ನಮ್ಮ ಭಾಗದ ಮಕ್ಕಳು ಸ್ಫರ್ಧಾತ್ಮಕ ಪರೀಕ್ಷೆ ಎದುರಿಸಲು ತರಬೇತಿ:ಆರ್.ವಿ ನಾಯಕ

ಸುರಪುರ: ಕೆಸಿಎಸ್ ಆಕಾಡೆಮಿ ಧಾರವಾಡ ಮತ್ತು ಆರ್‌ವಿಎನ್ ಅಭಿಮಾನಿ ಬಳಗದ ಸಹಯೋಗದಲ್ಲಿ ನಗರದ ಶ್ರೀಪ್ರಭು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಪ್ರವೇಶದ ಅಂಗವಾಗಿ ಕಾರ್ಯಗಾರವನ್ನು ನಡೆಸಲಾಯಿತು.

ಕಾರ್ಯಗಾರವನ್ನು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಉದ್ಘಾಟಿಸಿ ಮಾತನಾಡಿ,ನಮ್ಮ ಭಾಗದ ವಿದ್ಯಾರ್ಥಿಗಳು ಸ್ಫರ್ಧಾತ್ಮಕ ಪರೀಕ್ಷೆಗಳು ಎದುರಿಸಲು ಇಂದು ನಮ್ಮ ಅಭಿಮಾನಿಗಳು ಹಾಗೂ ಕೆಸಿಎಸ್ ಅಕಾಡೆಮಿ ಧಾರವಾಡ ಸೇರಿ ಸುಮಾರು ೫೦ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ಕೊಡಿಸಲು ಮುಂದಾಗಿರುವುದು ಸಂತೋಷದ ಸಂಗತಿಯಾಗಿದೆ.ಮುಂದಿನ ವರ್ಷ ದಿಂದ ೨೦೦ ವಿದ್ಯಾರ್ಥಿಗಳಿಗೆ ತರಬೇತಿ ಕೊಡಿಸಲಾಗುವುದು ಎಂದು ತಿಳಿಸಿದರು.

ನನಗೆ ಮೊದಲಿನಿಂದಲೂ ಶಿಕ್ಷಣದ ಬಗ್ಗೆ ಹೆಚ್ಚು ಆಸಕ್ತಿಯಾಗಿದ್ದು, ಸುರಪುರ ಮತಕ್ಷೇತ್ರದಲ್ಲಿ ಶಿಕ್ಷಣ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದೇನೆ, ತಾಲೂಕಿನಲ್ಲಿ ಶಾಲೆಗಳ ಅಭಿವೃದ್ಧಿಗಾಗಿ ರಸ್ತೆ, ಸಂಚಾರ, ಶಾಲಾ ಕಟ್ಟಡ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದೇನೆ ಎಂದರು.

ಇದೇ ಸಂದರ್ಭದಲ್ಲಿ ಯುವ ಮುಖಂಡ ದೇವಿಂದ್ರಪ್ಪ ಮುದನೂರ ಮಾತನಾಡಿ, ಆರ್‌ವಿಎನ್ ಅಭಿಮಾನಿ ಬಳಗದಿಂದ ಈಗಾಗಲೇ ೫೦ ವಿದ್ಯಾರ್ಥಿಗಳಿಗೆ ಉಚಿತ ಐಎಎಸ್, ಐಪಿಎಸ್, ಕೆಎಎಸ್ ಸೇರಿಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ನಾಯಕರಾದ ರಾಜಾ ವೆಂಕಟಪ್ಪ ನಾಯಕರು ಹೇಳಿದಂತೆ ೨೦೦ ವಿದ್ಯಾರ್ಥಿಗಳಿಗೆ ಉಚಿತ ವಾಗಿ ತರಬೇತಿ ನೀಡಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆಎಸ್‌ಸಿ ಅಕಾಡೆಮಿಯ ಲಕ್ಕಪ್ಪ,ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಪ್ರಭು ಕಾಲೇಜಿನ ಪ್ರಾಂಶುಪಾಲ ಎಚ್.ಎಸ್. ಹೊಸಮನಿ ಮಾತನಾಡಿದರು. ಮುಖಂಡರಾದ ರಾಜಾ ವೇಣುಗೋಪಾಲ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಯಂಕೋಬ ಯಾದವ್, ಶಿವಾನಂದ ನರಗಟ್ಟಿ, ಪಿಯು ಕಾಲೇಜಿನ ಪ್ರಾಂಶುಪಾಲ ವಾರೀಸ್ ಕುಂಡಾಲೆ, ಹಣಮಂತ್ರಾಯ ಮೊಕಾಶಿ ಸೇರಿದಂತೆ ಅನೇಕ ಮುಖಂಡರು,ಕಾಲೇಜಿನ ಉಪನ್ಯಾಸಕರು ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

11 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

13 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

13 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

13 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

14 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420