ಕೋವಿಡ್ ಮುಂಚೆ ನಿಲ್ಲುತ್ತಿದ್ದ ರೈಲುಗಳನ್ನು ನಿಲುಗಡೆ ಮಾಡಬೇಕೆಂದು ಆಗ್ರಹಿಸಿ ಮನವಿ

ಶಹಾಬಾದ: ಕೋವಿಡ್‌ಕ್ಕಿಂತಲೂ ಮುಂಚೆ ನಿಲ್ಲುತ್ತಿದ್ದ ಎಲ್ಲಾ ರೈಲುಗಳನ್ನು ಶಹಾಬಾದ ರೇಲ್ವೆ ನಿಲ್ದಾಣದಲ್ಲಿ ನಿಲ್ಲಬೇಕೆಂದು ಆಗ್ರಹಿಸಿ ಮಂಗಳವಾರ ಶಹಾಬಾದ ತಾಲೂಕಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ರೇಲ್ವೆ ನಿಲ್ದಾಣ ಅಧಿಕಾರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಹಾಬಾದ ತಾಲೂಕಾ ಹೋರಾಟ ಸಮಿತಿ ಅಧ್ಯಕ್ಷ ಬಸವರಾಜ ಮಯೂರ, ನಗರದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚಿನ ಜನರು ವಾಸಿಸುತ್ತಿದ್ದಾರೆ.ಇಲ್ಲಿನ ಜನರಿಗೆ ಕಲಬುರಗಿಗೆ, ಸೋಲಾಪೂರಗೆ ಹೋಗಲೂ ತೊಂದರೆಯಾಗುತ್ತಿದೆ. ನೌಕರಸ್ಥರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಎಲ್ಲಿಲ್ಲದ ತೊಂದರೆಯಾಗುತ್ತಿದೆ. ಕೇವಲ ಕಡಿಮೆ ಜನಸಂಖ್ಯೆ ಹೊಂದಿರುವ ಚಿತ್ತಾಪೂರ ರೇಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಯಾಗುತ್ತಿದೆ.

ಅದೇ ಒಂದು ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ನಗರದಲ್ಲಿ ರೈಲು ನಿಲುಗಡೆಯಾಗುತ್ತಿಲ್ಲ.ಈಗಾಗಲೇ ಹಲವು ಬಾರಿ ಪ್ರತಿಭಟನೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಶಾಸಕ,ಸಂಸದರಿಗೆ ಮನವಿ ಸಲ್ಲಿಸಿದ್ದೆವೆ.ಆದರೂ ಯಾವುದೇ ಕ್ರಮಕೈಗೊಂಡಿಲ್ಲ.ಆದ್ದರಿಂದ ಕೂಡಲೇ ರೈಲು ನಿಲ್ಲಿಸಲು ಕ್ರಮಕೈಗೊಳ್ಳಬೇಕು.ಇಲ್ಲದಿದ್ದರೇ ಇದೇ ಸೆಪ್ಟೆಂಬರ್ ೧೭ರಂದು ನಗರದ ರೇಲ್ವೆ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ಮಾಡುತ್ತೆವೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಶೇಖ ಬಾಬು ಉಸ್ಮಾನ,ನರಸಿಂಹಲೂ ರಾಯಚೂರಕರ್, ಭೀಮಾಶಂಕರ ಕಾಂಬಳೆ,ಪಿನಿತ್ ಹಳ್ಳಿ, ಮರ್ಗು,ನಾಗಪ್ಪ ರಾಯಚೂರಕರ್,ರಾಮು,ಶಿವಶಾಲಕುಮಾರ ಪಟ್ಟಣಕರ್, ಅಫ್ರೋಜ್, ಕಿರಣ ಚವ್ಹಾಣ ಇತರರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420