ಬಿಸಿ ಬಿಸಿ ಸುದ್ದಿ

ಕೋಲಿ ಸಮಾಜ ಎಸ್‍ಟಿಗೆ ಸೇರಿಸಲು ಆಗ್ರಹಿಸಿ ಸೆ. 16ರಂದು ಅರೆಬೆತ್ತಲೆ ಮೆರವಣಿಗೆ

ಶಹಾಬಾದ: ರಾಜ್ಯ ಬಿಜೆಪಿ ಸರ್ಕಾರವು ಕೋಲಿ ಸಮಾಜದ ಪರ್ಯಾಯ ಪದಗಳನ್ನು ಎಸ್‍ಟಿಗೆ ಸೇರಿಸುವುದಾಗಿ ಪದೇ ಪದೇ ಹುಸಿ ಭರವಸೆಗಳನ್ನು ನೀಡಿ ವಂಚಿಸುತ್ತಿರುವುದನ್ನು ಖಂಡಿಸಿ ಸೆಪ್ಟೆಂಬರ್ 16ರಂದು ಕಲಬುರಗಿ ನಗರದಲ್ಲಿ ಅರೆಬೆತ್ತಲೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಟಿ. ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಲಚ್ಚಪ್ಪ ಎಸ್. ಜಮಾದಾರ್ ಅವರು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ನಗರದ ಜಗತ್ ವೃತ್ತದಿಂದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಪ್ರತಿಭಟನಾ ಪತ್ರವನ್ನು ಸಲ್ಲಿಸಲಾಗುವುದು ಎಂದರು.
ಚುನಾವಣೆಯ ಸಂದರ್ಭದಲ್ಲಿ ಪದೇ ಪದೇ ಕೋಲಿ ಕಬ್ಬಲಿಗ ಮತ್ತು ತಳವಾರ್ ಸಮಾಜಗಳಿಗೆÉ ಎಸ್‍ಟಿಗೆ ಸೇರಿಸುತ್ತೆವೆ ಎಂದು ಹೇಳಿಕೆ ನೀಡಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಡಾ. ಉಮೇಶ್ ಜಾಧವ್ ಸೇರಿದಂತೆ ಬಿಜೆಪಿ ನಾಯಕರು ನೀಡಿದ ಭರವಸೆ ಹುಸಿಹಾಗಿದ್ದು, ಸಮಾಜಕ್ಕೆ ಸುಳ್ಳು ಹೇಳಿ ಮೋಸ ಮಾಡಲಾಗುತ್ತಿದೆ ಎಂದು ಅವರು ಆಕ್ರೋಶ ಹೊರಹಾಕಿದರು.

ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಮಾಜಕ್ಕೆ ಮೋಸ ಮಾಡಿ ಮತ ಪಡೆದ ಬಿಜೆಪಿ, ಲೋಕಸಭಾ ಚುನಾವಣೆಯಲ್ಲಿಯೂ ಸಹ ಅದೇ ಸುಳ್ಳು ಭರವಸೆ ನೀಡಲಾಗಿದೆ. ಕೆಲವೇ ಹೊತ್ತಿನಲ್ಲಿ ಎಸ್‍ಟಿ ಎಸ್‍ಟಿಗೆ ಪ್ರಮಾಣಪತ್ರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಅವರೂ ಸಹ ಹೇಳಿಕೆ ನೀಡಿದ್ದು ಸುಳ್ಳಾಗಿದೆ. ಚುನಾವಣೆಯಲ್ಲಿ ಗೆದ್ದ ನಂತರ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡಿದ್ದಾರೆ ಎಂದು ಅವರು ಕಿಡಿಕಾರಿದರು.

ಬೇಡಿಕೆಯನ್ನು ಶೀಘ್ರ ಈಡೇರಿಸಬೇಕು ಎಂದು ಹಮ್ಮಿಕೊಂಡಿರುವ ಅರೆಬೆತ್ತಲೆ ಮೆರವಣಿಗೆಯಲ್ಲಿ ಸಮಾಜದ ಚಿಂತಕರು, ಪ್ರಗತಿಪರರು ಹಾಗೂ ವಿಚಾರವಂತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕೋಲಿ ಸಮಾಜದ ತಾಲೂಕಾಧ್ಯಕ್ಷ ಶಿವಕುಮಾರ ತಳವಾರ, ಹೋರಾಟ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಫಿರೋಜಾಬಾದ ಕಲಬುರಗಿ ನಗರಾಧ್ಯಕ್ಷ ಶಿವಕುಮಾರ ಯಾಗಾಪೂರ್,ಪಿಂಟು ಜಮಾದಾರ, ಕೋಲಿ ಸಮಾಜದ ಉಪಾಧ್ಯಕ್ಷ ಶಿವಕುಮಾರ ಬುರ್ಲಿ, ಪ್ರಧಾನ ಕಾರ್ಯದರ್ಶಿ ಬೆಳ್ಳೆಪ್ಪ ಖಣದಾಳ, ದೇವೆಂದ್ರ ಕಾರೊಳ್ಳಿ, ಲೋಹಿತ ಮಳಖೇಡ,ರಾಜು ಆಡಿನ್, ನಾಗರಾಜ ಯಡ್ರಾಮಿ, ಮೌನೇಶ ಕೊಡ್ಲಿ, ಭಾಗಪ್ಪ ಕೊಡಸಾ, ರಾಜು ಸಣಮೋ, ರಾಜು ಮರಗೋಳ, ಶರಣು ಕೊಡಸಾ ಸೇರಿದಂತೆ ಅನೇಕರು ಇದ್ದರು.

emedialine

Recent Posts

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

3 mins ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

7 mins ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

9 mins ago

ಶಾಸಕ ಅಲ್ಲಮಫ್ರಬು ಪಾಟೀಲರಿಂದ ಕಂಪ್ಯೂಟರ್ ಪ್ರಮಾಣ ಪತ್ರ ವಿತರಣೆ

ಕಲಬುರಗಿ: ನಗರದ ಬಸವ ಸಿರಿ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಭಾನುವಾರ ಮುಂಜಾನೆ. 11 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷ ಮತ್ತು…

15 mins ago

ತೊಗರಿ ಮತ್ತು ಹತ್ತಿ ಬೆಳೆಗಳ ಸಸ್ಯ ಸಂರಕ್ಷಣಾ ತರಬೇತಿ 18ಕ್ಕೆ

ಕಲಬುರಗಿ; ಜಿಲ್ಲೆಯಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹತ್ತಿ, ಉದ್ದು, ಹೆಸರು ಮತ್ತು ಸೋಯಾಬಿನ್ ಬೆಳೆಯಲಾಗಿದ್ದು, ಇದರಲ್ಲಿ ಕಂಡು ಬರುವ ಹುಳು,…

32 mins ago

ಡೆಂಗ್ಯೂ ,ಝಿಕಾ, ಚಿಕನ್ ಗುನ್ಯಾ ತಡೆಗಟ್ಟಲು ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

  ಕಲಬುರಗಿ : "ಜಿಲ್ಲೆಯಲ್ಲಿ ಡೆಂಗಿ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝಿಕಾ ವೈರಾಣು ಸೋಂಕು, ಚಿಕನ್ ಗುನ್ಯಾ…

1 hour ago