಕಳಿಗೆ ಉಚಿತ ನೆರವು ನೀಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್ ಉತ್ತರ ವಲಯ ಹಾಗೂ ಗುರೂಜಿ ಡಿಗ್ರಿ ಕಾಲೇಜಿನ ಕಾರ್ಯವನ್ನು ಮೆಚ್ಚಿದರು. ಉತ್ತರ ವಲಯದ ಅಧ್ಯಕ್ಷರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗುರುಜಿ ಡಿಗ್ರಿ ಕಾಲೇಜಿನ ಅಧ್ಯಕ್ಷರು ಹಾಗೂ ದಾನಿಗಳಾದ ಕಲ್ಯಾಣಕುಮಾರ್ ಶೀಲವಂತ ಮಾತನಾಡಿ ನನಗೆ ಬಡ ಮಕ್ಕಳಿಗೆ ದಾನ ಮಾಡಲು ಅವಕಾಶ ನೀಡಿದ ಉತ್ತರ ವಲಯದ ಅಧ್ಯಕ್ಷರಾದ ಪ್ರಭುಲಿಂಗ ಮುಲಗೆ ಅವರಿಗೆ ಧನ್ಯವಾದಗಳು ತಿಳಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವಿಜಯಕುಮಾರ ಪಾಟೀಲ್ ತೆಗಲತಿಪ್ಪಿ ಮಾತನಾಡಿ ಉತ್ತರ ವಲಯ ಎಲ್ಲಾ ವಲಯಗಳಿಗೆ ಮತ್ತು ತಾಲೂಕುಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.
ಇದೇ ರೀತಿಯಾಗಿ ಉತ್ತರ ವಲಯ ಅಧ್ಯಕ್ಷರಾದ ಶ್ರೀ ಪ್ರಭುಲಿಂಗ ಮೂಲಗೆ ಕೆಲಸ ಮಾಡಲಿ ಎಂದು ಹಾರೈಸಿದರು. ಅತಿಥಿಯಾಗಿ ಭಾಗವಹಿಸಿದ ಕೆಎಸ್ ಮಾಲಿಪಾಟೀಲ್ ಎಂ ಎಸ್ ಡಬ್ಲ್ಯೂ ವಿಭಾಗದ ನಿವೃತ್ತ ಮುಖ್ಯಸ್ಥರ ಮಾತನಾಡಿ ಉತ್ತರ ವಲಯದ ಎಲ್ಲಾ ಕಾರ್ಯಕ್ರಮಗಳಿಗೆ ನನ್ನ ಸಹಕಾರವಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಭುಲಿಂಗ ಮಲಗೆ ವಹಿಸಿ ಮಾತನಾಡಿ ತಮ್ಮ ಸಹಕಾರವಿದ್ದರೆ ಇನ್ನು ಹೆಚ್ಚು ಹೆಚ್ಚು ಕಾರ್ಯಕ್ರಮಗಳು ಶಾಲಾ ಮಟ್ಟದಲ್ಲಿ ಮಾಡುತ್ತೇನೆಂದು ಹೇಳಿದರು.
ವೇದಿಕೆ ಮೇಲೆ ಮುಖ್ಯ ಗುರು ಅಂಬಣ್ಣ ಬಿರಾದಾರ್, ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗಪ್ಪ ಬಿರಾದಾರ್, ಕೃಷ್ಣ ನಾಯಕ್, ಕವಿತಾ ದೇಗೌವ್, ನಾಗೇಶ ಮೆಂಗಜಿ, ಗೌರವ ಕಾರ್ಯದರ್ಶಿ ಹನುಮಂತ ದಿಂಡರೆ, ಖಜಂಚಿ ಶ್ರೀಕಾಂತ ಪಾಟೀಲ್, ಡಾ. ಶರಣರಾಜ್ ಚಪ್ಪರಬಂಡಿ, ರಾಜೇಂದ್ರ ಮಾಡಬುಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ನವಾಬ್ ಖಾನ್ ಕಾರ್ಯಕ್ರಮವನ್ನು ನಿರೂಪಿಸಿದರು. ಚೆನ್ನಮ್ಮ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಐದು ಜನ ಶಿಕ್ಷಕಕರಾದ ಸತೀಶಕುಮಾರ, ಶಿವಲೀಲಾ ಹಿರೇಮಠ, ಡಾ. ನಿರ್ಮಲಾ ಸಿರಗಾಪೂರ್, ಶಿವಲೀಲಾ, ಚೆನ್ನಮ್ಮ ಇವರನ್ನು ಸನ್ಮಾನಿಸಲಾಯಿತು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…