ಬಿಸಿ ಬಿಸಿ ಸುದ್ದಿ

ಬಿ.ಡಿ. ಜತ್ತಿ ಜಯಂತಿ ಸರ್ಕಾರವೇ ಆಚರಿಸುವಂತಾಗಲಿ

ಬಸವಕಲ್ಯಾಣದಲ್ಲಿ ಪರುಷ ಕಟ್ಟೆ ಕಟ್ಟಡ ಕಾಮಗಾರಿ ನಡೆದಿದ್ದು, ಇನ್ನು 4 ತಿಂಗಳಯೊಳಗಾಗಿ ಕಟ್ಟಡ ಪೂರ್ಣಗೊಳ್ಳಲಿದೆ. ಜತ್ತಿ ಅವರು ಮೈಗೂಡಿಸಿಕೊಂಡ ಬಸವ ತತ್ವ, ವಿಚಾರ, ಆಚಾರ ಸ್ಮರಿಸುವಂತಹದ್ಧು. ಮುಂದಿನ ಐದು ವರ್ಷಗಳಲ್ಲಿ 25 ಲಕ್ಷ ಬಸವಾಭಿಮಾನಿಗಳು ಬಸವಕಲ್ಯಾಣಕ್ಕೆ ಕರೆತರುವ ಗುರಿ ಇಟ್ಟುಕೊಳ್ಳಲಾಗಿದೆ. -ಬಸವರಾಜ್ ಪಾಟೀಲ್ ಸೇಡಂ, ರಾಜ್ಯಸಭೆ ಮಾಜಿ ಸದಸ್ಯ

ಕಲಬುರಗಿ: ಹಳ್ಳಿಗಾಡಿನ ಕೃಷಿ ಕುಟುಂಬದಲ್ಲಿ ಹುಟ್ಟಿದ ಹುಡುಗನೊಬ್ಬ ದೇಶದ ಅತ್ಯುನ್ನತ ರಾಷ್ಟ್ರಪತಿ ಹುದ್ದಗೇರುವುದು ಸಣ್ಣ ಮಾತಲ್ಲ. ಆದರೆ ಬಿ.ಡಿ. ಜತ್ತಿ ಅಂತಹ ಮೇರು ಸಾಧನೆ ಮಾಡಿದ್ದರು ಎಂದು ಬೆಂಗಳೂರಿನ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಬೇಸರ ವ್ಯಕ್ತಪಡಿಸಿದರು.

ಇಲ್ಲಿನ ಅನುಭವ ಮಂಟಪದಲ್ಲಿ ಬಸವ ಸಮಿತಿ, ಡಾ. ಬಿ.ಡಿ. ಜತ್ತಿ ಅಧ್ಯಯನ ಮತ್ತು ಸಂಶೋಧನ ಕೇಂದ್ರ ಆಶ್ರಯದಲ್ಲಿ ಶನಿವಾರ ಸಂಜೆ ನಡೆದ ಡಾ. ಬಿ.ಡಿ. ಜತ್ತಿಯವರ 110ನೇ ಜನ್ಮದಿನೋತ್ಸವ ಅಂಗವಾಗಿ ಸಂಸ್ಥಾಪನಾ ದಿನಾಚರಣೆ, ಆನ್‍ಲೈನ್ ಅರಿವಿನ ಮನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು, ಬಸವತತ್ವಾಧಾರಿತ ಆಡಳಿತ ಮತ್ತು ಬದುಕು ನಡೆಸಿದ ಜತ್ತಿ ಅವರು ನನಗೆ ನಾನೆ ಮಾದರಿಯಾಗಿದ್ದರು ಎಂದು ತಿಳಿಸಿದರು.

ಇದೇ ವೇಳೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರನ್ನು ಸನ್ಮಾನಿಸಲಾಯಿತು. ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಮಾತನಾಡಿ, ರಾಜ್ಯ ಸರ್ಕಾರದಿಂದಲೇ ಬಿ.ಡಿ. ಜತ್ತಿ ಜಯಂತಿ ಘೋಷಣೆ ಆಗಿ ಅನುಷ್ಠಾನಕ್ಕೆ ಬರಬೇಕು. ಬಸವಕಲ್ಯಾಣದಲ್ಲಿ ಜತ್ತಿ ಸಂಶೋಧನಾ ಕೇಂದ್ರ ಆರಂಭಿಸಬೇಕು. ಆದರೆ ಇಲ್ಲಿವರೆಗೆ ಆಳಿದ ಸರ್ಕಾರಗಳು ನಿರ್ಲಕ್ಷ್ಯಿಸಿರುವುದು ಖೇದದ ಸಂಗತಿ ಎಂದರು. ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕøತಿಕ ಸಂಘದ ಅಧ್ಯಕ್ಷ ಬಸವರಾಜ್ ಪಾಟೀಲ್ ಸೇಡಂ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಮುಖರಾದ ಡಾ. ಜಯಶ್ರೀ ದಂಡೆ, ಅಲ್ಲಮಪ್ರಭು ಖೂಬಾ, ರಾಜೇಂದ್ರ ಖೂಬಾ, ಸಂಗಮನಾಥ ರೇವತಗಾಂವ್, ಡಾ. ಶಿವರಂಜನ ಸತ್ಯೆಂಪೇಟೆ, ಸುರೇಶ ಬಡಿಗೇರ, ಜಯತೀರ್ಥ ಪಾಟೀಲ, ಬಿ.ವಿ. ಚಕ್ರವರ್ತಿ, ದೇವಿಂದ್ರ ಆವಂಟಿ ವೇದಿಕೆಯಲ್ಲಿದ್ದರು. ಬಸವ ಸಮಿತಿ ಅಧ್ಯಕ್ಷೆ ಡಾ. ವಿಲಾಸವತಿ ಖೂಬಾ ವಂದಿಸಿದರು.

emedialine

Recent Posts

ಮಕ್ಕಳ ಸೃಜನಶೀಲತೆ ಅನಾವರಣಗೊಳಿಸಿದ ಮಣ್ಣೆತ್ತಿನ ಸ್ಪರ್ಧೆ

ರಾವೂರ: ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಮಣ್ಣೆತ್ತಿನ ಸ್ಪರ್ಧೆಯ ಅಂಗವಾಗಿ ಹಮ್ಮಿಕೊಂಡಿದ್ದ ಮಣ್ಣೇತ್ತು ಮಾಡುವ ಸ್ಪರ್ಧೆಯಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು…

2 hours ago

ವಾಡಿ: ಕುಸ್ತಿ ಪಂದ್ಯಾವಳಿ: 50ಗ್ರಾಂ.ಬೆಳ್ಳಿ ಕಡಗ ವಿಜೇತ ಮಂಜುನಾಥ

ಇಂಗಳಗಿ ಹಜರತ್ ಸೈಯದ್ ಶೇರ್.ಖಾನ್.ವಲಿ ದುರ್ಗಾದ 621ನೇ ಜಾತ್ರಾ ಮಹೋತ್ಸವ ವಾಡಿ: ಪಟ್ಟಣ ಸಮೀಪದ ಇಂಗಳಗಿ ಗ್ರಾಮದ ಹಜರತ್ ಸೈಯದ್…

2 hours ago

ಹಿರಿಯ ನಾಗರಿಕರ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಅಗತ್ಯ: ಅರ್ಥಶಾಸ್ತ್ರಜ್ಞ ವಿಜಯ್ ದೇಶಮುಖ್

ಕಲಬುರಗಿ: ದೇಶದ ಹಿರಿಯ ನಾಗರಿಕರನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಿಸಿ ಅವರ ಕಲ್ಯಾಣಕ್ಕಾಗಿ ಕೇಂದ್ರ ಸರಕಾರವು ಹಿರಿಯ ನಾಗರಿಕರ ಸಚಿವಾಲಯವನ್ನು…

5 hours ago

ಪ್ರಣವ್ ಮೆಂಡನ್ ಫಿಸಿಯೋಥೆರಪಿ ಪದವಿ ಪ್ರದಾನ

ಕಲಬುರಗಿ : ಜಿಲ್ಲಾ ಹೋಟೆಲ್ ಅಸೋಸಿಯೇಷನ್ ನ ಕಾರ್ಯದರ್ಶಿ ಹಾಗೂ ವಿಮಾನ ನಿಲ್ದಾಣ ಪ್ರಾಧಿಕಾರದ ಸದಸ್ಯರಾದ ನರಸಿಂಹ ಮೆಂಡನ್ ಅವರ…

5 hours ago

ಕನ್ನಡ ಸಾಹಿತ್ಯಕ್ಕೆ ಕಮಲ ಹಂಪನಾ ಕೊಡುಗೆ ಅಪಾರ: ಹಣಮಂತ್ರಾಯ ಕಾಳನೂರ

ಯಾದಗಿರಿ : ಆಧುನಿಕ ಸಾಹಿತ್ಯದ ಪ್ರಕಾರಗಳಾದ ನವ್ಯ,ನವೋದಯ,ಪ್ರಗತಿಶೀಲ,ದಲಿತ ಬಂಡಾಯದ ಕಾವ್ಯ,ಕಥೆ,ಕಾದಂಬರಿ ಹಾಗೂ ನಾಟಕ ಮುಂತಾದ ಪ್ರಕಾರಗಳಲ್ಲಿ ಸ್ತ್ರೀ ಸಂವೇದನೆಗೆ ವಿಶೇಷವಾದ…

6 hours ago

ನಾಡೋಜ ಪಾಟೀಲ್ ಪುಟ್ಟಪ್ಪ ಸ್ಮಾರಕ ಮಾಧ್ಯಮ ಪ್ರಶಸ್ತಿ ಪ್ರದಾನ: ಜುಲೈ 7ರಂದು

ಬೆಂಗಳೂರು: ಜಗತ್ತಿನ ಪ್ರಚಲಿತ ವಿದ್ಯಮಾನಗಳ ಮಾಹಿತಿ ನೀಡುವ ಪತ್ರಕರ್ತರು ಹಗಲುರಾತ್ರಿ ಎನ್ನದೇ ಕಷ್ಟವಾದರೂ ಇಷ್ಟಪಟ್ಟು ವರದಿ ಮಾಡುವ ಮಾಧ್ಯಮ ಮಿತ್ರರಿಗೆ,…

10 hours ago