ಸುರಪುರ: ನಗರದ ಹಸನಾಪುರ ಪೆಟ್ರೋಲ್ ಬಂಕ್ ಬಳಿಯಲ್ಲಿನ ಡಾ:ಬಿ.ಆರ್ ಅಂಬೇಡ್ಕರ್ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸುರಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಸಲಾಯಿತು.
ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಯಾದಗಿರಿ,ಕ್ಷೇತ್ರ ಶಿಕ್ಷಣಾಧಿಕಾರಿಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸುರಪುರ ಕ್ಲಸ್ಟರ್ ಮಟ್ಟದ ವಿವಿಧ ಶಾಲೆಗಳ ಮಕ್ಕಳು ಭಾಗವಹಿಸಿ ಕಲಾ,ಸಾಂಸ್ಕೃತಿಕ ಪ್ರದರ್ಶನ ನೀಡಿದರು.