ಬಿಸಿ ಬಿಸಿ ಸುದ್ದಿ

ದ.ರಾ.ಬೇಂದ್ರೆಯವರು ಕನ್ನಡ ಸಾರಸ್ವತ ಲೋಕದ ಮಿನುಗುತಾರೆ: ಅಷ್ಠಗಿ

ಶಹಾಬಾದ: ಕನ್ನಡ ಕಾವ್ಯಲೋಕಕ್ಕೆ ವಿಶಿ? ಶೈಲಿ ಮತ್ತು ಲಯಗಳ ಮೂಲಕ ನಾದದ ಗುಂಗು ಹಿಡಿಸಿದ ಶಬ್ದ ಗಾರುಡಿಗ, ವರಕವಿ, ದ.ರಾ.ಬೇಂದ್ರೆಯವರು ಕನ್ನಡ ಸಾರಸ್ವತ ಲೋಕದ ಮಿನುಗುತಾರೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೋ. ಯಶವಂತರಾಯ ಅಷ್ಠಗಿ ಹೇಳಿದರು.

ಅವರು ಗುರುವಾರ ಕಸಾಪ ತಾಲೂಕಾ ಘಟಕದ ವತಿಯಿಂದ ಆಯೋಜಿಸಲಾದ ಮಾಲಗತ್ತಿ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಜ್ಞಾನ ಪೀಠ ಗಾರುಡಿಗರು ಉಪನ್ಯಾಸ ಮಾಲಿಕೆಯ ಅಡಿಯಲ್ಲಿ ವರಕವಿ ದ.ರಾ.ಬೇಂದ್ರೆಯವರ ಬದುಕು-ಬರಹ ಕುರಿತು ಉಪನ್ಯಾಸ ಮಾತನಾಡಿದರು.

ಬೇಂದ್ರೆಯವರು ತಮ್ಮ ಕಾವ್ಯ ಶಕ್ತಿಯಿಂದ ಉತ್ಸಾಹದ ಚಿಲುಮೆಯನ್ನುಕ್ಕಿಸಿ ನೊಂದ ಜೀವಕ್ಕೆ ಸಾಂತ್ವನ ನೀಡಿ, ಪ್ರೀತಿ ಪ್ರೇಮಗಳನ್ನು ಮೂಡಿಸಿ, ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದವರು.ಈ ನೆಲದ ಭಾ? ಸೊಗಡನ್ನು ಕಾವ್ಯಕ್ಕೆ ತಂದ ಅಪ್ಪಟ ದೇಸಿ ಕವಿಯೆಂದರೆ ಬೇಂದ್ರೆಯವರು. ಜೀವನದಲ್ಲಿ ನೊಂದು ಬೆಂದು ಬಳಲಿದವರಾದರೂ ಕಾವ್ಯದ ಮೂಲಕವಾಗಿ ಮಿಂಚಿದ ರತ್ನವೆನಿಸಿದ್ದಾರೆ. ಜೀವನದಲ್ಲಿ ಮಕ್ಕಳ ಸಾವು,ಪತ್ನಿಯ ಸಾವು ಬೇಂದ್ರೆಯವರಿಗೆ ಅತೀವ ದುಃಖವನ್ನುಂಟು ಮಾಡಿದವು. ಆದರೂ ಇದ್ಯಾವುದಕ್ಕೂ ದೃತಿಗೆಡದೆ ಕೊರತೆಯ ಬದುಕಿನಲ್ಲಿಯೇ ಅಪಾರವಾದ ಶ್ರೇ? ಸಾಹಿತ್ಯ ಸಂಪತ್ತನ್ನು ನಿರ್ಮಾಣ ಮಾಡಿದ ಹೆಗ್ಗಳಿಕೆ ಬೇಂದ್ರೆಯವರಿಗೆ ಸಲ್ಲುತ್ತದೆ.
ಅವರು ಕ?ಗಳ ಕುಲುಮೆಯಲ್ಲಿ ಅರಳಿ ನಿಂತ ಅಪೂರ್ವ ಪ್ರತಿಭೆ. ಬೇಂದ್ರೆ ಅವರ ಮಾತೃಭಾ? ಮರಾಠಿ ಆದರೂ ಕನ್ನಡ ಸಾಹಿತ್ಯಕ್ಕೆ ನಿರೀಕ್ಷೆಗೂ ಮೀರಿದ ಕೊಡುಗೆ ನೀಡಿ ಗಮನ ಸೆಳೆದಿದ್ದಾರೆ.

ಕಸಾಪ ತಾಲೂಕಾಧ್ಯಕ್ಷ ಶರಣಬಸಪ್ಪ ಕೋಬಾಳ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೇಂದ್ರೆಯವರು ನಮ್ಮಿಂದ ಭೌತಿಕವಾಗಿ ದೂರವಾಗಿದ್ದರೂ, ಕಾವ್ಯದ ಮೂಲಕ ಇನ್ನೂ ಜೀವಂತ ವಾಗಿದ್ದಾರೆ. ಅವರ ನೆನಪು ನಮ್ಮಲ್ಲಿ ನಾಡು ನುಡಿಯ ಅಭಿಮಾನವನ್ನು ಉಕ್ಕಿಸಲಿ, ಕನ್ನಡನಾಡು ನುಡಿ ಅಭಿವೃದ್ಧಿ ಹೊಂದಲಿ, ಸತ್ವಪೂರ್ಣ ಸಾರ್ಥಕ ಬದುಕು ನಮ್ಮೆಲ್ಲರದಾಗಲಿ ಎಂದು ಹೇಳಿದರು.

ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗ ಬಾಳಿ ಮಾತನಾಡಿದರು. ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಚಿದಾನಂದ ಕುಡ್ಡನ, ಸ್ವಾಸ್ತಿಕ ಭಂಡಾರಿ, ಮುಖ್ಯಗುರುಮಾತೆ ಶಕುಂತಲಾ ಪಾಟೀಲ, ಬಸವರಾಜ ಬಾಳಕ್,ಚಂದ್ರಶೇಖರ,ಜಿಲ್ಲಾ ಕಸಾಪದ ರಾಜೇಂದ್ರ ಮಾಡಬೂಳ, ಕಾಳಗಿ ಕಸಾಪ ತಾಲೂಕಾಧ್ಯಕ್ಷ ಸಂತೋಷ ಕುಡ್ಡಳ್ಳಿ ವೇದಿಕೆ ಮೇಲೆ ಇದ್ದರು. ಬಸವರಾಜ ಮದ್ರಕಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜಕುಮಾರ ನಿರೂಪಿಸಿದರು. ಮಲ್ಲಿಕಾರ್ಜುನ ಇಟಗಿ ವಂದಿಸಿದರು.

ಅವರು ನರಬಲಿ ಶಿರ್ಷಿಕೆ ಕವಿತೆಯನ್ನು ಬರೆದು ಬ್ರಿಟಿ?ರಿಂದ ರಾಷ್ಟ್ರದ್ರೋಹದ ಪಟ್ಟದ ಜೊತೆಗೆ ಶಿಕ್ಷೆ ಅನುಭವಿಸುವಂತಾಯಿತು. ಆದರೂ ಅವರೆಂದಿಗೂ ತಮ್ಮ ತತ್ವ ಆದರ್ಶಗಳ ವಿಚಾರದಲ್ಲಿ ರಾಜಿಯಾಗಲಿಲ್ಲ ಎಂದು ತಿಳಿಸಿದರು- ಪ್ರೋ. ಯಶವಂತರಾಯ ಅಷ್ಠಗಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

5 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

5 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

7 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

7 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

7 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

8 hours ago